Bengaluru Metro: ಬೆಂಗಳೂರು ಮೆಟ್ರೋ ಪ್ರಯಾಣ ದರ ಶೇ 5% ಹೆಚ್ಚಳ: ಈ ದಿನದಿಂದ ಹೊಸ ದರ ಜಾರಿ
ಬೆಂಗಳೂರು: ಬೆಂಗಳೂರು ನಮ್ಮ ಮೆಟ್ರೋದ ಪ್ರಯಾಣ ದರವನ್ನು ಹೆಚ್ಚಳ ಮಾಡುವುದಕ್ಕೆ ಕರ್ನಾಟಕ ಕಾಂಗ್ರೆಸ್ ಸರ್ಕಾರವು ಅನುಮತಿ ನೀಡಿದೆ. ಕಳೆದ ವರ್ಷವಷ್ಟೇ ನಮ್ಮ ಮೆಟ್ರೋದ ಪ್ರಯಾಣ ದರ ಹೆಚ್ಚಳ ಮಾಡಲಾಗಿತ್ತು. ಕಳೆದ ವರ್ಷ ನಮ್ಮ ಮೆಟ್ರೋದ ಪ್ರಯಾಣ ದರವನ್ನು ಶೇ 71.5ರಷ್ಟು ಹೆಚ್ಚಳ ಮಾಡಲಾಗಿತ್ತು. ಈಗಾಗಲೇ ನಮ್ಮ ಮೆಟ್ರೋದ ಪ್ರಯಾಣ ದರವು ದುಬಾರಿಯಾಗಿದೆ. ಈ ರೀತಿ ಇರುವಾಗ ಮತ್ತೆ ಪ್ರಯಾಣ ದರವನ್ನು ಶೇ. 5ರಷ್ಟು ಹೆಚ್ಚಳ ಮಾಡುವುದಕ್ಕೆ ಬಿಎಂಆರ್ಸಿಎಲ್ ನಿರ್ಧರಿಸಿದೆ. ಇದಕ್ಕೆ ಕರ್ನಾಟಕ ಕಾಂಗ್ರೆಸ್ ಸರ್ಕಾರವೂ ಸಹ ಸಮ್ಮತಿ ನೀಡಿದೆ. ಯಾವಾಗಿನಿಂದ ಪರಿಷ್ಕೃತ ದರ ಜಾರಿ ಆಗಲಿದೆ, ಎಷ್ಟು ಹೆಚ್ಚಳವಾಗಲಿದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.
ಬೆಂಗಳೂರಿನ ಸಾರಿಗೆ ಜೀವನಾಡಿಯಾಗಿರುವ ನಮ್ಮೆ ಮೆಟ್ರೋದ ಪ್ರಯಾಣ ದರವು ಮತ್ತೊಮ್ಮೆ ಹೆಚ್ಚಳವಾಗುತ್ತಿದೆ. ಈ ಬಾರಿ ಮೆಟ್ರೋದ ಪ್ರಯಾಣ ದರವನ್ನು ಶೇ5% ರಷ್ಟು ಹೆಚ್ಚಳ ಮಾಡುವುದಕ್ಕೆ ನಿರ್ಧರಿಸಲಾಗಿದೆ. ಇನ್ನು ಪರಿಷ್ಕೃತ ದರವು ಫೆಬ್ರವರಿ 9ರಿಂದ ಜಾರಿಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಇದೇ 9ರ ಸೋಮವಾರದಿಂದಲೇ ಹೊಸ ದರ ಜಾರಿಗೆ ಬರಲಿದ್ದು, ಹೊಸ ಪ್ರಯಾಣ ದರವು ಕನಿಷ್ಠ 1 ರೂಪಾಯಿ ಹಾಗೂ ಗರಿಷ್ಠ 5 ರೂಪಾಯಿ ಹೆಚ್ಚಳವಾಗಲಿದೆ. ಇನ್ನು ಕನಿಷ್ಠ 10 ರೂಪಾಯಿ ಇರುವ ದರವು 11 ರೂಪಾಯಿಗೆ, ಗರಿಷ್ಠ 90 ರೂಪಾಯಿ ಇರುವ ಬೆಲೆಯು 95 ರೂಪಾಯಿಗೆ ಹೆಚ್ಚಳವಾಗಲಿದೆ.ಇನ್ನು ಮೆಟ್ರೋ ಪ್ರಯಾಣ ದರವನ್ನು ಶೇ 5 ಹೆಚ್ಚಳ ಮಾಡಿದ ಸಂದರ್ಭದಲ್ಲಿ 30 ರೂಪಾಯಿ ಇರುವ ದರವು, 31.5 ಆಗಲಿದೆ. ಆದರೆ, ಚಿಲ್ಲರೆಗೆ ಸಮಸ್ಯೆ ತಪ್ಪಿಸುವ ಉದ್ದೇಶದಿಂದ ಪೈಸೆ ಇರುವುದನ್ನು ರೌಂಡ್ ಫಿಗರ್ ಮಾಡುವ ಸಾಧ್ಯತೆ ಇದೆ. ಈ ರೀತಿ ಮಾಡಿದರೆ ಬೆಲೆಯು 32 ರೂಪಾಯಿ ಆಗಲಿದೆ.
ಮೆಟ್ರೋ ಪ್ರಯಾಣ ದರ ಹೆಚ್ಚಳಕ್ಕೆ ಕಾರಣವೇನು
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್)ವು ಪ್ರತಿ ವರ್ಷ ಶೇ 5ರಷ್ಟು ಪ್ರಯಾಣ ದರವನ್ನು ಏರಿಕೆ ಮಾಡಬಹುದು ಎಂದು ದರ ನಿಗದಿ ಸಮಿತಿ (ಎಫ್ಎಫ್ಸಿ) 2025ರಲ್ಲಿ ಶಿಫಾರಸು ಮಾಡಿತ್ತು. ಈ ವಿಷಯದ ಬಗ್ಗೆ ಈಚೆಗೆ ಬಿಎಂಆರ್ಸಿಎಲ್ ಮಂಡಳಿಯ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಶೇ 5ರಷ್ಟು ಹೆಚ್ಚಳಕ್ಕೆ ಅನುಮೋದನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿತ್ತು. ಕರ್ನಾಟಕ ಕಾಂಗ್ರೆಸ್ ಸರ್ಕಾರವು ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡುವ ಪ್ರಸ್ತಾವನೆಗೆ ಅನುಮೋದನೆ ನೀಡಿದೆ.
ಸಾರ್ವಜನಿಕರಿಂದ ವಿರೋಧ
ಇನ್ನು ನಮ್ಮ ಮೆಟ್ರೋ ಪ್ರಯಾಣ ದರವನ್ನು ಹೆಚ್ಚಳ ಮಾಡುತ್ತಿರುವುದಕ್ಕೆ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಬೆಂಗಳೂರು ನಮ್ಮ ಮೆಟ್ರೋದ ಪ್ರಯಾಣ ದರವು ಈಗಾಗಲೇ ದುಬಾರಿ ಆಗಿದೆ. ಮುಂದುವರಿದು ಇನ್ನಷ್ಟು ಹೆಚ್ಚಳ ಮಾಡಿದರೆ ಹೊರೆ ಆಗಲಿದೆ. ಅಲ್ಲದೇ ಹಲವರು ಪ್ರಯಾಣಿಕರು ಮೆಟ್ರೋ ಪ್ರಯಾಣ ಮಾಡುವುದನ್ನು ಬಿಡಬಹುದು, ಇದರಿಂದ ಬೆಂಗಳೂರಿನ ಟ್ರಾಫಿಕ್ ಜಾಮ್ ಸಮಸ್ಯೆ ಇನ್ನಷ್ಟು ಹೆಚ್ಚಳವಾಗಲಿದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.
-
Namma Metro: ಏರ್ಪೋರ್ಟ್ ಮೆಟ್ರೋ ನೀಲಿ ಮಾರ್ಗಕ್ಕೆ ಬರಲಿವೆ 2 ಡ್ರವರ್ಲೆಸ್ ರೈಲು -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
IPL 2026: ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್












Click it and Unblock the Notifications