Namma Metro: ಜೂನ್ ಅಂತ್ಯದೊಳಗೆ ಕೆಆರ್ ಪುರಂ-ಬೈಯಪ್ಪನಹಳ್ಳಿ ಮಾರ್ಗ ಸಿದ್ಧ- ಮಾಹಿತಿ, ವರದಿ, ವಿವರ ತಿಳಿಯಿರಿ
ಬೆಂಗಳೂರು, ಮಾರ್ಚ್ 27: ವೈಟ್ಫೀಲ್ಡ್ ( Whitefield ) ಮತ್ತು ಕೃಷ್ಣರಾಜಪುರಂ ( KR Puram ) ನಡುವಿನ 13.71-ಕಿಮೀ ನಮ್ಮ ಮೆಟ್ರೊ ಮಾರ್ಗವು ಪ್ರಧಾನಿ ನರೇಂದ್ರ ಮೋದಿ ( Narendra Modi ) ಅವರಿಂದ ಯಶಸ್ವಿಯಾಗಿ ಉದ್ಘಾಟನೆಯಾಗಿದೆ. ಕೆಆರ್ ಪುರಂ ಮತ್ತು ಬೈಯಪ್ಪನಹಳ್ಳಿಯನ್ನು ಸಂಪರ್ಕಿಸುವ ಮೆಟ್ರೊ ಮಾರ್ಗವು ಜೂನ್ ಅಂತ್ಯದ ವೇಳೆಗೆ ಸಿದ್ಧವಾಗಲಿದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ( BMRCL ) ಮಾಹಿತಿ ನೀಡಿದೆ.
ವೈಟ್ಫೀಲ್ಡ್ ( ಕಾಡುಗೋಡಿ ) - ಕೆಆರ್ ಪುರಂ ಮೆಟ್ರೋ ಮಾರ್ಗವನ್ನು ತೆರೆಯುವುದರೊಂದಿಗೆ, ಬೆಂಗಳೂರಿನ 'ಮೊದಲ ಐಟಿ ಕಾರಿಡಾರ್' ಕಾರ್ಯಾರಂಭ ಮಾಡಿದೆ. ವೈಟ್ಫೀಲ್ಡ್ ಪ್ರದೇಶವು ಮೆಟ್ರೋ ನೆಟ್ವರ್ಕ್ಗೆ ಸಂಪರ್ಕಗೊಂಡಿದೆ ಎಂದು ಹೇಳಲಾಗಿದ್ದರೂ, ವಾಸ್ತವದಲ್ಲಿ, ಈ ಮಾರ್ಗವು ಪ್ರಯಾಣಿಕರನ್ನು ಪ್ರಮುಖ ಏರಿಯಾಗಳಿಗೆ ಸಂಪರ್ಕಿಸುತ್ತಿಲ್ಲ ಎಂಬ ಬಗ್ಗೆ ನಾಗರಿಕರು ಬೇಸರ ವ್ಯಕ್ತಪಡಿಸಿದ್ದಾರೆ. ವೈಟ್ಫಿಲ್ಡ್ ಹಾಗೂ ಕೆಆರ್ ಪುರಂ ಮೆಟ್ರೋ ಮಾರ್ಗವು ಬೈಯಪ್ಪನಹಳ್ಳಿ ಮೆಟ್ರೋಗೆ ಸಂಪರ್ಕಿಸಬೇಕೆಂಬುದು ಪ್ರಯಾಣಿಕರ ಒತ್ತಾಯವಾಗಿದೆ.

ಈ ಮಿಸ್ಸಿಂಗ್ ಲಿಂಕ್ ಜೂನ್ ನಂತರ ಕಾರ್ಯನಿರ್ವಹಿಸುತ್ತದೆ ಎಂದು ಬಿಎಂಆರ್ಸಿಎಲ್ ಭರವಸೆ ನೀಡಿದೆ. ಈ ಮೂಲಕ ಪ್ರಯಾಣಿಕರು ವೈಟ್ಫಿಲ್ಡ್ನಿಂದ ಕೆಂಗೇರಿಗೆ ಸುಮಾರು 34 ನಿಲ್ದಾಣಗಳನ್ನು ಒಳಗೊಳ್ಳಲು ಸಾಧ್ಯವಾಗುತ್ತದೆ. ಕೆಂಗೇರಿಯಿಂದ ಚಲ್ಲಘಟ್ಟದವರೆಗಿನ ಕೊನೆಯ 2 ಕಿ.ಮೀ ಉದ್ದದ ಕಾಮಗಾರಿಯೂ ಈ ವರ್ಷ ಪೂರ್ಣಗೊಳ್ಳಲಿದೆ. ಇದರೊಂದಿಗೆ ಬೆಂಗಳೂರು ಮೆಟ್ರೋ ಸಂಪೂರ್ಣ ನೇರಳೆ ಮಾರ್ಗ ಕಾರ್ಯಾರಂಭ ಮಾಡಲಿದೆ.
ಕೆ ಆರ್ ಪುರಂ- ಬೈಯಪ್ಪನಹಳ್ಳಿ ಮೆಟ್ರೊ ಮಾರ್ಗದ ವಿಸ್ತೃತ ಯೋಜನಾ ವರದಿ ( ಡಿಪಿಆರ್ ) 2014ರ ಫೆಬ್ರವರಿಯಲ್ಲಿ ಅನುಮೋದನೆಗೊಂಡು 2020ರ ಗಡುವು ನಿಗದಿಪಡಿಸಲಾಗಿತ್ತು. ಆದರೆ ಕಾಮಗಾರಿ ವಿಳಂಬವಾಯಿತು.

