ಬೆಂಗಳೂರಿನ ಕೆಆರ್ ಮಾರುಕಟ್ಟೆಯಲ್ಲಿ ವ್ಯಾಪಾರ, ವಹಿವಾಟು ಮತ್ತೆ ಶುರು
ಬೆಂಗಳೂರು, ಸೆಪ್ಟೆಂಬರ್ 1: ಕೊರೊನಾ ನಿಯಂತ್ರಿಸುವ ದೃಷ್ಟಿಯಿಂದ ಕಳೆದ ಐದಾರು ತಿಂಗಳಿಂದ ಮುಚ್ಚಲಾಗಿದ್ದ ಕೆಆರ್ ಮಾರುಕಟ್ಟೆಯಲ್ಲಿ ಮತ್ತೆ ವ್ಯಾಪಾರ ಶುರುವಾಗಿದೆ.
Recommended Video
ಸೋಮವಾರ ರಾತ್ರಿಯಿಂದಲೇ ವ್ಯಾಪಾರ, ಚಟುವಟಿಕೆ ಮತ್ತೆ ಬಿರುಸು ಪಡೆದುಕೊಂಡಿದೆ. ಬೆಂಗಳೂರಿನ ಸುತ್ತಮುತ್ತಲ ಭಾಗಗಳಿಂದ ರೈತರು ತಾವು ಬೆಳೆದ ತರಕಾರಿ, ಸೊಪ್ಪು ಹಾಗೂ ಹೂವುಗಳನ್ನು ಹೊತ್ತು ಮಾರುಕಟ್ಟೆಗೆ ಆಗಮಿಸಿದ್ದರು.
ಸಗಟು ವ್ಯಾಪಾರಿಗಳಿಗೂ ಎಂದಿನಂತೇ ವ್ಯಾಪಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.ಮೊದಲ ಹಂತದಲ್ಲಿ ಮಾರುಕಟ್ಟೆಗಳ ಮಳಿಗೆಗಳಲ್ಲಿ ಮಾತ್ರ ವ್ಯಾಪಾರವಹಿವಾಟಿಗೆ ಅವಕಾಶ ನೀಡಲಾಗಿತ್ತು. ಬೀದಿ, ರಸ್ತೆ ಬದಿ ವ್ಯಾಪಾರ ಮಾಡದಂತೆ ಸೂಚಿಸಿದ್ದು, ವ್ಯಾಪಾರಿಗಳು ಇದಕ್ಕೆ ಒಪ್ಪಿಗೆ ನೀಡಿದ್ದಾರೆ.

ಇನ್ನೂ ಮಾರುಕಟ್ಟೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಸ್ಯಾನಿಟೈಸರ್ ಅಳವಡಿಕೆ ಸೇರಿದಂತೆ ನಿಯಮ ಪಾಲನೆ ಮೇಲೆ ನಿಗಾ ವಹಿಸಲು 15 ಮಂದಿ ಮಾರ್ಷಲ್ಗಳನ್ನು ನಿಯೋಜಿಸಲಾಗಿದೆ.
ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಕಳೆದ ಐದು ತಿಂಗಳಿನಿಂದ ಮಾರುಕಟ್ಟೆ ಮುಚ್ಚಿದ್ದರಿಂದ ಈ ಅವಧಿಯಲ್ಲಿ ವ್ಯಾಪಾರ-ವಹಿವಾಟು ನಡೆದಿರಲಿಲ್ಲ. ಹಾಗಾಗಿ ಈ ಅವಧಿಗೆ ಮಳಿಗೆಗಳ ವ್ಯಾಪಾರಿಗಳಿಂದ ಬಾಡಿಗೆ ಪಡೆಯುವ ಅಥವಾ ರಿಯಾಯ್ತಿ ನೀಡುವ ಬಗ್ಗೆ ಈವರೆಗೆ ಯಾವುದೇ ತೀರ್ಮಾನವಾಗಿಲ್ಲ.
ಸ್ಮಾರ್ಟ್ ಸಿಟಿ ಯೋಜನೆಯಡಿ ಮೂರು ಕೋಟಿ ರೂ. ವೆಚ್ಚದಲ್ಲಿ ಕೆಆರ್ ಮಾರುಕಟ್ಟೆ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ಮಾರುಕಟ್ಟೆ ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ಅಭಿವೃದ್ಧಿಗೊಳಿಸಲಾಗುವುದು.
ಮಾರುಕಟ್ಟೆಯಲ್ಲಿ ಅಗ್ನಿ ಅವಘಡ ತಡೆಯುವ ನಿಟ್ಟಿನಲ್ಲಿ ಅಗ್ನಿ ನಿರೋಧಕ ವ್ಯವಸ್ಥೆ ಕಲ್ಪಿಸಲು ತೀರ್ಮಾನಿಸಲಾಗಿದೆ. ಮಾರುಕಟ್ಟೆಯ ಜಂಕ್ಷನ್ ಸಹ ಅಭಿವೃದ್ಧಿಪಡಿಸುವ ಚರ್ಚೆಗಳು ನಡೆದಿವೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Lockdown: ಭಾರತದಲ್ಲಿ ಲಾಕ್ಡೌನ್ ಇಲ್ಲ: ವದಂತಿಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ











Click it and Unblock the Notifications