ಬೆಂಗಳೂರು: ಗುಪ್ತಾಂಗ ತೋರಿಸಿದವನಿಗೆ ಬಿತ್ತು ವಿದ್ಯಾರ್ಥಿನಿಯರ ಗೂಸಾ
ಮೌಂಟ್ ಕಾರ್ಮೆಲ್ ಶಾಲಾ ವಿದ್ಯಾರ್ಥಿನಿಯರಿಗೆ ಕಿರುಕುಳ ಕೊಡುತ್ತಿದ್ದವನ ಬಂಧನ. ತಪ್ಪಿತಸ್ಥನನ್ನು ಹಿಡಿದು ಚಚ್ಚಿ ಪೊಲೀಸರಿಗೆ ಒಪ್ಪಿಸಿದ ವಿದ್ಯಾರ್ಥಿನಿಯರು.
ಬೆಂಗಳೂರು, ಆಗಸ್ಟ್ 30: ನಗರದ ಪ್ರತಿಷ್ಠಿತ ಶಾಲೆಯ ವಿದ್ಯಾರ್ಥಿನಿಯರಿಗೆ ತನ್ನ ಗುಪ್ತಾಂಗ ತೋರಿಸಿ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಾಲಕಿಯರೇ ಹಿಡಿದು ತಂದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತನನ್ನು ವಿಜೇಶ್ ಎಂದು ಗುರುತಿಸಲಾಗಿದೆ.
ತನ್ನನ್ನು ತಾನು ಪತ್ರಕರ್ತನೆಂದು ಬಿಂಬಿಸಿಕೊಳ್ಳುತ್ತಿದ್ದ ದಿನನಿತ್ಯವೂ ಮೌಂಟ್ ಕಾರ್ಮೆಲ್ ಶಾಲೆಯ ಬಳಿ ನಿಲ್ಲುವುದನ್ನು ರೂಢಿ ಮಾಡಿಕೊಂಡಿದ್ದ.

ಹಾಗೆ, ಬಂದವನು ಶಾಲೆಗೆ ಬರುವ ವಿದ್ಯಾರ್ಥಿನಿಯರಿಗೆ ತನ್ನ ಗುಪ್ತಾಂಗ ತೋರಿಸುತ್ತಾ ಅಸಹ್ಯ ಸಂಜ್ಞೆಗಳನ್ನು ತೋರುತ್ತಾ ಅವರಿಗೆ ಮುಜುಗರ ಉಂಟು ಮಾಡುತ್ತಿದ್ದ. ಇದರಿಂದ ಅನೇಕ ವಿದ್ಯಾರ್ಥಿನಿಯರು ರೋಸಿ ಹೋಗಿದ್ದರು.
ಶಾಲೆಯ ಬಳಿಯಿರುವ ಲೂಪ್ ರಸ್ತೆಯೇ ಈತನ ಅಡ್ಡೆಯಾಗಿತ್ತು. ದ್ವಿಚಕ್ರ ವಾಹನಗಳಲ್ಲಿ ಬರುವ ಮೌಂಟ್ ಕಾರ್ಮೆಲ್ ವಿದ್ಯಾರ್ಥಿನಿಯರು ಸಾಮಾನ್ಯವಾಗಿ ಇದೇ ಲೂಪ್ ರಸ್ತೆಯಲ್ಲಿಯೇ ತಮ್ಮ ಬೈಕುಗಳನ್ನು ನಿಲ್ಲಿಸುತ್ತಾರೆ. ಹೀಗಾಗಿ, ಇಲ್ಲಿಗೆ ಬರುವ ವಿದ್ಯಾರ್ಥಿನಿಯರ ಮೇಲೆಯೇ ವಿಜೇಶ್ ನ ಕಣ್ಣು ಬಿದ್ದಿತ್ತು.
ಈತ ಉಪಟಳ ತಾಳಲಾರದ ಹುಡುಗಿಯರಲ್ಲಿ ಹತ್ತು ವಿದ್ಯಾರ್ಥಿಯರು ಸೇರಿ ಧೈರ್ಯಮಾಡಿ ಈತನಿಗೆ ಗೂಸಾ ಕೊಟ್ಟಿದ್ದಾರೆ. ಹಾಗೆ ಗೂಸಾ ಕೊಟ್ಟ ನಂತರ ಈತನನ್ನು ಹೈ ಗ್ರೌಂಡ್ಸ್ ಪೊಲೀಸರಿಗೆ ಒಪ್ಪಿಸಿದ್ದಾರೆ.
Recommended Video

ಪ್ರಾಥಮಿಕ ತನಿಖೆಯಲ್ಲಿ, ಈತ ಪತ್ರಕರ್ತನಲ್ಲ ಎಂಬುದು ಪತ್ತೆಯಾಗಿದೆ. ಸುಮ್ಮನೇ ತನ್ನ ದ್ವಿಚಕ್ರ ವಾಹನದ ಮೇಲೆ ಪ್ರೆಸ್ ಎಂದು ನಮೂದಿಸಿಕೊಂಡಿದ್ದ. ಈತ ಬೆಂಗಳೂರಿನಲ್ಲೇ ಇರುವ ಮಲಯಾಳಂ ಭಾಷೆಯ ಜಾಹೀರಾತು ಕಂಪನಿಯಲ್ಲಿ ಸೇವೆ ಸಲ್ಲಿಸುತ್ತಿದ್ದು ಇತ್ತೀಚೆಗಷ್ಟೇ ಕೆಲಸ ಬಿಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ












Click it and Unblock the Notifications