ವಂಚನೆ ಮಾಡುತ್ತಿದ್ದ ನಕಲಿ ಗನ್ ಮ್ಯಾನ್ ಬಂಧನ
ಬೆಂಗಳೂರು, ಫೆಬ್ರವರಿ 04: ಶಾಸಕರೊಬ್ಬರ ಗನ್ ಮ್ಯಾನ್ ಎಂದು ನಂಬಿಸಿ ವ್ಯಕ್ತಿಯೊಬ್ಬರಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ಮೋಸ ಮಾಡಿದ್ದ ವ್ಯಕ್ತಿಯನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.
ನಾರಾಯಣ್ ಬಂಧಿತ ಆರೋಪಿ.ಮೂಲತಃ ಧಾರವಾಡ ಮೂಲದ ಈತ ಬೆಂಗಳೂರು ಶಸಸ್ತ್ರ ಮೀಸಲು ಪಡೆಯ ಪೇದೆಯಾಗಿ ಪೋಟೋ ತೆಗೆಸಿಕೊಂಡಿದ್ದ. ಅಲ್ಲದೇ ಧಾರವಾಡದ ಜಿಲ್ಲಾ ಶಸಸ್ತ್ರ ಮೀಸಲು ಪಡೆಯ ಬಳಿ ನಿಂತು ಪೋಟೋ ತೆಗಿಸಿಕೊಂಡಿದ್ದ. ಫೇಸ್ ಬುಕ್ ನಲ್ಲಿ ಪರಿಚಯವಾದ ವ್ಯಕ್ತಿಯೊಬ್ಬರಿಗೆ ಶಾಸಕರಿಗೆ ಹೇಳಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ಮೋಸ ಮಾಡಿದ್ದ. ಮೋಸ ಹೋಗಿದ್ದ ವ್ಯಕ್ತಿ ಪೊಲೀಸರಿಗೆ ದೂರು ನೀಡಿದ್ದ.

ಕಳೆದ ದಿನ ಹಣ ನೀಡುವುದಾಗಿ ಎಲ್ಲಿ ಸಿಕ್ಕುತ್ತೀರಿ ಎಂದು ಕೇಳಿದಾಗ ಧಾರವಾಡದ ಡಿಆರ್ ಸಮೀಪ ಬರುವಂತೆ ಹೇಳಿದ್ದಾರೆ. ಹೀಗೆ ಕರೆದುಕೊಂಡು ಹೋಗಿ ಮದ್ಯಪಾನ ಮಾಡಿಸಿದ್ದಾರೆ. ಆನಂತರ ಮನೆಗೂ ಕರೆದುಕೊಂಡು ಹೋಗಿದ್ದಾರೆ. ಹೀಗೆ ತಾನೊಬ್ಬ ಗನ್ ಮ್ಯಾನ್ ಎಂದು ನಂಬಿಸಿ ಜನರಿಗೆ ಮೋಸ ಮಾಡುತ್ತಿದ್ದ ನಾರಾಯಣ್ ಸದ್ಯ ಉಪ್ಪಾರಪೇಟೆ ಪೊಲೀಸರ ಅತಿಥಿಯಾಗಿದ್ದಾನೆ. ಈತ ಗನ್ ಮ್ಯಾನ್ ಮಾದರಿಯಲ್ಲಿ ಸಫಾರಿ ಬಟ್ಟೆ ಧರಿಸಿ ನಕಲಿ ಗನ್ ಇಟ್ಟುಕೊಂಡಿದ್ದ. ಇದನ್ನು ನೋಡಿ ಜನರು ಕೂಡ ನಂಬಿದ್ದರು. ನಕಲಿ ಗನ್ ಮ್ಯಾನ್ ಸದ್ಯ ಜೈಲು ಸೇರಿದ್ದು, ಈತನಿಂದ ಮೋಸ ಹೋಗಿದ್ದರೆ ಕೂಡಲೇ ದೂರು ನೀಡುವಂತೆ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಎಂ.ಪಾಟೀಲ್ ಅವರು ಮನವಿ ಮಾಡಿದ್ದಾರೆ.
Recommended Video

-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್












Click it and Unblock the Notifications