ಬೆಂಗಳೂರು ದೇಶದ ಪ್ರಮುಖ ನಗರಗಳಿಗೆ ಸದಾ ಮಾದರಿ: ಜಿಬಿಎ ಕಮೀಷನರ್ ಮಹೇಶ್ವರ್ ರಾವ್
ಬೆಂಗಳೂರು ದೇಶದ ಇನ್ನುಳಿದ ಪ್ರಮುಖ ನಗರಗಳಿಗೆ ಮಾದರಿಯಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತರಾದ ಮಹೇಶ್ವರ್ ರಾವ್ ಅವರು ಹೇಳಿದ್ದಾರೆ. ಬೆಂಗಳೂರು ದೇಶದ ಇತರ ನಗರಗಳಿಗೆ ಸದಾ ಮಾದರಿಯಾಗಿದೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರು, ದೇಶದ ಇತರ ನಗರಗಳಿಗೆ ಸದಾ ಮಾದರಿ ಯಾಕೆ ಎಂದು ವಿವರಿಸಿರುವ ಅವರು, ಬೆಂಗಳೂರು, ದೇಶದ ಇತರ ನಗರಗಳಿಗೆ ಸದಾ ಮಾದರಿಯಾಗಿದೆ. ನಗರವನ್ನು ಮತ್ತಷ್ಟು ಮಾದರಿ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿರುವ ಟೆಂಡರ್ ಶ್ಯೂರ್ ಯೋಜನೆಗಳನ್ನು ವಿಶೇಷವಾಗಿ ಪ್ರಶಂಸಿದ್ದಾರೆ.

ಇಂಜಿನಿಯರ್ಗಳು ತಮ್ಮ ವೃತ್ತಿಯ ಮೇಲಿನ ನಿಷ್ಠೆ ಮತ್ತು ಅಭಿರುಚಿಯನ್ನು ಬೆಳೆಸಿಕೊಂಡು, ಸೂಕ್ಷ್ಮವಾದ ವಿಚಾರಗಳ ಮೇಲಿನ ಗಮನ ಮತ್ತು ಸಮರ್ಪಕ ಕಾರ್ಯಪದ್ಧತಿ ಅನುಸರಿಸುವ ಮೂಲಕ ಅತ್ಯುತ್ತಮ ಗುಣಮಟ್ಟದ ಫಲಿತಾಂಶಗಳನ್ನು ಸಾಧಿಸಬಹುದೆಂದು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ತಿಳಿಸಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳ ಅಭಿಯಂತರರು ಮತ್ತು ಗುತ್ತಿಗೆದಾರರಿಗಾಗಿ, ಡ.ಬ್ಲ್ಯೂ.ಆರ್.ಐ ಸಹಯೋಗದೊಂದಿಗೆ, ಯೋಜನೆಗಳ ಪರಿಣಾಮಕಾರಿ ಜಾರಿಗೆ ಹಾಗೂ ತಾಂತ್ರಿಕ ಸಾಮರ್ಥ್ಯ ಹೆಚ್ಚಿಸಲು, ಆಡಳಿತ ಸಂಶೋಧನಾ ಸಂಸ್ಥೆ(ARI)ಯಲ್ಲಿ ಎರಡು ದಿನಗಳ(ನವೆಂಬರ್ 20 ಹಾಗೂ 21) ಕಾಲ ಸಾಮರ್ಥ್ಯ ವೃದ್ಧಿ ಕಾರ್ಯಾಗಾರ ವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಾಗಾರದ ಕುರಿತು ಅಭಿಯಂತರರನ್ನುದ್ದೇಶಿಸಿ ಮಾತನಾಡಿ ಅಗತ್ಯ ಸೂಚನೆಗಳನ್ನು ನೀಡಿದರು.
ಸಾರ್ವಜನಿಕ ಸಾರಿಗೆಯನ್ನು ಬಳಸಿ ಸಂಪೂರ್ಣ ನಗರ ಸಂಪರ್ಕ:
ಬೆಂಗಳೂರಿನ ಸಾರ್ವಜನಿಕರು ಪಾದಚಾರಿ ಮಾರ್ಗ ಬಳಸಿ ನಡೆದು ಪ್ರಯಾಣಿಸಲು ನಿರ್ಧರಿಸಿದಲ್ಲಿ, ಸಾರ್ವಜನಿಕ ಸಾರಿಗೆಯನ್ನು ಬಳಸಿಕೊಂಡು ಸಂಪೂರ್ಣ ನಗರವನ್ನು ಸಂಪರ್ಕಿಸಲು ಸಾಧ್ಯವಾಗಬೇಕು. ಇದನ್ನು ನಮ್ಮ ಎಲ್ಲಾ ಯೋಜನೆಗಳಿಗೆ ಮೂಲಭೂತ ಮಾನದಂಡವಾಗಿ ಪರಿಗಣಿಸಬೇಕೆಂದು ತಿಳಿಸಿದ್ದಾರೆ. ಕಾರ್ಯಕ್ರಮದ ಭಾಗವಾಗಿ 'ನಮ್ಮ ರಸ್ತೆ ಕೈಪಿಡಿ' ಕುರಿತು ಪ್ರಾತ್ಯಕ್ಷಿಕೆ ನೀಡಲಾಯಿತು. ನಂತರ ಕಾರ್ಯಾಗಾರದ ಪಾಲುದಾರರು ಕೆಳಗಿನ ವಿಷಯಗಳ ಕುರಿತು ಸವಿಸ್ತಾರವಾದ ಪ್ರಾತ್ಯಕ್ಷಿಕೆಗಳು ಹಾಗೂ ವಿಚಾರ ವಿನಿಮಯ ನಡೆಸಲಾಯಿತು.
1. ಆರ್ಎಫ್ಪಿ ಮತ್ತು ಟೆಂಡರ್ಗಳ ಸಿದ್ಧತೆ
2. ರಸ್ತೆಗಳ ನಿರ್ಮಾಣ
3. ಸಮರ್ಪಕ ಪಾದಚಾರಿ ಮಾರ್ಗಗಳ ನಿರ್ಮಾಣ
4. ಕಾರ್ಯಾಚರಣೆ ಮತ್ತು ನಿರ್ವಹಣೆ
5. ಉಪಯುಕ್ತ ಸೌಲಭ್ಯಗಳ ನಿರ್ವಹಣೆ
6. ರಸ್ತೆ ಸುರಕ್ಷತೆ / ಸುರಕ್ಷಿತ ಬೀದಿಗಳು
7. ದಿವ್ಯಾಂಗರಿಗಾಗಿ ಸಮವೇಶಿತ ಬೀದಿಗಳು
8. ವಾರ್ಡ್ ರಸ್ತೆಗಳ ವಿನ್ಯಾಸ
9. ನೆರೆ ಮತ್ತು ತಾಪಮಾನ ಏರಿಕೆ ನಿರ್ವಹಣೆ
10. CSR ಉಪಕ್ರಮಗಳು, ನಗರ ವಿನ್ಯಾಸ ವಿಭಾಗ, 'ಫಿಕ್ಸ್ ಮೈ ಪಾತ್ಹೋಲ್' ಉಪಕ್ರಮ, GIS ಮತ್ತು ಇಂಜಿನಿಯರ್ಗಳ ಪ್ರತಿಕ್ರಿಯೆಗಳ ಕುರಿತು ಚರ್ಚಿಸಲಾಯಿತು.
ಕಾರ್ಯಾಗಾರದಲ್ಲಿ ಜಿಬಿಎ, ಪಶ್ಚಿಮ, ಉತ್ತರ ಹಾಗೂ ದಕ್ಷಿಣ ನಗರ ಪಾಲಿಕೆಗಳ ಮುಖ್ಯ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಡಬ್ಲ್ಯೂಆರ್ಐ, ಸೆನ್ಸಿಂಗ್ ಲೋಕಲ್, ಇನ್ಫ್ರಾ ಸಪೋರ್ಟ್, ಗುತ್ತಿಗೆದಾರರು ಸೇರಿದಂತೆ ವಿವಿಧ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಂಬಂಧಿತ ಅಧಿಕಾರಿಗಳು ಪಾಲ್ಗೊಂಡಿದ್ದರು.
-
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Bengaluru Second Airport: 5 ತಿಂಗಳಲ್ಲಿ ಬೆಂಗಳೂರು 2ನೇ ವಿಮಾನ ನಿಲ್ದಾಣ ಸ್ಥಳ ಫೈನಲ್: 3 ತಾಣಗಳಿಗೆ ಕಾರ್ಯಸಾಧ್ಯತಾ ವರದಿ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications