ಅಮಾಯಕ ಬೀದಿ ನಾಯಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ? ರಾಜಧಾನಿ ಬೆಂಗಳೂರಲ್ಲಿ ಭೀಕರ ಘಟನೆ Stray Dog
ಕನ್ನಡಿಗರ ರಾಜಧಾನಿ ಬೆಂಗಳೂರು ಐಟಿ ತವರು, ಸಿಲಿಕಾನ್ ಸಿಟಿ ಎಂಬ ದೊಡ್ಡ ದೊಡ್ಡ ಬಿರುದು ಪಡೆದಿದೆ. ಆದರೆ ಇಂತಹ ನಗರದಲ್ಲಿ ಪದೇ ಪದೇ ಆಘಾತಕಾರಿ ಘಟನೆಗಳು ನಡೆಯುತ್ತಿದ್ದು, ಕೆಲವು ವಿಕೃತರು ಮಾಡುತ್ತಿರುವ ಕೆಲಸಕ್ಕೆ ನಮ್ಮ ಬೆಂಗಳೂರಿನ ಹೆಸರು ಹಾಳಾಗುತ್ತಿದೆ. ಅದರಲ್ಲೂ ವಲಸಿಗರ ಕಾರಣಕ್ಕೆ ಬೆಂಗಳೂರು ನಗರ ಹಾಳಾಗುತ್ತಿದೆ ಎಂಬ ಆಕ್ರೋಶ ಕೂಡ ವ್ಯಕ್ತವಾಗುತ್ತಿದೆ. ಇಷ್ಟೆಲ್ಲಾ ಭಾರಿ ಆಘಾತಕಾರಿ ಬೆಳವಣಿಗೆ ನಡುವೆ, ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸರ ತನಿಖೆಯಲ್ಲಿ ಸಿಲಿಕಾನ್ ಸಿಟಿ ಬೆಚ್ಚಿ ಬೀಳುವ ಘಟನೆ ಬಯಲಾಗಿದೆ. ಹೆಣ್ಣು ಬೀದಿ ನಾಯಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಇದೀಗ ತಲ್ಲಣ ಸೃಷ್ಟಿ ಮಾಡಿದೆ.
ಹೌದು, ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸರು ಇದೀಗ ದಾಖಲು ಮಾಡಿಕೊಂಡಿರುವ ಪ್ರಕರಣ ಇಡೀ ಬೆಂಗಳೂರು ನಿವಾಸಿಗಳು ಬೆಚ್ಚಿ ಬೀಳುವಂತೆ ಮಾಡಿದೆ. ಜೆಪಿ ನಗರದಲ್ಲಿ ಹೆಣ್ಣು ಬೀದಿ ನಾಯಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕೊಂದ ಆರೋಪದ ಮೇಲೆ ಪರಾರಿ ಆಗಿದ್ದ ವಿಕೃತ ಮನಸ್ಕನಿಗೆ ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿಯನ್ನ ನೇಪಾಳ ಮೂಲದ ಕಿರಣ್ (30) ಎಂದು ಗುರುತಿಸಲಾಗಿದ್ದು ಆರೋಪಿ ಇದೇ ಪ್ರದೇಶದ ಹೋಟೆಲ್ ಒಂದರಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಜೆಪಿ ನಗರ 7ನೇ ಹಂತದಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದ ಬೀದಿ ನಾಯಿಯ ಮೇಲೆ ದೌರ್ಜನ್ಯ ಎಸಗಿರುವ ಆರೋಪ ಇದಾಗಿದ್ದು, ಶುಕ್ರವಾರ ಬೆಳಗಿನ ಜಾವ 1.25 ರಿಂದ 1.40 ರ ನಡುವೆ ಈ ಘಟನೆ ನಡೆದಿದೆ.

ವಿಕೃತನ ಪತ್ತೆಗೆ ಪೊಲೀಸರ ಹುಡುಕಾಟ
ಪ್ರಾಣಿಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆ, 1960ರ ಸೆಕ್ಷನ್ 11 (1)(ಎ) ಅಡಿಯಲ್ಲಿ ಎಂದರೆ ಪ್ರಾಣಿಗಳಿಗೆ ಅನಗತ್ಯ ನೋವುಂಟು ಮಾಡಿದ ಆರೋಪ ಹಾಗು ಭಾರತೀಯ ನ್ಯಾಯ ಸಂಹಿತಾ ಅರ್ಥಾತ್ ಬಿಎನ್ಎಸ್ ಸೆಕ್ಷನ್ 325 ಎಂದರೆ ಪ್ರಾಣಿಗಳನ್ನು ಕೊಲ್ಲುವ ಅಥವಾ ಅಂಗವಿಕಲಗೊಳಿಸುವ ಮೂಲಕ ಕಿಡಿಗೇಡಿತನ ಮೆರೆದ ಆರೋಪದ ಅಡಿಯಲ್ಲಿ ಇದೀಗ ಪೊಲೀಸರು ಕೇಸ್ ದಾಖಲಿಸಿ ಆರೋಪಿಗಾಗಿ ಬಲೆ ಬೀಸಿದ್ದಾರೆ.
ಜನವರಿ 9 ಶುಕ್ರವಾರ ಈ ಘಟನೆ ನಡೆದಿದ್ದು, ಘಟನೆ ನಡೆದ ಒಂದು ದಿನದ ನಂತರ ಅಂದರೆ ಜನವರಿ 10 ಶನಿವಾರದಿಂದ ಆರೋಪಿ ಕೆಲಸಕ್ಕೆ ಬರುವುದನ್ನೇ ನಿಲ್ಲಿಸಿದ್ದಾನೆ ಎನ್ನಲಾಗಿದೆ. ಹೀಗಾಗಿ ಪೊಲೀಸರು ಈಗ ಆರೋಪಿ ಪತ್ತೆಗೆ ಬಲೆ ಬೀಸಿದ್ದು, ಅವನನ್ನು ಪತ್ತೆಹಚ್ಚಲು ಹುಡುಕಾಟ ಆರಂಭವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಿಸಿ ಕ್ಯಾಮೆರಾ ಕಂಡು ಆಘಾತ
ಸರ್ಕಾರೇತರ ಸಂಸ್ಥೆ ಸಂಸ್ಥಾಪಕಿ ಮಂಜರಿ ಚೈತನ್ಯ ಎಂಬುವವರು ನೀಡಿದ ದೂರಿನ ಪ್ರಕಾರ, ಆರೋಪಿ ಸುಮಾರು 2 ತಿಂಗಳ ಹೆಣ್ಣು ಬೀದಿ ನಾಯಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದು ಸ್ಥಳದಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದೆ. ಹೀಗೆ ಲೈಂಗಿಕ ದೌರ್ಜನ್ಯ ಎಸಗಿದ ನಂತರ ವಿಕೃತ ಮನಸ್ಕ ಆರೋಪಿ ನಾಯಿಯನ್ನ ಕಾಂಪೌಂಡ್ ಗೋಡೆಗೆ ಎಸೆದಿದ್ದಾನೆ ಎಂದು ಆರೋಪಿಸಲಾಗಿದೆ. ನಾಯಿ ಸಾಯದಿದ್ದಾಗ, ಆರೋಪಿ ಅದರ ಕುತ್ತಿಗೆ ತಿರುಗಿಸಿ ತುಳಿದು ಸಾಯುತ್ತಿರುವುದು ಕೂಡ ರೆಕಾರ್ಡ್ ಆಗಿರುವುದಾಗಿ ಇದೀಗ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.
ಪೊಲೀಸರು ಮತ್ತಷ್ಟು ತನಿಖೆ ನಡೆಸುತ್ತಿದ್ದು, ಇದೇ ಏರಿಯಾದ ಸುತ್ತಮುತ್ತಲೂ ಇರುವ ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸುತ್ತಿದ್ದಾರೆ. ಆರಂಭದಲ್ಲಿ ನಾಯಿ ಕೊಲೆ ಪ್ರಕರಣವೆಂದು ಶಂಕಿಸಲಾಗಿತ್ತು, ಪೊಲೀಸರು ಹತ್ತಿರದ ಕಟ್ಟಡದಲ್ಲಿದ್ದ ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಿದಾಗ ಲೈಂಗಿಕ ದೌರ್ಜನ್ಯ ಬಯಲಾಗಿದ್ದು, ನಂತರ ದಕ್ಷಿಣ ವಿಭಾಗದ ಪ್ರಾಣಿ ರಕ್ಷಣಾ ತಂಡ ಮತ್ತು ಸರ್ಕಾರೇತರ ಸಂಸ್ಥೆಗೆ ಈ ವಿಷಯ ತಿಳಿಸಲಾಗಿದೆ. ಆರೋಪಿಯನ್ನು ಆದಷ್ಟು ಬೇಗ ಸೆರೆಹಿಡಿಯಲು ಬೇಕಾದ ಎಲ್ಲಾ ತಯಾರಿಯನ್ನು ಇದೀಗ ಪೊಲೀಸರು ಮಾಡಿಕೊಂಡಿದ್ದಾರೆ.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications