ಬೆಂಗಳೂರು ಪಾಲಿಕೆ ಬಜಾರ್ನಲ್ಲಿ ಇ - ಆಕ್ಷನ್ ಮೂಲಕ ಮಳಿಗೆಗಳ ಹಂಚಿಕೆ: ಮಹೇಶ್ವರ್ ರಾವ್
ಬೆಂಗಳೂರಿನ ಪ್ರಮುಖ ಪಾಲಿಕೆ ಬಜಾರ್ಗಳಲ್ಲಿ ಒಂದಾಗಿರುವ ವಿಜಯನಗರದ ಪಾಲಿಕೆ ಬಜಾರ್ನಲ್ಲಿ ಇ-ಆಕ್ಷನ್ ಮುಖಾಂತರ ಮಳಿಗೆಗಳನ್ನು ಹಂಚಿಕೆ ಮಾಡಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಬಿಎ ವ್ಯಾಪ್ತಿಯಲ್ಲಿ ಮಂಗಳವಾರ (ಡಿಸೆಂಬರ್ 16) ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಹವಾನಿಯಂತ್ರಿತ ಪಾಲಿಕೆ ಬಜಾರ್ನಲ್ಲಿ 79 ಮಳಿಗೆಗಳು ಬರಲಿದ್ದು, ಕೂಡಲೇ ಇ-ಆಕ್ಷನ್ ಮಾಡಿ ನಿಯಮಾನುಸಾರು ಮಳಿಗೆಗಳನ್ನು ಹಂಚಿಕೆ ಮಾಡಲು ಸೂಚನೆ ನೀಡಿದ್ದಾರೆ.
ಪಾಲಿಕೆ ಬಜಾರ್ ಸುತ್ತಲೂ ಅನಧಿಕೃತವಾಗಿ ವ್ಯಾಪಾರ ಮಾಡುವುದನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕು. ಪಾಲಿಕೆ ಬಜಾರ್ ಮೇಲ್ವಿಚಾರಣೆಗಾಗಿ ಒಬ್ಬ ಕಂದಾಯ ಅಧಿಕಾರಿಯನ್ನು ಪ್ರತ್ಯೇಕವಾಗಿ ನಿಯೋಜಿಸಲು ನಿರ್ದೇಶನ ನೀಡಿದರು.

ಶ್ರೀರಾಂಪುರ ಹೆರಿಗೆ ಆಸ್ಪತ್ರೆ ಹೊಸ ಕಟ್ಟಡ ನಿರ್ಮಾಣ: ಶ್ರೀರಾಂಪುರ ಹೆರಿಗೆ ಆಸ್ಪತ್ರೆಯು 1 ಅಂತಸ್ತಿನ ಕಟ್ಟಡ ತುಂಬಾ ಹಳೆಯ ಕಟ್ಟಡವಾಗಿದ್ದು, ಸದ್ಯ 30 ಹಾಸಿಗೆಗಳ ಸಾಮರ್ಥ್ಯವಿದೆ. ಪ್ರತಿನಿತ್ಯ 4-6 ಹೆರಿಗೆಗಳು ಆಗಲಿದ್ದು, ಒಪಿಡಿಗೆ 200 ರಿಂದ 300 ಮಂದಿ ಬರಲಿದ್ದಾರೆ. ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ಇರುವ ಕಟ್ಟಡ ನೆಲಸಮಗೊಳಿಸಿ 50 ಹಾಸಿಗೆ ಒಳಗೊಂಡಂತೆ 4 ಅಂತಸ್ತಿನ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಸಂಬಂಧ ಕೂಡಲೆ ಕೆಲಸ ಪ್ರಾರಂಭಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಎಂ.ಸಿ ಲೇಔಟ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಗೋವಿಂದರಾಜನಗರ ಎಂ.ಸಿ ಲೇಔಟ್ ನಲ್ಲಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯು ಸಂಪೂರ್ಣವಾಗಿ ಕಾರ್ಯನಿರ್ವಹಿಸುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಪೈಕಿ ಅವಶ್ಯಕವಿರುವ ವೈದ್ಯರು/ಸಿಬ್ಬಂದಿಗಳ ಸಂಖ್ಯೆ, ಯಾವೆಲ್ಲಾ ಉಪಕರಣಗಳು ಬೇಕಿವೆ. ಯಾವ ರೀತಿ ಆಸ್ಪತ್ರೆಯನ್ನು ಸಂಪೂರ್ಣವಾಗಿ ಬಳಸಬಹುದೆಂಬುದರ ಕುರಿತು ಸಂಪೂರ್ಣ ವರದಿ ನೀಡಲು ತಿಳಿಸಲಾಗಿದೆ.
ಮೂಡಲಪಾಳ್ಯ ಹೆರಿಗೆ ಆಸ್ಪತ್ರೆ: ಮೂಡಲಪಾಳ್ಯ ಹೆರಿಗೆ ಆಸ್ಪತ್ರೆಯನ್ನು ಬ್ರಾಂಡ್ ಬೆಂಗಳೂರು ಯೋಜನೆಯಡಿ 12 ರಿಂದ 30 ಹಾಸಿಗೆಗೆ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಪೈಕಿ ತ್ವರಿತವಾಗಿ ಕೆಲಸ ತಿಳಿಸಲಾಗಿದೆ. ಅಲ್ಲದೇ ಹೊಸಕೆರೆಹಳ್ಳಿ ಹೆರಿಗೆ ಆಸ್ಪತ್ರೆಯನ್ನು ಬ್ರ್ಯಾಂಡ್ ಬೆಂಗಳೂರು ಯೋಜನೆ ಅಡಿ ಹೊಸ ರ್ಯಾಂಪ್, ಫಾರ್ಮಸಿ, ತುರ್ತು ಸ್ಥಳ, ಆಪರೇಷನ್ ಥಿಯೇಟರ್ ಸೇರಿದಂತೆ ಇತರೆ ಅಭಿವೃದ್ಧಿ ಕಾರ್ಯದ ಜೊತೆಗೆ 30 ರಿಂದ 50 ಹಾಸಿಗೆ ನಿರ್ಮಾಣ ಮಾಡುವ ಕೆಲಸ ಕೈಗೊಳ್ಳಲಾಗುತ್ತಿದ್ದು, ತ್ವರಿತವಾಗಿ ಕೆಲಸ ಪ್ರಾರಂಭಿಸಿ ಕಾಲಮಿತಿಯೊಳಗಾಗಿ ಪೂರ್ಣ ಆಯುಕ್ತರು ಡೆಡ್ಲೈನ್ ನಿಗದಿ ಮಾಡಿದ್ದಾರೆ.
ವೈಟ್ ಟಾಪಿಂಗ್ ಕೆಲಸ ತ್ವರಿತವಾಗಿ ಪೂರ್ಣಗೊಳಿಸಿ: ಇನ್ನು ಕೋರಮಂಗಲದಿಂದ ಸರ್ಜಾಪುರ ಕಡೆಯ 1 ಕಿ.ಮೀ ಉದ್ದದ ರಸ್ತೆ ವೈಟ್ ಟಾಪಿಂಗ್ ಕಾಮಗಾರಿಯು, ಒಂದು ಭಾಗದಲ್ಲಿ ಪೂರ್ಣಗೊಳಿಸಿದ್ದು, ಪಾದಚಾರಿ ಮಾರ್ಗದ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದೆ. ವೈಟ್ ಟಾಪಿಂಗ್ ಆಗಿರುವ ಭಾಗದಲ್ಲಿ ಕೂಡಲೆ ವಾಹನಗಳ ಸಂಚಾರಕ್ಕೆ ಅನುವು ಮಾಡಿ ಮತ್ತೊಂದು ಭಾಗದಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಂಡು ಶೀಘ್ರ ಪೂರ್ಣಗೊಳಿಸಲು ತಿಳಿಸಲಾಗಿದೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications