ಚಿಣ್ಣರ ಸೃಜನಶೀಲತೆಯ ಅಭಿವ್ಯಕ್ತಿಗೆ ವೇದಿಕೆ ಈ 'ಮಕ್ಕಳ ಹಬ್ಬ'
ಬೆಂಗಳೂರು, ನವೆಂಬರ್ 02: ಬಾಲ್ಯದ ಸುವರ್ಣಯುಗವನ್ನು ನೆನಪಿಸುವುದಕ್ಕಾಗಿ ಮತ್ತು ಮಕ್ಕಳಲ್ಲಿನ ಸೃಜನಶೀಲತೆಯ ಪ್ರಕಟಣೆಗೆ ವೇದಿಕೆಯಾಗುವುದಕ್ಕಾಗಿ 'ಮಕ್ಕಳ ಹಬ್ಬ' ಎಂಬ ವಿನೂತನ ಕಾರ್ಯಕ್ರಮವೊಂದು ನಡೆಯುತ್ತಿದೆ. ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನವೆಂಬರ್ 11 ರಿಂದ 14 ರವರೆಗೆ ಬೆಂಗಳೂರಿನ ಕಬ್ಬನ್ ಪಾರ್ಕ್ ಮತ್ತು ಬಾಲಭವನ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ.
ಮಕ್ಕಳಿಂದ ಜಾನಪದ ಕಲಾಪ್ರದರ್ಶಸನ, ನಾಟಕ ಪ್ರದರ್ಶನ, ಕುಸ್ತಿ, ಮಲ್ಲಕಂಬ, ಚಿತ್ರಕಲಾ ಪ್ರದರ್ಶನ, ವೈಜ್ಞಾನಿಕ ಪ್ರದರ್ಶನ, ರಾಜ್ಯ ಹಾಗೂ ಹೊರ ರಾಜ್ಯದ ಮಕ್ಕಳಿಂದ ನೃತ್ಯ ಪ್ರಕಾರ ಪ್ರದರ್ಶನ, ಕನ್ನಡ ಕಿರೀಟದ ಗರಿಗಳು ಸೇರಿದಂತೆ ಕನ್ನಡ ಸಂಸ್ಕೃತಿಯನ್ನು ಬಿಂಬಿಸುವ ವಿಭಿನ್ನ ಕಾರ್ಯಕ್ರಮಗಳು ಮನರಂಜಿಸಲಿವೆ.
Makkala Habba organised by @WCD_Karnataka for 4th year! Make our children feel special, Come relive your childhood @karnatakacom @GOKUpdates pic.twitter.com/9i3hqiw4tO
— Makkala Habba (@MakkalaHabba) November 2, 2017
ಮಕ್ಕಳ ಈ ಕಾರ್ಯಕ್ರಮಗಳನ್ನು ಸಭಿಕರು ಕಣ್ತುಂಬಿಸಿಕೊಳ್ಳಬಹುದು. ಹಾಗೆಯೇ ಕೆಲ ಗ್ರಾಮೀಣ ಕ್ರೀಡೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಬಹುದು ಕೂಡ. ಗ್ರೀಣ ಆಟಗಳು, ಜೇಡಿ ಮಣ್ಣಿನ ಆಕೃತಿ ತಯಾರಿ, ಕ್ವಿಜ್, ಕಥೆ ಹೇಳುವುದು, ನಾಟಕ, ಚಿತ್ರಕಲೆ ಸೇರಿದಂತೆ ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಮಕ್ಕಳೊಂದಿಗೆ ದೊಡ್ಡವರೂ ಪಾಲ್ಗೊಳ್ಳಬಹುದು.

ಈ ಎಲ್ಲ ಕಾರ್ಯಕ್ರಮಗಳಿಗೂ ಪ್ರವೇಶ ಉಚಿತವಾಗಿದ್ದು ಮಕ್ಕಳೊಂದಿಗೆ, ಮಕ್ಕಳಾಗಬಯಸುವವರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ, ಮಕ್ಕಳನ್ನು ಪ್ರೋತ್ಸಾಹಿಸುವಂತೆ ಕೋರಲಾಗಿದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications