Namma Metro: ಏರ್ಪೋರ್ಟ್ ಮೆಟ್ರೋ ನೀಲಿ ಮಾರ್ಗಕ್ಕೆ ಬರಲಿವೆ 2 ಡ್ರವರ್ಲೆಸ್ ರೈಲು
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಜಾಲ ವಿಸ್ತರಣೆಗೆ ವೇಗ ಸಿಕ್ಕಿದೆ. ಏಕೆಂದರೆ ಈಗಾಗಲೇ ಗುಲಾಬಿ ಮಾರ್ಗ ತೆರೆಯಲು ಸಜ್ಜಾಗಿರುವ ಬೆಂಗಳೂರು ಮೆಟ್ರೋ ರೈಲು ನಿಗಮದ (BMRCL) ನೀಲಿ ಮಾರ್ಗಕ್ಕೆ (Blue Line Metro) ಮುಂದಿನ ವಾರಗಳಲ್ಲಿ ಬೆಂಗಳೂರು ಅರ್ಥ್ ಮೂವರ್ಸ್ ಲಿಮಿಟೆಡ್ (BEML) ಎರಡು ಡ್ರೈವರ್ಲೆಸ್ ಮೆಟ್ರೋ ರೈಲು ಸೆಟ್ಗಳನ್ನು ಒದಗಿಸಲಿದೆ.
ವಾಹನ ದಟ್ಟಣೆ ಇರುವ ಬೆಂಗಳೂರು ಹೊರವರ್ತುಲ ರಸ್ತೆಯ ಕೆ.ಆರ್.ಪುರಂ, ಮಹಾದೇವಪುರ, ಎಚ್ಎಸ್ಆರ್ ಬಡಾವಣೆ, ಬೆಳ್ಳಂದೂರು, ಮಾರತ್ತಹಳ್ಳಿ ಸೇರಿದಂತೆ ಈ ಭಾಗಗಳಲ್ಲಿ ಐಟಿ ಕಂಪನಿಗಳ ಸಂಖ್ಯೆ ಹೆಚ್ಚಿವೆ. ಇದೆಲ್ಲ ಗಮನದಲ್ಲಿಟ್ಟುಕೊಂಡೆ ನಿರ್ಮಿಸಲಾಗುತ್ತಿರುವ ಸಿಲ್ಕ್ ಬೋರ್ಡ್-ಕೆ.ಆರ್.ಪುರಂ ನೀಲಿ ಮೆಟ್ರೋ ಮಾರ್ಗಕ್ಕಾಗಿ ಎರಡು ಮೆಟ್ರೋ ರೈಲು ಸೆಟ್ಗಳು ಶೀಘ್ರವೇ ಬೈಯಪ್ಪನಹಳ್ಳಿ ಡಿಪೋಗೆ ಬರಲಿವೆ.

ಸುಮಾರು 55 ಕಿಲೋ ಮೀಟರ್ ಉದ್ದದ ನೀಲಿ ಮೆಟ್ರೋ ಮಾರ್ಗವು ಎರಡು ಹಂತಗಳಲ್ಲಿ ನಿರ್ಮಾಣಗೊಳ್ಳುತ್ತಿದೆ. ಸಿಲ್ಕ್ ಬೋರ್ಡ್ನಿಂದ ಕೆ.ಆರ್.ಪುರಂವರೆಗೆ ಮೊದಲ ಹಂತದಲ್ಲಿ (2ಎ) 18 ಕಿಲೋ ಮೀಟರ್, ಎರಡನೇ ಹಂತದಲ್ಲಿ ಕೆ.ಆರ್.ಪುರಂನಿಂದ ದೇವನಹಳ್ಳಿ ವಿಮಾನ ನಿಲ್ದಾಣವರೆಗೆ ಸುಮಾರು 37 ಕಿಲೋ ಮೀಟರ್ (2ಬಿ) ಯೋಜನೆಯ ಕಾಮಗಾರಿ ನಡೆಯುತ್ತಿದೆ.
ಇದೀಗ ಎರಡು ಸೆಟ್ ರೈಲುಗಳನ್ನು ಬಿಇಎಂಎಲ್ ಮೆಟ್ರೊ ಡಿಪೋಗೆ ಕಳುಹಿಸಲಿದೆ. ರೈಲುಗಳು ಬರುತ್ತಿದ್ದಂತೆ ಲಗೇಜ್ ರ್ಯಾಕ್ಗಳೊಂದಿಗೆ ಪರೀಕ್ಷೆಗಳು ಆರಂಭವಾಗಲಿವೆ ಎಂದು ಬಿಎಂಆರ್ಸಿಎಲ್ ಮೂಲಗಳು ಮಾಹಿತಿ ನೀಡಿವೆ.
ಐದು ರೈಲುಗಳಿಂದ ಗುಲಾಬಿ ಮಾರ್ಗ ಕಾರ್ಯಾಚರಣೆ
ಮೊದಲ ಹಂತದಲ್ಲಿ ಮುಂದಿನ ಮೇ ತಿಂಗಳಲ್ಲಿ ತೆರೆಯಲಿರುವ ಮೆಟ್ರೋ ಪಿಂಕ್ ಮಾರ್ಗಕ್ಕೆ (Pink Line) ರೈಲು ಬೋಗಿ ಉತ್ಪಾದಕ ಕಂಪನಿ ಬಿಇಎಂಎಲ್ ಈಗಾಗಲೇ ಐದು ರೈಲು ಸೆಟ್ ನೀಡಿದೆ. ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗೆ ಒಟ್ಟು 7.5 ಕಿಲೋ ಮೀಟರ್ ಮಾರ್ಗದಲ್ಲಿ ಸದ್ಯಕ್ಕೆ 5 ರೈಲುಗಳಿಂದ ಕಾಯಾಚರಣೆ ನಡೆಸಲು ಪ್ಲ್ಯಾನ್ ಮಾಡಿಕೊಳ್ಳಲಾಗಿದೆ.
ಈ ಸಂಬಂಧ ಪ್ರೊಟೋಟೈಪ್ ಮಾದರಿಯ ಡ್ರೈವರ್ಲೆಸ್ ರೈಲುಗಳ ಪ್ರಾಯೋಗಿಕ ಸಂಚಾರ, ಟ್ರ್ಯಾಕ್ ಪರಿಶೀಲನೆ, ರೈಲುಗಳ ತಪಾಸಣೆ, ವಿವಿಧ ಪರೀಕ್ಷೆಗಳು ನಡೆಯುತ್ತಿವೆ. ಏಪ್ರಿಲ್ ತಿಂಗಳಲ್ಲಿ ಪರೀಕ್ಷೆಗಳು ಪೂರ್ಣಗೊಳ್ಳುತ್ತಿದ್ದಂತೆ ಮೇ ತಿಂಗಳಲ್ಲಿ ಪಿಂಕ್ ಲೈನ್ ಕಾರ್ಯಾಚರಣೆ ಆರಂಭವಾಗಲಿದೆ. ಕಳೆದ ಶನಿವಾರದಿಂದ ಆರ್ಡಿಓಎಸ್ ಅಧಿಕಾರಿಗಳು ಅಂತಿಮ ಪರಿಶೀಲನೆ, ಸುರಕ್ಷತಾ ತಪಾಸಣೆ ಕೈಗೊಂಡಿದ್ದಾರೆ.
ಉಳಿದ 13 ಕಿಲೋ ಮೀಟರ್ ತಾವೆರೆಕರೆಯಿಂದ ನಾಗವಾರವರೆಗಿನ ಪಿಂಕ್ ಲೈನ್ ಮಾರ್ಗವನ್ನು ಎರಡನೇ ಹಂತದಲ್ಲಿ ಇದೇ ಡಿಸೆಂಬರ್ 2026ಕ್ಕೆ ತೆರೆಯಲು ಅಧಿಕಾರಿಗಳು ಸಜ್ಜಾಗಿದೆ.
-
Silk Board: ಹಳದಿ-ನೀಲಿ ಮೆಟ್ರೋ ಲೈನ್ ಪ್ರಯಾಣಿಕರಿಗಾಗಿ 'ಟ್ರಾವೆಲೇಟರ್-ಕನೆಕ್ಟಿಂಗ್ ವಾಕ್ವೇ ಸಂಪರ್ಕ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications