Lalbagh: ಲಾಲ್ಬಾಗ್ಗೆ ಹೋಗುವ ಮುನ್ನ ತಿಳಿಯಿರಿ, ಪ್ರವೇಶ ಶುಲ್ಕ ಏರಿಕೆ
ಬೆಂಗಳೂರು, ನವೆಂಬರ್ 04: ಉದ್ಯಾನ ನಗರಿ ಬೆಂಗಳೂರಿನ ಲಾಲ್ಬಾಗ್ಗೆ ಹೋಗುವ ಮುನ್ನ ಇದನ್ನು ಓದಿ. ತೋಟಗಾರಿಕಾ ಇಲಾಖೆಯಿಂದ ನಿರ್ವಹಣೆ ಮಾಡಲಾಗುತ್ತಿರುವ ಲಾಲ್ಬಾಗ್ನ ಪ್ರವೇಶ ಶುಲ್ಕವನ್ನು ಭಾರೀ ಏರಿಕೆ ಮಾಡಲಾಗಿದೆ. ದಿನನಿತ್ಯ ಸಾವಿರಾರು ಜನರು ನಗರದ ಜಂಟಾಟದಿಂದ ತಪ್ಪಿಸಿಕೊಳ್ಳಲು ಲಾಲ್ಬಾಗ್ಗೆ ಭೇಟಿ ನೀಡುತ್ತಾರೆ. ಈಗ ಅವರು ಹೊಸ ದರವನ್ನು ಕಟ್ಟಿ ಪವೇಶ ಪಡೆಯಬೇಕಿದೆ.
ತೋಟಗಾರಿಕಾ ಇಲಾಖೆ ಲಾಲ್ಬಾಗ್ ಪ್ರವೇಶ ಶುಲ್ಕವನ್ನು ಏರಿಕೆ ಮಾಡುವ ಮೂಲಕ ಪ್ರವಾಸಗರ ಜೇಬಿಗೆ ಕತ್ತರಿ ಹಾಕಿದೆ. ಸಾಮಾನ್ಯ ದಿನಗಳಲ್ಲಿ ಪ್ರತಿನಿತ್ಯ ನೂರಾರು ಜನರು, ವಾರಾಂತ್ಯ ಮತ್ತು ಸರ್ಕಾರಿ ರಜೆ ಸಂದರ್ಭದಲ್ಲಿ ಇನ್ನೂ ಹೆಚ್ಚಿನ ಜನರು ಲಾಲ್ಬಾಗ್ಗೆ ಭೇಟಿ ನೀಡುತ್ತಾರೆ.

ಪ್ರವೇಶ ಶುಲ್ಕ ಏರಿಕೆ: ಲಾಲ್ಬಾಗ್ ಪ್ರವೇಶ ಶುಲ್ಕ, ವಾಹನ ನಿಲುಗಡೆ ಶುಲ್ಕ ಎಷ್ಟು ಎಂದು ಪ್ರವೇಶ ದ್ವಾರದ ಮುಂದೆಯೇ ಬೋರ್ಡ್ ಹಾಕಲಾಗಿದೆ. ಲಾಲ್ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯುವಾಗ ದಿನಕ್ಕೆ ಲಕ್ಷಾಂತರ ಜನರು ಭೇಟಿ ನೀಡಲಿದ್ದು, ಹೊಸ ಶುಲ್ಕದಿಂದ ಹೊರೆಯಾಗಿದೆ ಎಂದು ದೂರಲಾಗುತ್ತಿದೆ.
ಲಾಲ್ಬಾಗ್ ಪ್ರವೇಶಕ್ಕೆ 12 ವರ್ಷ ಮೇಲ್ಪಟ್ಟವರಿಗೆ ಮೊದಲು 30 ರೂ. ಶುಲ್ಕವಿತ್ತು. ಅದನ್ನು ಈಗ 50 ರೂ.ಗೆ ಏರಿಕೆ ಮಾಡಲಾಗಿದೆ. 6-12 ವರ್ಷದ ಮಕ್ಕಳಿಗೆ ಮೊದಲು 10 ರೂ. ಶುಲ್ಕವಿತ್ತು. ಅದನ್ನು ಈಗ 20 ರೂ.ಗಳಿಗೆ ಏರಿಕೆ ಮಾಡಲಾಗಿದೆ.
12 ವರ್ಷ ಮೇಲ್ಪಟ್ಟವರಿಗೆ 2020ರ ತನಕ 25 ರೂ. ಶುಲ್ಕವಿತ್ತು. 2021ರ ಫೆಬ್ರವರಿಯಲ್ಲಿ ಪ್ರವೇಶ ಶುಲ್ಕವನ್ನು 5 ರೂ. ಏರಿಕೆ ಮಾಡಿ, 30 ರೂ. ಮಾಡಲಾಗಿತ್ತು. ಆದರೆ ಈಗ ಅದನ್ನು ಏಕಾಏಕಿ 50 ರೂ. ಮಾಡಲಾಗಿದೆ.
ವಾಹನ ನಿಲುಗಡೆ ಶುಲ್ಕದ ವಿವರ. ದ್ವಿಚಕ್ರವಾಹನಕ್ಕೆ 30 ರೂ. ನಾಲ್ಕು ಚಕ್ರದ ವಾಹನಕ್ಕೆ 60 ರೂ., ಟೆಂಪೋ ಟ್ರಾಲೆರ್ಸ್ಗೆ 100 ರೂ. ಮತ್ತು ಬಸ್ಗಳಿಗೆ 200 ರೂ. ಶುಲ್ಕವಿದೆ. ಲಾಲ್ಬಾಗ್ ಪ್ರವೇಶ ದ್ವಾರದ ಮುಂದೆ ಹೊಸ ಶುಲ್ಕದ ಬೋರ್ಡ್ ಹಾಕಲಾಗಿದ್ದು, ಪರಿಷ್ಕೃತ ಶುಲ್ಕ ಈಗಾಗಲೇ ಜಾರಿಗೆ ಬಂದಿದೆ.
ಲಾಲ್ಬಾಗ್ ಬೆಂಗಳೂರು ನಗರದ ಪ್ರಮುಖ ಪ್ರವಾಸಿ ತಾಣ. ಇದರ ನಿರ್ವಹಣೆಯನ್ನು ತೋಟಗಾರಿಕಾ ಇಲಾಖೆ ನೋಡಿಕೊಳ್ಳುತ್ತದೆ. ಲಾಲ್ಬಾಗ್ ಸಸ್ಯತೋಟದಲ್ಲಿ ವಿಶ್ವದ ಹಲವಾರು ರಾಷ್ಟ್ರಗಳ ನೂರಾರು ಸಸ್ಯಗಳನ್ನು ಉಳಿಸಿ, ಬೆಳೆಸಿ, ಪೋಷಿಸಿಕೊಂಡು ಬರಲಾಗುತ್ತಿದೆ.
1760ರಿಂದಲೂ ದೇಶಿ ಮತ್ತು ವಿದೇಶಿ ಪುಷ್ಪ, ವೃಕ್ಷ, ಪೊದೆಗಳನ್ನು ಬೆಳೆಸಿ ಜೈವಿಕ ವೈವಿಧ್ಯಗಳನ್ನು ಕಾಪಾಡಲಾಗುತ್ತಿದೆ. ದಕ್ಷಿಣ ಬೆಂಗಳೂರಿನ ಪ್ರದೇಶದಲ್ಲಿರುವ ಲಾಲ್ಬಾಗ್ ಸುಮಾರು 240 ಎಕರೆಗಳಷ್ಟು ವಿಸ್ತಾರವನ್ನು ಹೊಂದಿದೆ. 1854ಕ್ಕೂ ಹೆಚ್ಚು ವಿಧದ ಸಸ್ಯಗಳು ಮತ್ತು ಮರಗಳಿಗೆ ಇದು ನೆಲೆಯಾಗಿದೆ.
1856ರಲ್ಲಿ ಇದನ್ನು ಸಸ್ಯೋದ್ಯಾನ ಎಂದು ಘೋಷಣೆ ಮಾಡಲಾಯಿತು. ಆರಂಭದಲ್ಲಿ ಉದ್ಯಾನಕ್ಕೆ ಮೊಘಲ್ ಸ್ಪರ್ಶವಿತ್ತು ಕಾಲಾನಂತರದಲ್ಲಿ ಉದ್ಯಾನದ ವಿನ್ಯಾಸವನ್ನು ತೋಟಗಾರಿಕೆ ಇಲಾಖೆ ಬದಲಾವಣೆ ಮಾಡಿದೆ. ಪ್ರತಿದಿನ ಹಲವಾರು ಪ್ರವಾಸಿಗರು ಲಾಲ್ಬಾಗ್ಗೆ ಭೇಟಿ ನೀಡುತ್ತಾರೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications