Bengaluru Metro Pillar Mishap: ಮೆಟ್ರೊ ಪಿಲ್ಲರ್ ಕುಸಿತಕ್ಕೆ ಕಾರಣ ತಿಳಿಸಿದ ತಜ್ಞರು, ಐಐಎಸ್ಸಿ ವರದಿಯಲ್ಲೇನಿದೆ?
ಬೆಂಗಳೂರು, ಜನವರಿ, 22: ಇತ್ತೀಚೆಗೆ ಬೆಂಗಳೂರಿನ ಹೆಣ್ಣೂರು ಕ್ರಾಸ್ ಬಳಿ ಎಚ್ಬಿಆರ್ ಲೇಔಟ್ನಲ್ಲಿ ಮೆಟ್ರೋ ಯೋಜನೆಯ ಪಿಲ್ಲರ್ ಕುಸಿದು ಅಮಾಯಕ ತಾಯಿ-ಮಗ ಜೀವ ಕಳೆದುಕೊಂಡ ದಾರುಣ ಘಟನೆ ಬಗ್ಗೆ ಐಐಎಸ್ಸಿ ವರದಿ ನೀಡಿದೆ.
ನಿರ್ಮಾಣ ಹಂತದ ಪಿಲ್ಲರ್ ಕುಸಿದು ತಾಯಿ ಮತ್ತು ಮಗ ಸಾವನ್ನಪ್ಪಿದ 11 ದಿನಗಳ ನಂತರ ಬೆಂಗಳೂರಿನ ಐಐಎಸ್ಸಿಯ ಸಿವಿಲ್ ಎಂಜಿನಿಯರಿಂಗ್ ವಿಭಾಗವು 27 ಪುಟಗಳ ವರದಿಯನ್ನು ಸಲ್ಲಿಸಿದೆ. ಇದರಲ್ಲಿ ಪಿಲ್ಲರ್ಗಳ ನಡುವಿನ ಅಂತರವೇ ಅಪಘಾತಕ್ಕೆ ಕಾರಣವಾದ ಅಂಶ ಎಂದು ತಿಳಿಸಿದೆ.
ಭಾರತೀಯ ವಿಜ್ಞಾನ ಸಂಸ್ಥೆಯ (IISC) ವಿಜ್ಞಾನಿ ಡಾ.ಚಂದ್ರ ಕಿಶನ್ ಈ ಅವಘಡಕ್ಕೆ ಯಾವುದೇ ಗುತ್ತಿಗೆದಾರ ಅಥವಾ ಎಂಜಿನಿಯರ್ ಅನ್ನು ದೂಷಿಸಿಲ್ಲ. ಆದರೆ, ಇಂತಹ ಎತ್ತರದ ರಚನೆಗಳ ನಿರ್ಮಾಣದ ಯೋಜನೆಗಳನ್ನು ಕೈಗೊಳ್ಳುವಾಗ ಬಿಎಂಆರ್ಸಿಎಲ್ ಕೆಲವು ಬದಲಾವಣೆಗಳನ್ನು ಜಾರಿಗೆ ತರಬೇಕು ಎಂದು ಸೂಚಿಸಿದ್ದಾರೆ.

ಇಂತಹ ರಚನೆಯು 12 ಮೀಟರ್ಗಿಂತ ಎತ್ತರವಾಗಿರುವುದರಿಂದ, ಅದನ್ನು 18 ಮೀ ಮಾಡಲು ಎರಡು ರಾಡ್ಗಳನ್ನು ಸೇರಿಸಬೇಕು ಎಂದು ವಿಜ್ಞಾನಿ ಡಾ.ಚಂದ್ರ ಕಿಶನ್ ಸೂಚಿಸಿದ್ದಾರೆ.
ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ಗಳ ನಡುವೆ ಅಂತರವಿತ್ತು. ಹೀಗಾಗಿ ಸಪೋರ್ಟಿಂಗ್ ಕೇಬಲ್ಗಳು ಬೀಳುವುದಕ್ಕೆ ದಾರಿ ಮಾಡಿಕೊಡುತ್ತದೆ. ಸಮೀಪದಲ್ಲಿ ಮೇಲ್ಸೇತುವೆ ಇರುವುದರಿಂದ ಮೆಟ್ರೋ ಪಿಲ್ಲರ್ ಅದಕ್ಕಿಂತ ಎತ್ತರವಾಗಿರಬೇಕು ಎಂದು ವಿಜ್ಞಾನಿ ಡಾ.ಚಂದ್ರ ಕಿಶನ್ ಹೇಳಿದ್ದಾರೆ.
ಜೊತೆಗೆ ಹೆಬ್ಬಾಳ ಮೇಲ್ಸೇತುವೆ ಬಳಿಯೂ ಇದೇ ಮಾದರಿಯಲ್ಲಿ ಯೋಜನೆ ರೂಪಿಸಲಾಗಿದೆ ಎಂದು ತಿಳಿದು ಬಂದಿದ್ದು, ಯಾವುದೇ ಅಹಿತಕರ ಘಟನೆ ಮರುಕಳಿಸದಂತೆ ಸಂಪೂರ್ಣ ಕ್ರಮಕೈಗೊಳ್ಳಬೇಕಿದೆ ಎಂದು ಸೂಚನೆ ನೀಡಿದ್ದಾರೆ.

"ಮೊದಲೇ ಸರಿಯಾದ ವಿಧಾನವನ್ನು ರೂಪಿಸಿದ್ದರೆ ಮತ್ತು ಸ್ಪಷ್ಟವಾಗಿ ವ್ಯಾಖ್ಯಾನಿಸಿದ್ದರೆ ಇಂತಹ ಅವಘಡವನ್ನು ತಪ್ಪಿಸಬಹುದಿತ್ತು. ಬಲವಾದ ಗಾಳಿ ಮತ್ತು ಭರ್ಜರಿ ಮಳೆಯನ್ನು ಎದುರಿಸುವ ಯೋಜನೆಗಳಿಗೆ ಮತ್ತು ಎತ್ತರದ ರಚನೆಗಳಿಗೆ ಸರಿಯಾದ ವಿಧಾನವನ್ನು ಅನುಸರಿಸುವುದು ಮುಖ್ಯವಾಗಿದೆ" ಎಂದು ಹೇಳಿದ್ದಾರೆ.
ಇನ್ನು, ವರದಿಯಲ್ಲಿ ಕಳಪೆ ಗುಣಮಟ್ಟದ ವಸ್ತುಗಳನ್ನು ಬಳಸಿರುವ ಯಾವುದೇ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಬಳಸಿದ ವಸ್ತುಗಳ ಗುಣಮಟ್ಟ ಮತ್ತು ಪರೀಕ್ಷಾ ಪ್ರಮಾಣಪತ್ರಗಳನ್ನು ಮೌಲ್ಯಮಾಪನ ಮಾಡಲಾಗಿದೆ. ಈ ವರದಿಯಲ್ಲಿ ಪರೀಕ್ಷಾ ವರದಿಯನ್ನು ಸೇರಿಸಲಾಗಿದೆ ಎಂದು ತಿಳಿಸಿದ್ದಾರೆ.
ಇಂತಹ ಯೋಜನೆಗಳಿಗೆ ಕನಿಷ್ಠ 5 ರಿಂದ 10 ವರ್ಷಗಳ ಅನುಭವ ಹೊಂದಿರುವ ಕಾರ್ಮಿಕರನ್ನು ನಿಯೋಜಿಸಬೇಕು. ನೇಮಕಗೊಂಡ ಜೆಇಗಳು ಸರ್ಕಾರಿ ಏಜೆನ್ಸಿಗಳು ಮತ್ತು ಇಲಾಖೆಗಳ ಆಡಳಿತದ ಸುರಕ್ಷತಾ ಪರೀಕ್ಷೆಗಳನ್ನು ಬರೆಯಬೇಕು. ಎಂಜಿನಿಯರ್ಗಳಿಗೆ ಅಲ್ಪಾವಧಿ ಕೋರ್ಸ್ಗಳನ್ನು ನಡೆಸಬೇಕು. ಕೆಲಸಗಾರರಿಗೆ ಸುರಕ್ಷತಾ ಕ್ರಮಗಳ ಕುರಿತು ಸ್ಥಳೀಯ ಭಾಷೆಯಲ್ಲಿ ತರಗತಿಗಳನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಲಾಗಿದೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications