ಸಂಜಯ ನಗರ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಮೇಲೆ ಖಾಕಿ ಫೈರಿಂಗ್
ಬೆಂಗಳೂರು, ಮಾರ್ಚ್ 26: ನಗರದ ಸಂಜಯ ನಗರದಲ್ಲಿ ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಇಬ್ಬರ ಪೈಕಿ, ಒಬ್ಬನ ಕಾಲಿಗೆ ಪೊಲೀಸರು ಗುಂಡು ಹೊಡೆದು, ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸ್ಥಳ ಮಹಜರು ಮಾಡಲು ಆರೋಪಿಗಳನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ, ಆರೋಪಿಗಳಲ್ಲಿ ಒಬ್ಬನಾದ ತಾಜುದ್ದೀನ್ ಎನ್ನುವಾತ, ಪೊಲೀಸರ ಮೇಲೆ ಕಲ್ಲು, ಇಟ್ಟಿಗೆ ಎಸೆದು ಪರಾರಿಯಾಗಲು ಯತ್ನಿಸಿದ್ದ.
ಈ ವೇಳೆ, ಸಂಜಯ ನಗರ ಠಾಣೆಯ ಬಾಲಾಜಿ, ತಾಜುದ್ದೀನ್ ಕಾಲಿಗೆ ಗುಂಡು ಹೊಡೆದು, ನಂತರ ಆತನನ್ನು ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯಲ್ಲಿ ಮಹಿಳಾ ಪಿಎಸೈ ರೂಪಾ ಕೂಡಾ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಏನಿದು ಘಟನೆ: ಬುಧವಾರ (ಮಾ 25) ದೇಶಾದ್ಯಂತ ಲಾಕ್ ಡೌನ್ ಸಂದರ್ಭದಲ್ಲಿ ಚೆಕ್ ಪೋಸ್ಟ್ ನಲ್ಲಿ ನಾಖಾಬಂದಿ ಹಾಕಿ ಸಂಜಯ ನಗರ ಪೊಲೀಸರು ತಪಾಸಣೆ ನಡೆಸುತ್ತಿದ್ದರು. ಜೊತೆಗೆ, ಮನೆಯಿಂದ ಹೊರಗೆ ಬರದಂತೆ ಸಾರ್ವಜನಿಕರಲ್ಲಿ ಮನವಿ ಮಾಡುತ್ತಿದ್ದರು.
ಇದರಿಂದ ಸಿಟ್ಟಿಗೆದ್ದ ತಾಜುದ್ದೀನ್ (25) ಮತ್ತು ಕುತುಬುದ್ದೀನ್ (25) ಎನ್ನುವ ಕಿಡಿಗೇಡಿಗಳು, ಪೊಲೀಸರನ್ನು ಕೆಳಕ್ಕೆ ತಳ್ಲಿ, ಹಲ್ಲೆ ನಡೆಸಿದ್ದರು. ಈ ಕೃತ್ಯ ಭಾರೀ ಆಕ್ರೋಶಕ್ಕೆ ಗುರಿಯಾಗಿತ್ತು. ಸ್ಥಳದಲ್ಲೇ ಇಬ್ಬರನ್ನು ಬಂಧಿಸಲಾಗಿತ್ತು.
"ಇದು ಇಬ್ಬರು ನಮ್ಮ ಸಹದ್ಯೋಗಿಗಳಿಗೆ ಮಾಡಿದ ಅವಮಾನವಲ್ಲ. ಇಡೀ ಪೊಲೀಸ್ ಸಮೂಹಕ್ಕೆ. ಇಬ್ಬರು ಪೊಲೀಸರಿಗೆ ಮಾತ್ರ ಹೊಡೆದದ್ದಲ್ಲ, ಇಡೀ ಪೊಲೀಸ್ ಸಮುದಾಯಕ್ಕೆ. ಇವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ" ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದರು.
-
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026: ಬೆಂಗಳೂರು ಕ್ರಿಕೆಟ್ ಪ್ರೇಮಿಗಳೇ ಗಮನಿಸಿ, ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗುವ ಮುನ್ನ ಈ ಹೊಸ ರೂಲ್ಸ್ ಗೊತ್ತಿರಲಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?












Click it and Unblock the Notifications