ಬೆಂಗಳೂರು : ಆರ್ಟಿಒ ಇನ್ಸ್ಪೆಕ್ಟರ್ ಮನೆ ಮೇಲೆ ಲೋಕಾಯುಕ್ತ ದಾಳಿ
ಬೆಂಗಳೂರು, ಡಿಸೆಂಬರ್ 28 : ಬೆಂಗಳೂರಿನಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಅಬಕಾರಿ ಇಲಾಖೆಯ ಉಪ ಅಧೀಕ್ಷಕ ಮತ್ತು ಆರ್ಟಿಒ ಇನ್ಸ್ಪೆಕ್ಟರ್ ಮನೆ ಮೇಲೆ ದಾಳಿ ನಡೆದಿದ್ದು, 1.86 ಕೋಟಿ ಮೊತ್ತದ ಅಕ್ರಮ ಆಸ್ತಿ ಪತ್ತೆಯಾಗಿದೆ.
ಬೆಂಗಳೂರು ನಗರ ಲೋಕಾಯುಕ್ತ ಎಸ್ಪಿ ಸೋನಿಯಾ ನಾರಂಗ್ ಅವರ ನೇತೃತ್ವದಲ್ಲಿ ಲೋಕಾಯುಕ್ತ ಪೊಲೀಸರು ಶೇಷಾದ್ರಿಪುರಂ ಮತ್ತು ಚಿಕ್ಕಲಸಂದ್ರದಲ್ಲಿ ಸೋಮವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮವಾಗಿ ಆಸ್ತಿಗಳಿಕೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ದಾಳಿ ನಡೆಸಲಾಗಿದೆ. [ಡಿಐಜಿಯಾಗಿ ಬಡ್ತಿ ಪಡೆದ ಎಸ್ಪಿ ಸೋನಿಯಾ ನಾರಂಗ್]

ಶೇಷಾದ್ರಿಪುರಂನಲ್ಲಿರುವ ಅಬಕಾರಿ ಇಲಾಖೆಯ ಉಪ ಅಧೀಕ್ಷಕ ವೈ.ಭರತೇಶ್ ನಿವಾಸ ಮತ್ತು ಜಯನಗರದ ಆರ್ಟಿಒ ಇನ್ಸ್ಪೆಕ್ಟರ್ ಎಂ.ಜಯರಾಂ ಅವರ ಚಿಕ್ಕಲಸಂದ್ರದ ಬಳಿ ಇರುವ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಭರತೇಶ್ ಅವರ ಬಳಿ 86 ಲಕ್ಷ ರೂ. ಮತ್ತು ಜಯರಾಂ ಅವರ ಬಳಿ 1 ಕೋಟಿ ರೂ. ಅಕ್ರಮ ಆಸ್ತಿ ಇರುವುದು ಪತ್ತೆಯಾಗಿದೆ.
ವೈ.ಭರತೇಶ್ : ಅಬಕಾರಿ ಇಲಾಖೆಯ ಉಪ ಅಧೀಕ್ಷಕ ವೈ.ಭರತೇಶ್ ಅವರು 65.99 ಲಕ್ಷ ರೂ. ಸ್ಥಿರಾಸ್ತಿ, 60.57 ಲಕ್ಷ ರೂ ಚರಾಸ್ತಿ ಹೊಂದಿದ್ದಾರೆ. ಖರ್ಚು 40.55 ಲಕ್ಷ ಆದಾಯ 83.69 ಲಕ್ಷ ರೂ., ಅಕ್ರಮ ಆಸ್ತಿ 86 ಲಕ್ಷ ರೂ.ಗಳು.
ಜಯನಗರದ ಆರ್ಟಿಒ ಇನ್ಸ್ಪೆಕ್ಟರ್ ಎಂ.ಜಯರಾಂ ಅವರ ಒಟ್ಟು ಆಸ್ತಿ 1.5 ಕೋಟಿ. ಒಟ್ಟು ಖರ್ಚು 22 ಲಕ್ಷ, ಆದಾಯ
43 ಲಕ್ಷ ರೂ.ಗಳು. ಇಬ್ಬರು ಅಧಿಕಾರಿಗಳ ಮನೆಯಲ್ಲಿ ಸಿಕ್ಕ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications