ಬೆಂಗಳೂರು ಲಾಲ್ಬಾಗ್: ಪೂರ್ಣಚಂದ್ರ ತೇಜಸ್ವಿ ಥೀಮ್ನಲ್ಲಿ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ
ಬೆಂಗಳೂರು: ಬೆಂಗಳೂರಿನ ಸಸ್ಯಕಾಶಿ ಎಂದೇ ಖ್ಯಾತಿ ಗಳಿಸಿರುವ ಲಾಲ್ಬಾಗ್ (Lalbagh Botanical Garden)ನಲ್ಲಿ 2026ನೇ ಸಾಲಿನ ಜನವರಿ 15 ರಿಂದ 26 ರವರೆಗೆ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ಕನ್ನಡದ ಪ್ರಸಿದ್ಧ ಬರಹಗಾರ ಮತ್ತು ಚಿಂತಕರಾದ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಜೀವನ ಮತ್ತು ಸಾಹಿತ್ಯ ಪರಂಪರೆಯನ್ನು ಗೌರವಿಸಲು ನಿರ್ಧರಿಸಲಾಗಿದೆ. ಪೂರ್ಣಚಂದ್ರ ತೇಜಸ್ವಿ ಅವರ ಸಾಹಿತ್ಯದ ಬಗ್ಗೆ ಆಸಕ್ತಿ ಇರುವ ದೊಡ್ಡ ಸಮುದಾಯವೇ ಇದೆ. ಅದರಲ್ಲೂ ಮುಖ್ಯವಾಗಿ ಯುವ ಸಮೂಹಕ್ಕೆ ಪೂರ್ಣಚಂದ್ರ ತೇಜಸ್ವಿ ಅವರು ಅತ್ಯಂತ ಆಪ್ತರಾಗಿದ್ದಾರೆ. ಹೀಗಾಗಿ ಈ ಬಾರಿಯ ಫಲಪುಷ್ಪ ಪ್ರದರ್ಶನವು ಅತ್ಯಂತ ಸೊಗಸಾಗಿರುವ ನಿರೀಕ್ಷೆ ಇದೆ.
ಪೂರ್ಣಚಂದ್ರ ತೇಜಸ್ವಿ ಅವರ ಕೃತಿಗಳೊಂದಿಗೆ ಯುವ ಸಮುದಾಯ ಹಾಗೂ ಹೊರ ರಾಜ್ಯದಿಂದ ಬರುವವರಿಗೆ ಪರಿಚಯ ಮಾಡಿಕೊಡುವ ಉದ್ದೇಶದಿಂದ ಮತ್ತು ಅವರ ಪ್ರತಿಷ್ಠಿತ ಕಾದಂಬರಿ ಕರ್ವಾಲೊ ಪ್ರಕಟವಾದ 45 ವರ್ಷಗಳಿಗೂ ಹೆಚ್ಚಿನ ವರ್ಷಗಳಾಗಿದ್ದು, ಕನ್ನಡ ಸಾಹಿತ್ಯ ಲೋಕಕ್ಕೆ ಪೂರ್ಣಚಂದ್ರ ತೇಜಸ್ವಿ ಅವರು ನೀಡಿರುವ ಕೊಡುಗೆಯನ್ನು ಸ್ಮರಿಸುವ ಉದ್ದೇಶದಿಂದ ಈ ಥೀಮ್ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ ಎಂದು "ದಿ ಹಿಂದೂ" ವರದಿ ಮಾಡಿದೆ.

ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ: ಬರಹಗಾರರ ಅಭಿಪ್ರಾಯ
ಇನ್ನು ಈ ಬಾರಿ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನದಲ್ಲಿ ಪೂರ್ಣಚಂದ್ರ ತೇಜಸ್ವಿ ಅವರ ಥೀಮ್ ಬಳಸಿರುವ ಹಿನ್ನೆಲೆಯಲ್ಲಿ ಹೂವಿನ ಪ್ರತಿಮೆಗಳಲ್ಲಿ ಥೀಮ್ ಅರ್ಥಪೂರ್ಣವಾಗಿ ಪ್ರತಿಫಲಿಸುವಂತೆ ಮಾಡುವ ನಿಟ್ಟಿನಲ್ಲೂ ಕೆಲವೊಂದು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ತೋಟಗಾರಿಕೆ ಇಲಾಖೆಯು ಸಾಹಿತ್ಯ ಪರಿಣಿತರು, ಬರಹಗಾರರು ಹಾಗೂ ಪೂರ್ಣಚಂದ್ರ ತೇಜಸ್ವಿ ಅವರ ಜೀವನ ಮತ್ತು ಕೃತಿಗಳೊಂದಿಗೆ ಬಗ್ಗೆ ಪರಿಚಿಯ ಇರುವವರೊಂದಿಗೂ ಸುದೀರ್ಘ ಚರ್ಚೆ ನಡೆದಿದೆ.
ಫಲಪುಷ್ಪ ಪ್ರದರ್ಶನದಲ್ಲಿ ಲೇಖಕರ ಆಲೋಚನೆಗಳನ್ನು ಸೇರಿಸುವುದರಿಂದ ವಿದ್ಯಾರ್ಥಿಗಳಿಗೆ ಮತ್ತು ಮೊದಲ ಬಾರಿಗೆ ತೇಜಸ್ವಿ ಅವರ ಪುಸ್ತಕಗಳನ್ನು ಓದುವವರಿಗೆ ಹೊಸ ಅನುಭವ ಕೊಡಲಿದೆ ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಎಂ. ಜಗದೀಶ್ ಅವರು ಹೇಳಿದ್ದಾರೆ.
ಪೂರ್ಣಚಂದ್ರ ತೇಜಸ್ವಿ ಅವರ ಸೃಜನಶೀಲ ಬರವಣಿಗೆಯ ಶೈಲಿ, ವೈಜ್ಞಾನಿಕ ಮನೋಭಾವ ಮತ್ತು ಪ್ರಕೃತಿ ಮತ್ತು ಸಮಾಜದೊಂದಿಗಿನ ಆಳವಾದ ಸಂಪರ್ಕದಿಂದಾಗಿ ಅವರ ಬರವಣಿಗೆ ಹಲವು ತಲೆಮಾರುಗಳಿಗೆ ಅಥವಾ ಹೊಸ ಓದುಗರಿಗೆ ಇಂದಿಗೂ ಪ್ರೇರಣೆಯಾಗಿದೆ. ತೇಜಸ್ವಿ ಅವರ ಪುಸ್ತಕಗಳನ್ನು ಕರ್ನಾಟಕದಲ್ಲಿ ಮಾತ್ರವಲ್ಲದೆ ರಾಜ್ಯದ ಹೊರಗಿನ ಓದುಗರು ಸಹ ವ್ಯಾಪಕವಾಗಿ ಓದುತ್ತಾರೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್












Click it and Unblock the Notifications