ವಿಳಂಬದ ಕಾರಣಗಳ ಬಗ್ಗೆ ಮಾತನಾಡಿರುವ ಪರ್ವೇಜ್, ' ಇದು ಸುಮಾರು 2.5 ವರ್ಷಗಳಷ್ಟು ವಿಳಂಬ. ಇದಕ್ಕೆ ಕಾರಣ ಭೂಸ್ವಾಧೀನ ಪ್ರಕ್ರಿಯಯಲ್ಲಿ ಆದ ತೊಡಕುಗಳು' ಎಂದು ಹೇಳಿದ್ದಾರೆ. ಮರಗಳನ್ನು ಕಡಿಯಲು ಅನುಮತಿಗಳನ್ನು ಪಡೆದುಕೊಳ್ಳುವುದು ಮತ್ತು ಕೋವಿಡ್ - 19 ಪ್ರೇರಿತ ಸಾಂಕ್ರಾಮಿಕ ರೋಗಗಳೂ ಇದಕ್ಕೆ ಕಾರಣವಾಗಿವೆ ಎಂದು ಅಂಜುಮ್ ಪರ್ವೇಜ್ ತಿಳಿಸಿದ್ದಾರೆ.
' ಈ ಕಾರಣಗಳೆಲ್ಲವೂ ನಮ್ಮ ನಿಯಂತ್ರಣವನ್ನು ಮೀರಿವೆ. ಆದಾಗ್ಯೂ, ಅನುಮತಿಗಳು ದೊರೆತ ದಿನದ ನಂತರ ಈ ಕಾಮಗಾರಿಗಳನ್ನು ಪೂರ್ಣಗೊಳಿಸಲು ನಾವು ಹಗಲಿರುಳು ಶ್ರಮಿಸಿದ್ದೇವೆ' ಎಂದು ಅವರು ಹೇಳಿದ್ದಾರೆ.
ಸದ್ಯಕ್ಕೆ ಬೈಯಪ್ಪನಹಳ್ಳಿ ಮತ್ತು ಕೆ ಆರ್ ಪುರಂ ನಡುವಿನ ಸಾರ್ವಜನಿಕ ಪ್ರಯಾಣಕ್ಕೆ ಫೀಡರ್ ಬಸ್ ವ್ಯವಸ್ಥೆಯನ್ನು BMRCL ಮಾಡಿದೆ.

ನಮ್ಮ ಮೆಟ್ರೋಗಾಗಿ ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್
ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್ ಅಥವಾ ಎನ್ಸಿಎಂಸಿ ಕಾರ್ಡ್ ಕುರಿತು ಮಾತನಾಡಿದ ಬಿಎಂಆರ್ಸಿಎಲ್ ಎಂಡಿ ಅಂಜುಮ್ ಪರ್ವೇಜ್, 'ಒಂದು ವಾರದೊಳಗೆ ಕಾರ್ಡ್ ಅನ್ನು ಸಾರ್ವಜನಿಕರು ಬಳಸಬಹುದು' ಎಂದು ಹೇಳಿದ್ದಾರೆ.
'ನಮ್ಮ ಮೆಟ್ರೋ ನೆಟ್ವರ್ಕ್ನಾದ್ಯಂತ ಕಾರ್ಡ್ ಅನ್ನು ಬಳಸಲು ಮೂಲ ಸೌಕರ್ಯವನ್ನು ಸ್ಥಾಪಿಸಲಾಗುತ್ತಿದೆ. ಇದನ್ನು ಹಂತಹಂತವಾಗಿ ಮಾಡಲಾಗುತ್ತದೆ ಮತ್ತು ಶೀಘ್ರದಲ್ಲೇ ಪೂರ್ಣಗೊಳಿಸಲು ನಾವು ಯತ್ನಿಸುತ್ತಿದ್ದೇವೆ. ಇದನ್ನು ಭಾರತದಾದ್ಯಂತ ಸೌಲಭ್ಯ ಹೊಂದಿರುವ ಎಲ್ಲಾ ಮೆಟ್ರೋಗಳು ಮತ್ತು ಬಸ್ಗಳಲ್ಲಿ ಬಳಸಬಹುದು' ಎಂದು ಅವರು ಹೇಳಿದ್ದಾರೆ.
ಆದರೆ, ಬಿಎಂಟಿಸಿ ( ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ) ಮತ್ತು ಕೆಎಸ್ಆರ್ಟಿಸಿ ( ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ) ಇನ್ನೂ ಈ ವ್ಯವಸ್ಥೆಯನ್ನು ಒಪ್ಪಿಕೊಳ್ಳಲು ಸಾಧ್ಯವಾಗಿಲ್ಲ ಎಂದು ತಿಳಿದುಬಂದಿದೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Namma Metro: ಏರ್ಪೋರ್ಟ್ ಮೆಟ್ರೋ ನೀಲಿ ಮಾರ್ಗಕ್ಕೆ ಬರಲಿವೆ 2 ಡ್ರವರ್ಲೆಸ್ ರೈಲು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
IPL 2026: ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?











Click it and Unblock the Notifications