Batarayanpura: ಬಡವರೆಲ್ಲರೂ ನಮ್ಮೋರು ಎಲ್ಲರಿಗೂ ವಸತಿ ಕಲ್ಪಿಸುವುದೇ ನಮ್ಮ ಸಂಕಲ್ಪ: ಕೃಷ್ಣ ಬೈರೇಗೌಡ
ಬೆಂಗಳೂರು ನವೆಂಬರ್ 09: ಬಡವರೆಲ್ಲರೂ ನಮ್ಮೋರು ಎಲ್ಲರಿಗೂ ವಸತಿ ಕಲ್ಪಿಸುವುದೇ ನಮ್ಮ ಸಂಕಲ್ಪ. ನಮ್ಮ ಸರ್ಕಾರವೂ ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದ್ದು, ಇಂದು ವಸತಿ ರಹಿತರಿಗೆ ಮನೆ ಹಕ್ಕುಪತ್ರ ನೀಡುತ್ತಿರುವುದು ನನಗೆ ವ್ಯಯಕ್ತಿಕವಾಗಿ ನಿಜಕ್ಕೂ ಸಂತೋಷದ ಕೆಲಸ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯಪಟ್ಟರು.
ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಸಿಂಗಾಪುರದ ಸರ್ವೇ ನಂ-109ರಲ್ಲಿ ಕರ್ನಾಟಕ ಕೋಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ನರ್ಮ್-ಬಿಎಸ್ಯುಪಿ ಯೋಜನೆಯಡಿ 248 ಮನೆಗಳನ್ನು ನಿರ್ಮಿಸಿ ಅರ್ಹರಿಗೆ-ಬಡವರಿಗೆ ಹಂಚಲಾಯಿತು.

ಇಂದು ಬ್ಯಾಟರಾಯನಪುರ ಜೆಸಿ ಕಚೇರಿಯಲ್ಲಿ ಎಲ್ಲಾ ಫಲಾನುಭವಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಹಕ್ಕು ಪತ್ರಗಳನ್ನು ವಿತರಿಸಿದರು. ಈ ವೇಳೆ ಮಾತನಾಡಿದ ಅವರು, "ಮಹಾನಗರಗಳಲ್ಲಿ ಬದುಕುವವರಿಗೆ ಮನೆ ಎಂಬುದು ತುಂಬಾ ಮುಖ್ಯ. ಮನೆ ಇದ್ರೆ ಮನೆಸಿಗೆ ನೆಮ್ಮದಿ ಅಂತಹ ನೆಮ್ಮದಿ ಎಲ್ಲರಿಗೂ ಸಿಗಲಿ ಎಂಬುದೇ ನಮ್ಮ ಆಶಯ. ಆದರೆ, ಬಡವರು ಬೆಂಗಳೂರಿನಂತಹ ನಗರದಲ್ಲಿ ಸ್ವಂತ ಮಾಡಿಕೊಳ್ಳುವುದು ಅಷ್ಟು ಸುಲಭವೇನಲ್ಲ. ಹೀಗಾಗಿ ನಮ್ಮಿಂದ ಸಾಧ್ಯವಾದಷ್ಟು ಜನರಿಗೆ ಹೀಗೆ ಮನೆ ನಿರ್ಮಿಸಿಕೊಡುತ್ತಿರುವುದು ನಿಜಕ್ಕೂ ಸಂತೋಷದ ಕೆಲಸ" ಎಂದರು.
"ಅಸಲಿಗೆ ಕೆಲ ವರ್ಷಗಳ ಹಿಂದೆ ಈ ಜಾಗ ಒತ್ತುವರಿಯಾಗಿತ್ತು. ಆ ಅಕ್ರಮ ಒತ್ತುವರಿದಾರರನ್ನು ಅಲ್ಲಿಂದ ಓಡಿಸಿ ಆ ಜಾಗದ ಸುತ್ತ ಬೇಲಿ ಹಾಕಿ ರಕ್ಷಿಸಲಾಗಿತ್ತು. ನಂತರ ಅಲ್ಲಿ ಡೋಬಿ ಕೆಲಸ ಕೆಲಸಗಾರರಿಗೆ ಅನುಕೂಲವಾಗಲಿ ಎಂದು ಬೋರ್ ವೆಲ್ ಹಾಕಿ ನೀರಿನ ವ್ಯವಸ್ಥೆ ಮಾಡಲಾಗಿತ್ತು. ಶೆಡ್ ಹಾಕಿ ವಿದ್ಯುತ್ ಸಂಪರ್ಕ ನೀಡಲಾಗಿತ್ತು.

ಈ ಮೂಲಕ ಭೂಮಿಯ ರಕ್ಷಣೆ ಮಾಡಲಾಗಿತ್ತು. ಇದೀಗ ಅದೇ ಜಾಗದಲ್ಲಿ ಸ್ಲಂ ಬೋರ್ಡ್ ಸಹಾಯದಿಂದ 248 ಮನೆಗಳನ್ನು ನಿರ್ಮಿಸಿ ಬಡವರಿಗೆ, ಅರ್ಹರಿಗೆ ನೀಡಲಾಗುತ್ತಿರುವುದು ನಿಜಕ್ಕೂ ನಮ್ಮ ಕೆಲಸ ಸಾರ್ಥಕ ಎನಿಸುತ್ತಿದೆ" ಎಂದು ಅವರು ಸಂತೋಷ ಹಂಚಿಕೊಂಡರು.
-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ವಾಸ್ತು ಪ್ರಕಾರ ಖಾಲಿ ಜಾಗ ಬಳಕೆ ಹೇಗೆ? ತಪ್ಪು ಮಾಡಿದರೆ ಕಷ್ಟಗಳು ಖಚಿತ -
ನಿಮ್ಮ ಮನೆಯ ವಾಸ್ತು ಸರಿಯಿದೆಯೇ? ಶಾಂತಿ ಮತ್ತು ಪ್ರಗತಿಗಾಗಿ ಇಲ್ಲಿವೆ ಪರಿಹಾರಗಳು -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ












Click it and Unblock the Notifications