Meat Sale in Bengluru: ಬೆಂಗಳೂರಲ್ಲಿ ಕೋಳಿ - ಮಾಂಸ ಮಳಿಗೆಗಳಿಗೆ ಜಿಬಿಎ ದಿಢೀರ್ ಶಾಕ್: ನಿಯಮ ಉಲ್ಲಂಘಿಸುವ ಅಂಗಡಿಗಳಿಗೆ ನೋಟಿಸ್
Meat Sale in Bengluru: ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಭಿವೃದ್ಧಿ ವ್ಯಾಪ್ತಿಯಲ್ಲಿ ಕೋಳಿ ಮತ್ತು ಮಾಂಸ ಮಾರಾಟ ಮಳಿಗೆಗಳ ವಿಶೇಷ ತಪಾಸಣೆ ಕಾರ್ಯಾಚರಣೆ ನಡೆಸುವುದಕ್ಕೆ ನಿರ್ಧರಿಸಲಾಗಿದೆ. ವಿವಿಧ ಪಾಲಿಕೆಗಳ ವ್ಯಾಪ್ತಿಯಲ್ಲಿ ಮಾಂಸ ಮಾರಾಟಕ್ಕೆ ಸಂಬಂಧಿಸಿದಂತೆ ವಿಶೇಷ ಕಾರ್ಯಾಚರಣೆ ನಡೆಯಲಿದೆ. ಬೆಂಗಳೂರು ಉತ್ತರ ನಗರ ಪಾಲಿಕೆಯ ಯಲಹಂಕ ಉಪನಗರ ವ್ಯಾಪ್ತಿಯಲ್ಲಿರುವ ಕೋಳಿ ಹಾಗೂ ಮಾಂಸ ಮಾರಾಟ ಮಳಿಗೆಗಳಲ್ಲಿ ನಿಯಮಿತ ಆರೋಗ್ಯ ಮತ್ತು ಪರವಾನಗಿ ಮಾನ್ಯತೆ ಅನುಸರಣೆ ಪರಿಶೀಲನೆ ನಡೆಸುವ ಉದ್ದೇಶದಿಂದ ನಗರ ಪಾಲಿಕೆಯ ಪಶುಪಾಲನಾ ಇಲಾಖೆ ವತಿಯಿಂದ ವಿಶೇಷ ತಪಾಸಣೆ ಕಾರ್ಯಾಚರಣೆಯನ್ನು ದಿನಾಂಕ 27.02.2026 ರಂದು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ತಪಾಸಣೆ ವೇಳೆ ಒಟ್ಟು 10 ಕೋಳಿ ಮತ್ತು ಮಾಂಸ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿದ್ದು, ಪರಿಶೀಲನೆ ಮಾಡಲಾಗಿದೆ. ಈ ಮಾದರಿಯನ್ನು ಬೆಂಗಳೂರಿನ ವಿವಿಧ ಪ್ರದೇಶಗಳಲ್ಲೂ ಮಾಡುವ ಸಾಧ್ಯತೆ ಇದೆ.

