ಬೆಂಗಳೂರಿನ ಪ್ರಾಣಿಗಳ ಚಿತಾಗಾರ ಹೊಸವರ್ಷಕ್ಕೆ ಆರಂಭ
ಬೆಂಗಳೂರು, ನ.24 : ಬೆಂಗಳೂರಿನಲ್ಲಿ ಇನ್ನು ಮುಂದೆ ಪ್ರಾಣಿಗಳು ಸತ್ತರೆ ಅವುಗಳ ಅಂತ್ಯ ಸಂಸ್ಕಾರ ನೆರವೇರಿಸಲು ಚಿತಾಗಾರದ ದೊರೆಯುಲಿದೆ. ಸುಮನಹಳ್ಳಿ ಬಳಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ತಯಾರಾಗುತ್ತಿರುವ ಈ ಚಿತಾಗಾರದ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದೆ.
ಕೆಲವು ದಿನಗಳ ಹಿಂದೆ ಬಿಬಿಎಂಪಿ ಮೇಯರ್ ಎನ್.ಶಾಂತ ಕುಮಾರಿ ಅವರು ಚಿತಾಗಾರಕ್ಕೆ ಭೇಟಿ ನೀಡಿ ಕಾಮಗಾರಿಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ದೇಶದಲ್ಲೇ ಮೊಟ್ಟಮೊದಲ ಪ್ರಯತ್ನವಿದಾಗಿದ್ದು, ಸಾಕುಪ್ರಾಣಿಗಳು ಸತ್ತರೆ ಅವುಗಳ ಅಂತ್ಯ ಸಂಸ್ಕಾರವನ್ನು ಇಲ್ಲಿ ನೆರವೇರಿಸಬಹುದಾಗಿದೆ.

ಚಿತಾಗಾರದ ನಿರ್ಮಾಣ ಕಾರ್ಯ ಅಂತಿಮ ಹಂತಕ್ಕೆ ಬಂದಿದ್ದು, ಹೊಸವರ್ಷದಲ್ಲಿ ಪ್ರಾಣಿಗಳ ಚಿತಾಗಾರ ಕಾರ್ಯಾರಂಭ ಮಾಡಲಿದೆ. 2013ರಲ್ಲಿ ಪ್ರಾಣಿ ಚಿತಾಗಾರ ನಿರ್ಮಾಣಕ್ಕೆ ಬಿಬಿಎಂಪಿ ಚಾಲನೆ ನೀಡಿತ್ತು. ನಗರದಲ್ಲಿ ಸತ್ತಪ್ರಾಣಿಗಳಿಂದ ಆಗುತ್ತಿರುವ ಮಾಲಿನ್ಯ ಹಾಗೂ ಸಾಂಕ್ರಾಮಿಕ ರೋಗ ತಡೆಯಲು ಚಿತಾಗಾರವನ್ನು ನಿರ್ಮಿಸಲಾಗಿದೆ. [ಮೇಯರ್ ಸಂದರ್ಶನ ಓದಿ]
ಯಾವ ಪ್ರಾಣಿ ಸುಡಬಹುದು : ಹಸು, ಎಮ್ಮೆ, ನಾಯಿ, ಬೆಕ್ಕು, ಪಾರಿವಾಳ, ಕೋತಿ ಸೇರಿದಂತೆ ಎಲ್ಲಾ ವಿಧವಾದ ಪ್ರಾಣಿಗಳನ್ನೂ ಚಿತಾಗಾರದಲ್ಲಿ ಸುಡಬಹುದಾಗಿದೆ. ದೊಡ್ಡಪ್ರಾಣಿಗಳ ಮೃತದೇಹವನ್ನು ಕತ್ತರಿಸಲು ಚಿತಾಗಾರದಲ್ಲಿ ಕಸಾಯಿಖಾನೆ ಕೊಠಡಿಯನ್ನು ಸ್ಥಾಪಿಸಲಾಗುತ್ತಿದೆ. ಅಪಘಾತದಲ್ಲಿ ಸಾವನ್ನಪ್ಪಿದ ಪ್ರಾಣಿಗಳ ಮರಣೋತ್ತರ ಪರೀಕ್ಷೆ ನಡೆಸಲು ಪಶು ವೈದ್ಯರ ಕೊಠಡಿಯನ್ನು ನಿರ್ಮಿಸಲಾಗುತ್ತಿದೆ.

ವಿದ್ಯುತ್ ಚಿತಾಗಾರಕ್ಕೆ ಜನರೇಟರ್ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದ್ದು, ವಿದ್ಯುತ್ ಕೈ ಕೊಟ್ಟರೆ ಉಪಯೋಗವಾಗಲಿದೆ. ಪ್ರಾಣಿಗಳ ದೇಹ ಸುಟ್ಟು ಬೂದಿಯಾಗಲು ಸುಮಾರು ಎರಡು ಗಂಟೆ ಬೇಕಾಗಬಹುದು ಎಂದು ಅಂದಾಜಿಸಲಾಗಿದ್ದು, ಇಲ್ಲಿ ಸುಡುವ ಪ್ರಾಣಿಗಳಿಗೆ ಇಂತಿಷ್ಟು ಶುಲ್ಕ ವಿಧಿಸಲಾಗುತ್ತದೆ.
ಚಿತಾಗಾರ ಕಾರ್ಯಾರಂಭ ಮಾಡುತ್ತಿದ್ದಂತೆ ಸತ್ತ ಪ್ರಾಣಿಗಳನ್ನು ಎಲ್ಲೆಂದರಲ್ಲಿ ಸುಡುವ, ಹೂಳುವ ಪದ್ಧತಿಯನ್ನು ನಿಷೇಧಿಸುವ ಬಗ್ಗೆಯೂ ಪಾಲಿಕೆ ಚಿಂತನೆ ನಡೆಸಿದೆ. ನಗರದಲ್ಲಿ ಸತ್ತ ಪ್ರಾಣಿಗಳ ಬಗ್ಗೆ ಮಾಹಿತಿ ಪಡೆದು ಚಿತಾಗಾರಕ್ಕೆ ಕರೆದೊಯ್ಯುವ ಕೆಲಸವನ್ನು ಪಾಲಿಕೆಯೇ ನಿರ್ವಹಿಸಲಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications