ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಮಾರಸ್ವಾಮಿ ಭೇಟಿ ಮಾಡಲು ಸಂಸದರ ನಿರ್ಧಾರ, ಉದ್ದೇಶವೇನು?

|
Google Oneindia Kannada News

Recommended Video

ಎಚ್ ಡಿ ಕುಮಾರಸ್ವಾಮಿಯನ್ನ ಭೇಟಿ ಮಾಡಲಿದ್ದಾರೆ ಬೆಂಗಳೂರಿನ ಸಂಸದರು | Oneindia Kannada

ಬೆಂಗಳೂರು, ಸೆಪ್ಟೆಂಬರ್ 19: ಸಂಸದರು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯವರನ್ನು ಬುಧವಾರ(ಸೆ.19)ರಂದು ಭೇಟಿ ಮಾಡಲಿದ್ದಾರೆ. ಹಾಗಾದರೆ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇರಬಹುದು ಎಂದು ನೀವು ಆಲೋಚನೆ ಮಾಡುತ್ತಿದ್ದರೆ ಅದು ತಪ್ಪು.

ಬೆಂಗಳೂರು ಉಪನಗರ ರೈಲು ಯೋಜನೆ ಆರಂಭದಲ್ಲಿಯೇ ನಿಂತಿದ್ದು ಇದನ್ನು ತ್ವರಿತವಾಗಿ ಜಾರಿಗೊಳಿಸಬೇಕಿದ್ದು ಅದಕ್ಕಾಗಿ ವಿಶೇಷ ಯೋಜನಾ ವಾಹ ರೂಪಿಸುವಂತೆ ಮನವಿ ಮಾಡಲು ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಲಿದ್ದಾರೆ.

ಸಬರ್ಬನ್‌ ಯೋಜನೆ ಚುರುಕು: ಮತ್ತಷ್ಟು ರೈಲುಗಳು ಮೆಮುವಾಗಿ ಪರಿವರ್ತನೆಸಬರ್ಬನ್‌ ಯೋಜನೆ ಚುರುಕು: ಮತ್ತಷ್ಟು ರೈಲುಗಳು ಮೆಮುವಾಗಿ ಪರಿವರ್ತನೆ

ನೈಋತ್ಯ ವಲಯದ ಹಿರಿಯ ಅಧಿಕಾರಿಗಳು ಹಾಗೂ ಸಂಸದರ ಮಧ್ಯೆ ಈ ಕುರಿತು ಮಾತುಕತೆ ನಡೆದಿದೆ, ಸಬ್‌ಅರ್ಬನ್ ರೈಲು ಯೋಜನೆಗಿರುವ ತೊಡಕುಗಳನ್ನು ನಿವಾರಿಸುವಂತೆ ಬೇಡಿಕೆ ಇಟ್ಟಿದ್ದಾರೆ. ಜತೆಗೆ ರೈಲ್ವೆ ಹಾಗೂ ರಾಜ್ಯ ಸರ್ಕಾರ ಸಮನ್ವಯ ಸಾಧಿಸಿ ತ್ವರಿತವಾಗಿ ಯೋಜನೆ ಕೈಗೆತ್ತಿಕೊಳ್ಳುವಂತೆ ಒತ್ತಾಯಿಸಲಿದ್ದಾರೆ.

Bengaluru MPs to meet CM seeking SPV for suburban rail project

ಪ್ರಯಾಣಿಕರಿಂದ ಸಬರ್ಬನ್ ರೈಲು ಮಾಹಿತಿಗೆ ನೂತನ ಆ್ಯಪ್‌!ಪ್ರಯಾಣಿಕರಿಂದ ಸಬರ್ಬನ್ ರೈಲು ಮಾಹಿತಿಗೆ ನೂತನ ಆ್ಯಪ್‌!

ಈ ರೈಲು ಯೋಜನೆಗೆ ಕೇಂದ್ರ ಸರ್ಕಾರ ಈಗಾಗಲೇ ಒಪ್ಪಿಗೆ ಸೂಚಿಸಿದೆ. ಸಂಸದರ ಮನವಿಗೆ ಪ್ರತಿಕ್ರಿಯಿಸಿದ ರೈಲ್ವೆ ಅಧಿಕಾರಿಗಳು ಸಬ್ ಅರ್ಬನ್ ರೈಲು ಯೋಜನೆ ಜಾರಿಗೆ ಇಲಾಖೆ ಬದ್ಧವಾಗಿದೆ. ಇದಕ್ಕೆ ರಾಜ್ಯ ಸರ್ಕಾರದ ಸಹಕಾರ ಅಗತ್ಯವಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಿಂದ ಹೆಚ್ಚಿ ಸಂಖ್ಯೆಯ ರೈಲುಗಳನ್ನು ಬೆಂಗಳೂರು ಮಾರ್ಗದಲ್ಲಿ ಓಡಿಸಬೇಕು. ಆ ಮಾರ್ಗದಲ್ಲಿ ಪ್ರಯಾಣಿಕರ ದಟ್ಟಣೆ ಆಧರಿಸಿ ರೈಲು ಅಥವಾ ಬೋಗಿಗಳ ಸಂಖ್ಯೆ ಹೆಚ್ಚಿಸಲು ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದೆ.

English summary
Members of Parliament under jurisdiction of Bengaluru railway division have decided to meet chief minister to urge formation of Special Purpose Vehicle for implementation of suburban railway project in the time based manner.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X