Bengaluru Metro's Red Line: 36.59 ಕಿ.ಮೀ ಸರ್ಜಾಪುರ-ಹೆಬ್ಬಾಳ ಮೆಟ್ರೋ ಕಾಮಗಾರಿಗೆ ಒಪ್ಪಿಗೆ; ವೆಚ್ಚ, ಮಾರ್ಗಗಳ ಮಾಹಿತಿ
Bengaluru metro's red line: ನಮ್ಮ ಮೆಟ್ರೋ ರೈಲು ಬೆಂಗಳೂರಿನ ಜೀನವಾಡಿ ಸಾರಿಗೆಗಳಲ್ಲೊಂದಾಗಿದೆ. ನಗರದ ಬಹುತೇಕ ಮಂದಿ ಟ್ರಾಫಿಕ್ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಮೆಟ್ರೋವನ್ನೇ ಅಲಂಬಿಸಿದ್ದಾರೆ. ಈ ಮೂಲಕ ಮೆಟ್ರೋ ದಿನದಿಂದ ದಿನಕ್ಕೆ ಭಾರೀ ಜನಮನ್ನಣೆ ಪಡೆಯುತ್ತಿದೆ. ಮತ್ತೊಂದೆಡೆ ಪ್ರಯಾಣಿಕರ ಬೇಡಿಕೆ ಮೇರೆಗೆ ಮೆಟ್ರೋ ಜಾಲ ಇನ್ನೂ ವಿಸ್ತರಣೆಯಾಗುತ್ತಲಿದೆ. ಹಾಗೆಯೇ ಇದೀಗ ಈ ಮಾರ್ಗದ ಮೆಟ್ರೋ ಕಾಮಗಾರಿ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
ಮೆಟ್ರೋ ಪ್ರಯಾಣಿಕರಿಗೆ ಕರ್ನಾಟಕ ಸರ್ಕಾರ ಇದೀಗ ಸಿಹಿ ಸುದ್ದಿಯೊಂದನ್ನು ನೀಡಿದೆ. ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ-3ರಲ್ಲಿ ಸರ್ಜಾಪುರ-ಹೆಬ್ಬಾಳದವರೆಗೆ (ಕೆಂಪು ಮಾರ್ಗ) ಉದ್ದೇಶಿಸಿರುವ 36.59 ಕಿಲೋ ಮೀಟರ್ ಉದ್ದದ ಮೆಟ್ರೋ ಕಾಮಗಾರಿ ಯೋಜನಾ ಪೂರ್ವ ಸಿದ್ಧತೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ.

ಸರ್ಜಾಪುರ-ಹೆಬ್ಬಾಳದವರೆಗೆ 36.59ಕಿ.ಮೀ ಉದ್ದದ ಮೆಟ್ರೋ ಮಾರ್ಗವನ್ನು 28,405 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. 17 ಮೆಟ್ರೋ ನಿಲ್ದಾಣ ಒಳಗೊಂಡ 22.14 ಕಿ.ಮೀ. ಎಲಿವೇಟೆಡ್ ಮಾರ್ಗ ಹಾಗೂ 11 ನಿಲ್ದಾಣ ಒಳಗೊಂಡ 14.45 ಕಿ.ಮೀ ಸುರಂಗ ಮಾರ್ಗದ ಕಾಮಗಾರಿ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕೆಂಪು ಮಾರ್ಗದ ಪ್ರತಿ ಕಿಲೋ ಮೀಟರ್ ಮೆಟ್ರೋ ಮಾರ್ಗ ನಿರ್ಮಾಣಕ್ಕೆ 776 ಕೋಟಿ ರೂಪಾಯಿ ವೆಚ್ಚ ಆಗಲಿದೆ. ಈ ಹಂತ ಪೂರ್ಣ ಆದರೆ 258 ಕಿಲೋ ಮೀಟರ್ ಮೆಟ್ರೋ ಮಾರ್ಗ ಸಿದ್ಧವಾಗಲಿದೆ. ಸಂಪುಟದ ಅನುಮೋದನೆ ಪಡೆದ ಈ ಯೋಜನೆ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ ಆಗಲಿದೆ. ಮುಂದಿನ ಒಂದು ವರ್ಷದೊಳಗೆ ಕೇಂದ್ರದ ಅನುಮೋದನೆ ಸಿಗುವ ಸಾಧ್ಯತೆಯಿದೆ. 2026ರಲ್ಲಿ ಇದರ ಕಾಮಗಾರಿ ಆರಂಭ ಆಗಲಿದ್ದು, 2031ಕ್ಕೆ ಕಾಮಗಾರಿ ಪೂರ್ಣಗೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಇಬ್ಬಲೂರು, ಅಗರ, ಡೈರಿ ಸರ್ಕಲ್, ಕೆಆರ್ ಸರ್ಕಲ್ ಹಾಗೂ ಹೆಬ್ಬಾಳದಲ್ಲಿ 5 ಇಂಟರ್ ಚೇಂಜ್ ಮೆಟ್ರೋ ನಿಲ್ದಾಣ ನಿರ್ಮಾಣ ಮಾಡಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಸರ್ಜಾಪುರ, ಕಾಡ ಅಗ್ರಹಾರ ರೋಡ್, ಸೋಮಪುರ, ದೊಮ್ಮಸಂದ್ರ, ಮುತ್ತನಲ್ಲೂರು ಕ್ರಾಸ್, ಕೊಡತಿ ಗೇಟ್, ಅಂಬೇಡ್ಕರ್ ನಗರ, ಕಾರ್ಮಲ್ ರಾಂ, ದೊಡ್ಡಕನ್ನೆಲಿಯಲ್ಲಿ ನಿಲ್ದಾಣಗಳಿರಲಿವೆ.
ಅಲ್ಲದೆ, ಕಲ್ಕೊಂಡರಹಳ್ಳಿ, ಬೆಳ್ಳಂದೂರು ಗೇಟ್, ಇಬ್ಬಲೂರು, ಅಗರ, ಜಕ್ಕಸಂದ್ರ, ಕೋರಮಂಗಲ 3rd ಬ್ಲಾಕ್, ಕೋರಮಂಗಲ ಎರಡನೇ ಬ್ಲಾಕ್, ಡೈರಿ ಸರ್ಕಲ್, ನಿಮ್ಹಾನ್ಸ್, ಶಾಂತಿನಗರ, ಟೌನ್ ಹಾಲ್, ಕೆಆರ್ ಸರ್ಕಲ್, ಬಸವೇಶ್ವರ ಸರ್ಕಲ್, ಬೆಂಗಳೂರು ಗಾಲ್ಫ್ ಕೋರ್ಸ್, ಮೇಕ್ರಿ ಸರ್ಕಲ್, ಪ್ಯಾಲೇಸ್ ಗುಟ್ಟಳ್ಳಿ, ವೆಟರ್ನರಿ ಕಾಲೇಜು, ಗಂಗಾನಗರ, ಹೆಬ್ಬಾಳದಲ್ಲಿ ನಿಲ್ದಾಣಗಳಿರಲಿವೆ.
-
IPL 2026: ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications