Water Shutdown: ಬೆಂಗಳೂರಲ್ಲಿ ಮೇ 8 ರಂದು ಕಾವೇರಿ ನೀರು ಪೂರೈಕೆ ವ್ಯತ್ಯಯ: ಯಾವ ಏರಿಯಾಗಳಲ್ಲಿ? ತಿಳಿಯಿರಿ
ಬೆಂಗಳೂರು, ಮೇ 04: ಬೆಂಗಳೂರಿನಲ್ಲಿ ನೀರಿನ ಕೊರತೆ ಮಧ್ಯೆ ಕೆಲವು ಬಡಾವಣೆಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಮಾಹಿತಿ ನೀಡಿದೆ.
ಹೌದು, ತುರ್ತು ಕಾಮಗಾರಿ ಕೈಗೊಳ್ಳಲಿರುವ ಪ್ರಯುಕ್ತ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಮೇ 08ರಂದು ಬುಧವಾರ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ.

ಬೆಂಗಳೂರು ಜಲಮಂಡಳಿ ವ್ಯಾಪ್ತಿಯ ಕಾವೇರಿ 5ನೇ ಹಂತದ ಯೋಜನೆಯ ಸಿಪಿ 04 ಕಾಮಗಾರಿಯಡಿ ಹಾರೋಹಳ್ಳಿ ಮತ್ತು ತಾತಗುಣಿಯಲ್ಲಿ ವಿದ್ಯುತ್ ಸಂಬಂಧಿತ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಸಂಬಂಧ ಮೇ 08 ರಂದು ಕಾವೇರಿ ನೀರು ಸರಬರಾಜು ಯೋಜನೆಯ ಎಲ್ಲಾ 5 ಹಂತದ ಜಲರೇಚಕ ಯಂತ್ರಗಾರಗಳನ್ನು 01 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗುತ್ತದೆ.
ಈ ಮೇಲಿನ ತುರ್ತು ಕಾಮಗಾರಿ ಕೈಗೆತ್ತಿಕೊಳ್ಳುವ ಪರಿಣಾಮ ಬೆಂಗಳೂರಿಗರು ಅವಲಂಬಿತವಾಗಿರುವ ಕಾವೇರಿ ಕುಡಿಯುವ ನೀರು ಸರಬರಾಜಿನಲ್ಲಿ ಶೇ.5ರಷ್ಟು ವ್ಯತ್ಯಯವಾಗಲಿದೆ. ಆದ್ದರಿಂದ ಕಾವೇರಿ 5ನೇ ಹಂತದ ಯೋಜನೆಯ ಹಾರೋಹಳ್ಳಿ ಮತ್ತು ತಾತಗುಣಿ ಪಂಪಿಂಗ್ ಘಟಕ ವ್ಯಾಪ್ತಿಯಿಂದ ಪೂರೈಕೆ ಆಗುತ್ತಿದ್ದ ಬಡಾವಣೆಗಳಲ್ಲಿ ನೀರು ಪೂರೈಕೆಯಲ್ಲಿ ತೊಂದರೆ ಆಗಲಿದೆ.
ಈ ಕುರಿತು ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು, ನೀರು ಪೂರೈಕೆ ಕೊರತೆ ಎದುರಿಸುವ ನಗರವಾಸಿಗಳು ಜಲಮಂಡಳಿಗೆ ಸಹಕರಿಸಬೇಕು ಎಂದು ಪ್ರಟಕಣೆಯಲ್ಲಿ ಕೋರಿದ್ದಾರೆ.

ಗ್ರೀನ್ ಸ್ಟಾರ್ ಚಾಲೇಂಜ್ಗೆ ವ್ಯಾಪಕ ಸ್ಪಂದನೆ
ನಗರದಲ್ಲಿ ನೀರು ಉಳಿತಾಯದ ಉತ್ತಮ ಕ್ರಮಗಳನ್ನು ಅಳವಡಿಸಿಕೊಳ್ಳಲು ಅನುವು ಮಾಡಿಕೊಡುವಂತಹ ಪಂಚಸೂತ್ರಗಳ ಅಳವಡಿಕೆಯ ಗ್ರೀನ್ ಸ್ಟಾರ್ ಚಾಲೆಂಜ್ ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಎರಡು ವಾರಗಳಲ್ಲಿ ಗ್ರೀನ್ ಸ್ಟಾರ್ ರೇಟಿಂಗ್ ಪಡೆಯಲು 629 ಕ್ಕೂ ಹೆಚ್ಚು ಕಟ್ಟಡಗಳು ಹಾಗೂ ಸಂಸ್ಥೆಗಳು ನೊಂದಣಿ ಮಾಡಿಕೊಂಡಿವೆ ಎಂದು BWSSB ತಿಳಿಸಿದೆ.
ನೀರು ಉಳಿಸಿ ಬೆಂಗಳೂರು ಬೆಳೆಸಿ ಕಾರ್ಯಕ್ರಮದ ಪ್ರಮುಖ ಭಾಗವಾದ ಗ್ರೀನ್ ಸ್ಟಾರ್ ಚಾಲೆಂಜ್ ನ ಪಂಚಸೂತ್ರಗಳನ್ನು ಅಳವಡಿಸಿಕೊಂಡು ನೀರು ಉಳಿತಾಯದ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕರೆ ನೀಡಿತ್ತು.
ಜಲಮಂಡಳಿಯ ಈ ಕರೆಗೆ ಬೆಂಗಳೂರು ಆಪಾರ್ಟ್ಮೆಂಟ್ ಫೆಡರೇಷನ್, ಎಫ್ಕೆಸಿಸಿಐ, ಪೀಣ್ಯ ಕೈಗಾರಿಕಾ ಸಂಘ, ಕ್ರೆಡೈ ಬೆಂಗಳೂರು ಸೇರಿದಂತೆ ಹಲವಾರು ಸಂಘ ಸಂಸ್ಥೆಗಳು ಸ್ವಯಂ ಪ್ರೇರಿತವಾಗಿ ತಮ್ಮ ಬೆಂಬಲ ವ್ಯಕ್ತಪಡಿಸಿದ್ದವು. ಗ್ರೀನ್ ಸ್ಟಾರ್ ರೇಟಿಂಗ್ ಪಡೆಯಲು ಒಟ್ಟು 416 ಅಪಾರ್ಟ್ಮೆಂಟ್ಗಳು, 68 ಸರ್ಕಾರ ಕಟ್ಟಡ ಮತ್ತು 52 ವಾಣಿಜ್ಯ ಕಟ್ಟಡಗಳು ಆಸಕ್ತಿ ವಹಿಸಿವೆ ಎಂದು ತಿಳಿಸಿದೆ.
ಬೆಂಗಳೂರಿನಲ್ಲಿ ಸದ್ಯ ಮಳೆಗಾಲ ಆರಂಭವಾಗಿದೆ. ರಾಜ್ಯದ ಇತರ ಕಡೆಗಳಲ್ಲೂ ಉತ್ತಮ ಮಳೆಯ ವಾತಾವರಣ ಕಂಡು ಬಂದಿದೆ. ಹೀಗಾಗಿ ಹಂತ ಹಂತವಾಗಿ ಜಲಾಶಯಗಳು ಭರ್ತಿಯಾದರೆ, ಬೆಂಗಳೂರಿಗೆ ನೀರಿನ ಸಮಸ್ಯೆಗೆ ಪರಿಹಾರ ಸಿಗಲಿದೆ. ಸದ್ಯ ಬೆಂಗಳೂರು ಜಲಮಂಡಳಿಯ ಕಾವೇರಿ ಐದನೇ ಹಂತದ ಯೋಜನೆ ಮೇಲೆ ಭವಿಷ್ಯ ಬೆಂಗಳೂರು ನೀರಿನ ಭರವಸೆ ಇಟ್ಟುಕೊಂಡಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications