Namma Metro: ಸ್ಮಾರ್ಟ್ ಕಾರ್ಡ್ ಬಳಕೆದಾರರಿಗೆ BMRCL ಶಾಕ್, ಜನಾಕ್ರೋಶ
Namma Metro Updates: ಬೆಂಗಳೂರು ಮೆಟ್ರೋ ದಿನಕ್ಕೊಂದು ವಿಷಯಕ್ಕೆ ಸುದ್ದಿಯಾಗುತ್ತಿದೆ. ದರ ಹೆಚ್ಚಳ ಮಾಡಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು. ರಾತ್ರಿ 10.10ಕ್ಕೆ ಪ್ರಯಾಣಿಕರೊಬ್ಬರಿಗೆ ಮೆಟ್ರೋ ನಿಲ್ದಾಣ ನಿರಾಕರಿಸಿದ್ದ ಆರೋಪ BMRCL ವಿರುದ್ಧ ಕೇಳಿ ಬಂದಿದೆ. ಇದರ ಬೆನ್ನಲ್ಲೆ ಸ್ಮಾರ್ಟ್ ಬಳಕೆದಾರರಿಗೆ ನಮ್ಮ ಮೆಟ್ರೋ ನಿರ್ಧಾರ ಬೇಸರ ತರಿಸಿದೆ.
ಹೌದು, ಬೆಂಗಳೂರು ಮೆಟ್ರೋದ ಹಲವಾರು ದೈನಂದಿನ ಪ್ರಯಾಣಿಕರು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೇ ನಿರಾಶೆ ವ್ಯಕ್ತಪಡಿಸಿದ್ದಾರೆ. ಸ್ಮಾರ್ಟ್ ಕಾರ್ಡ್ ಬಳಸುವ ಪ್ರಯಾಣಿಕರು ಕನಿಷ್ಠ ₹90 ರೂಪಾಯಿ ಬ್ಯಾಲೆನ್ಸ್ ಅನ್ನು ನಿರ್ವಹಿಸಬೇಕಿದೆ. ಈ ನಿಯಮ ಕಡ್ಡಾಯಗೊಳಿಸಲಾಗಿದೆ. ಈ ಹೊಸ ನಿಯಮದ ಬಗ್ಗೆ ಅಧಿಕಾರಿಗಳನ್ನು ಸಾರ್ವಜನಿಕರು ಟೀಕಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆ ಹುಟ್ಟು ಹಾಕಿದ್ದಾರೆ. ಬಿಎಂಆರ್ಸಿಎಲ್ ಇತ್ತೀಚೆಗೆ ದರ ಏರಿಕೆಯನ್ನು ಘೋಷಿಸಿದ ಕೆಲವೇ ದಿನಗಳ ನಂತರ ಈ ನಿಯಮ ಕಡ್ಡಾಯಗೊಳಿಸಿದ್ದಾರೆ.

ಮೆಟ್ರೋ ಕನಿಷ್ಠ ಬ್ಯಾಲೆನ್ಸ್ ನಿಯಮದ ಬಗ್ಗೆ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇದರಿಂದ ಆರ್ಥಿಕ ಹೊರೆ ಉಂಟಾಗುತ್ತದೆ. ಮೊದಲಿದ್ದ ನಿಯಮ ಸರಿಯಾಗಿದೆ ಎಂದಿದ್ದಾರೆ. ಇತ್ತೀಚೆಗೆ ದರ ಹೆಚ್ಚಿಸಿದ್ದ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಜನಾಕ್ರೋಶ ಎದುರಿಸಿತ್ತು. ಇದರಿಂದಾಗಿ ದೈನಂದಿನ ಪ್ರಯಾಣಿಕರ ಪ್ರಮಾಣ ಸಹ ಇಳಿಕೆ ಆಗಿತ್ತು. ಸದ್ಯ ಸ್ಮಾರ್ಟ್ ಕಾರ್ಡ್ ಬಳಕೆದಾರರು 90 ರೂಪಾಯಿ ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸಬೇಕೆಂದು ಹೇಳಿದೆ. ಒಂದು ವೇಳೆ 90 ರೂಪಾಯಿಗಿಂತ ಹಣ ಕಡಿಮೆ ಇದ್ದಲ್ಲಿ ಪ್ರವೇಶ ದ್ವಾರ ತೆರೆಯುವುದಿಲ್ಲ. ಒಳ ಹೋಗುವ ಮೊದಲೇ ಮತ್ತೆ ಹಣ ರಿಚಾರ್ಜ್ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. ಮೊದಲು ಕನಿಷ್ಠ ಹಣ 50 ರೂಪಾಯಿ ಇತ್ತು. ಅದನ್ನು ಹೆಚ್ಚಿಸುವ ಮೂಲಕ BMRCL ಜನರಿಗೆ ಮತ್ತೊಂದು ಬರೆ ಹಾಕಿದೆ.
ಈ ನಿರ್ಧಾರದಿಂದ BMRCL ನಿತ್ಯ ಪ್ರಯಾಣ ಮಾಡುವ ಲಕ್ಷಾಂತರ ಜನರ ಕೆಂಗಣ್ಣಿಗೆ ಗುರಿಯಾಗಿದೆ. ದರ ಕಡಿಮೆ ಮಾಡಬೇಕು, ದರ ಸಮಿತಿ ವರದಿ ಬಹಿರಂಗೊಳಿಸಿ ಎಂದರೆ ಕೇಳದ ಅಧಿಕಾರಿಗಳು, ಹೊಸ ನಿಯಮ ಜಾರಿಗೆ ತಂದಿದ್ದಾರೆ ಎಂದು ಕೆಲವರು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರಯಾಣಿಕರ ಮೇಲಿನ ಹೊರೆ ಕಡಿಮೆ ಮಾಡಬೇಕು. ಈ ಸಮಸ್ಯೆಗೆ ಪರಿಹಾರಗಳು ಏನು ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.
ಬೆಂಗಳೂರು ಮೆಟ್ರೋ ಸದ್ಯ 96 ಕಿಲೋ ಮೀಟರ್ ಇದ್ದು. ಮೂರು ಮಾರ್ಗಗಳಲ್ಲಿ ಸುಮಾರು 60 ರೈಲುಗಳು ಕಾರ್ಯಾಚರಣೆ ಮಾಡುತ್ತವೆ. ನಿತ್ಯ ಸುಮಾರು 10 ಲಕ್ಷ ಮಂದಿ ಪ್ರಯಾಣ ಮಾಡುತ್ತಿದ್ದಾರೆ. ವಾಟ್ಸಾಪ್ ಕ್ಯೂಆರ್ ಕೋಡ್, ಟೋಕನ್, ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಇದೆ. ಕೆಲವೊಮ್ಮೆ ಪೇಪರ್ ಟಿಕೆಟ್ ಸಹ ವಿಶೇಷ ಸಂದರ್ಭಗಳಲ್ಲಿ ನೀಡಲಾಗುತ್ತದೆ. ಇತ್ತೀಚೆಗೆ ದೈನಂದಿನ ಪ್ರಮಾಣಿಕರ ಸಂಖ್ಯೆ ಏರಿಕೆ ಆಗುತ್ತಿದೆ. ಈ ಮಧ್ಯೆ ಸ್ಮಾರ್ಟ್ ಕಾರ್ಡ್ ಕನಿಷ್ಠ ದರ ನಿಯಮ ಜನರಿಗೆ ಮತ್ತೊಂದು ಆರ್ಥಿಕ ಹೊರೆ ತಂದೊಡ್ಡಿದೆ. ಈ ಬಗ್ಗೆ ಮೆಟ್ರೋ ಅಧಿಕಾರಿಗಳು ಪ್ರತಿಕ್ರಿಯಿಸಿ, ಅಧಿಕೃತ ಮಾಹಿತಿ ಇಲ್ಲವೇ ಸ್ಪಷ್ಟನೆ ನೀಡಬೇಕಿದೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications