ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚೂರಿ ಇರಿತ ಕೇಸ್:ಆಸ್ಪತ್ರೆಯಿಂದ ಇಂದು ವಿಶ್ವನಾಥ್ ಶೆಟ್ಟಿ ಡಿಸ್ಚಾರ್ಜ್

|
Google Oneindia Kannada News

ಬೆಂಗಳೂರು, ಮಾರ್ಚ್ 07: ಬೆಂಗಳೂರಿನ ಮಲ್ಯ ಆಸ್ಪತ್ರೆಗೆ ದಾಖಲಾಗಿರುವ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರನ್ನು ಇಂದು(ಮಾ.14) ಡಿಸ್ಚಾರ್ಜ್ ಮಾಡುವುದಾಗಿ ಮಲ್ಯ ಆಸ್ಪತ್ರೆ ವೈದ್ಯ ದಿವಾಕರ್ ಶೆಟ್ಟಿ ಹೇಳಿದ್ದಾರೆ.

ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ. ಆದರೆ ಸಂಪೂರ್ಣ ಗುಣಮುಖರಾಗಲು ಕನಿಷ್ಠ ಒಂದು ತಿಂಗಳಾದರೂ ಬೇಕು ಎಂದು ಅವರು ಹೇಳಿದ್ದಾರೆ.

ಲೋಕಾಯುಕ್ತರಿಗೆ ಚೂರಿ ಇರಿದಾತನ ಹಿಂದೆ ಸರಕಾರಿ ಅಧಿಕಾರಿಗಳ ಲಂಚದ ಕಥೆ!ಲೋಕಾಯುಕ್ತರಿಗೆ ಚೂರಿ ಇರಿದಾತನ ಹಿಂದೆ ಸರಕಾರಿ ಅಧಿಕಾರಿಗಳ ಲಂಚದ ಕಥೆ!

ಮಾ. 7 ರಂದು ಲೋಕಾಯುಕ್ತ ಕಚೇರಿಗೆ ದೂರು ನೀಡುವುದಕ್ಕಾಗಿ ಬಂದಿದ್ದ ದುಷ್ಕರ್ಮಿಯೊಬ್ಬ ಅವರಿಗೆ ಅವರ ಚೇಂಬರ್ ನಲ್ಲಿಯೇ ಚಾಕುವಿನಿಂದ ಇರಿದು ಹಲ್ಲೆಗೊಳಿಸಿದ್ದ. ತಕ್ಷಣವೇ ಅವರನ್ನು ಆಸ್ಪತ್ರೆಗೆ ರವಾನಿಸಿದ್ದರಿಂದ ಶೆಟ್ಟಿಯವರು ಪ್ರಾಣಾಪಾಯದಿಂದ ಪಾರಾಗಿದ್ದರು.

Bengaluru: Lokayukta Justice Vishwanath Shetty will be discharged today

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಆರೋಪಿಯನ್ನು ತೇಜಸ್ ಶರ್ಮಾ ಎಂದು ಗುರುತಿಸಲಾಗಿದ್ದು, ಆತನನ್ನು ಬಂಧಿಸಿರುವ ಪೊಲೀಸರು, ಆತನ ವಿರುದ್ಧ ಐಪಿಸಿ ಸೆಕ್ಷನ್ 307, 341 ಸೇರಿದಂತೆ ವಿವಿಧ ಸೆಕ್ಷನ್ ಗಳಡಿಯಲ್ಲಿ ಎಫ್ಐಆರ್ ದಾಖಲು ಮಾಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

English summary
Lokayukta of Karnataka Justice P Vishwanath Shetty will be discharged from Bengaluru's Mallya hospital today. He was stabbed by a person at his office on March 7th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X