ಕೋಳಿ ಮತ್ತು ಮಾಂಸ ಮಾರಾಟ ಮಳಿಗೆಗಳಲ್ಲಿ ಈ ವಿಷಯ ಪರಿಶೀಲನೆ
1. ವ್ಯಾಪಾರ ಪರವಾನಗಿ (Trade License) ಮಾನ್ಯತೆ
2. ಆರೋಗ್ಯ ಮತ್ತು ಸ್ವಚ್ಛತಾ ಮಾನದಂಡಗಳು
3. ಶೀತಲೀಕರಣ ವ್ಯವಸ್ಥೆ (Cold Storage)
4. ಮಾಂಸದ ಸಂಗ್ರಹಣೆ ಹಾಗೂ ಪ್ರದರ್ಶನ ವಿಧಾನ
5. ಕಸದ ವಿಲೇವಾರಿ ವ್ಯವಸ್ಥೆ
6. ಸಿಬ್ಬಂದಿ ಆರೋಗ್ಯ ಮತ್ತು ಸುರಕ್ಷತಾ ಕ್ರಮಗಳು
ಮಾನದಂಡಗಳನ್ನು ಪಾಲಿಸದ ಮಳಿಗೆಗಳಿಗೆ ನೋಟಿಸ್ ಜಾರಿ
ಇನ್ನು ಬೆಂಗಳೂರಿನಲ್ಲಿ ಕೋಳಿ ಮತ್ತು ಮಾಂಸ ಮಾರಾಟ ಮಳಿಗೆಗಳ ಕೆಲವೊಂದು ಪ್ರಮುಖ ತಪಾಸಣೆ ಮಾಡುವುದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಮುಂದಾಗಿದೆ. ತಪಾಸಣೆಯಲ್ಲಿ ಕೆಲವು ಮಳಿಗೆಗಳಲ್ಲಿ ಪರವಾನಗಿ ನವೀಕರಣ ಮಾಡದಿರುವುದು, ಸ್ವಚ್ಛತಾ ಕೊರತೆ, ಮತ್ತು ನಿಯಮಿತ ಆರೋಗ್ಯ ಮಾನದಂಡಗಳನ್ನು ಸಂಪೂರ್ಣವಾಗಿ ಪಾಲಿಸದಿರುವುದು ಕಂಡುಬಂದಿದ್ದು, ಸಂಬಂಧಿಸಿದ ಮಳಿಗೆ ಮಾಲೀಕರಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಅಗತ್ಯ ದಾಖಲೆಗಳನ್ನು ಹೊಂದಿರದ ಹಾಗೂ ನಿಯಮ ಉಲ್ಲಂಘನೆ ಮಾಡಿದ ಮಳಿಗೆಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪಾಲಿಕೆಯ ನಿಯಮಾವಳಿಗಳ ಪ್ರಕಾರ, ಮಾಂಸ ಮಾರಾಟ ಮಳಿಗೆಗಳು ಸ್ವಚ್ಛತೆ, ಆರೋಗ್ಯ ಮತ್ತು ಆಹಾರ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ, ಮಾಂಸವನ್ನು ಸ್ವಚ್ಛ ಹಾಗೂ ವ್ಯಾಪಾರ ಪರವಾನಗಿ ಹೊಂದಿರುವ ಮಳಿಗೆಗಳಿಂದ ಮಾತ್ರ ಖರೀದಿಸಲು ನಗರ ಪಾಲಿಕೆ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಮುಂದಿನ ದಿನಗಳಲ್ಲಿ ಸಹ ಯಲಹಂಕ ಉಪನಗರ ಸೇರಿದಂತೆ ನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ವಲಯಗಳಲ್ಲಿ ಇಂತಹ ತಪಾಸಣೆ ಕಾರ್ಯಾಚರಣೆಗಳನ್ನು ನಿರಂತರವಾಗಿ ನಡೆಸಲಾಗುವುದು. ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ. ಈ ತಪಾಸಣೆ ವೇಳೆ ಮುಖ್ಯ ಪಶುವೈದ್ಯಾಧಿಕಾರಿಗಳಾದ ಡಾ. ಆರ್. ಮನೋಹರ್ ಹಾಗೂ ಸಿಬ್ಬಂದಿ ನಾರಾಯಣರೆಡ್ಡಿ ಸೇರಿದಂತೆ ಹಲವರು ಹಾಜರಿದ್ದರು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 1533, ಮುಖ್ಯ ಪಶು ವೈದ್ಯಾಧಿಕಾರಿಗಳ ಕಚೇರಿ, ಅಮೃತಹಳ್ಳಿ ಮುಖ್ಯರಸ್ತೆ, ಬ್ಯಾಟರಾಯನಪುರ, ಬೆಂಗಳೂರು.
ಇ-ಮೇಲ್[email protected]
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications