ಇದು ನಮ್ ಪ್ರಾಬ್ಲಂ ಸೋಮಣ್ಣ ಸಾರ್: ಗೋಳು ತೋಡಿಕೊಂಡ ಬೆಂಗಳೂರು - ಮೈಸೂರು ರೈಲು ಪ್ರಯಾಣಿಕರು
ಬೆಂಗಳೂರು: ಬೆಂಗಳೂರು ಹಾಗೂ ಮೈಸೂರಿನ ನಡುವೆ ರೈಲು ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ಗಮನದಲ್ಲಿ ಇರಿಸಿಕೊಂಡು ಈ ಮಾರ್ಗದಲ್ಲಿ ರೈಲುಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಹಾಗೂ ಬೆಂಗಳೂರು - ಮೈಸೂರು ಮಾರ್ಗವಾಗಿ ಸಂಚರಿಸುವ ರೈಲುಗಳನ್ನು ಬೆಂಗಳೂರಿನ ನಮ್ಮ ಮೆಟ್ರೋ ಸಮೀಪದ ನಿಲ್ದಾಣಗಳಿಗೆ ಹೊಂದಾಣಿಕೆಯಾಗುವ ರೈಲು ನಿಲ್ದಾಣಗಳಲ್ಲಿ ನಿಲುಗಡೆ ನೀಡಬೇಕು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಮಾಡಲಾಗಿದೆ.
ಬೆಂಗಳೂರು ಹಾಗೂ ಮೈಸೂರಿನ ನಡುವೆ ದಿನವೂ ಸಾವಿರಾರು ಜನ ಪ್ರಯಾಣ ಮಾಡುತ್ತಾರೆ. ರೈಲು ಸಂಚಾರ ಸೇವೆಯಿಂದ ಸಾವಿರಾರು ಜನರು ಬೆಂಗಳೂರಿನಲ್ಲಿ ನೆಲೆಸುವುದು ತಪ್ಪಿದ್ದು, ಬೆಂಗಳೂರಿನ ಮೇಲಿನ ಒತ್ತಡವೂ ಸಹ ಕಡಿಮೆಯಾಗಿದೆ. ಮೈಸೂರು ಹಾಗೂ ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ಜನ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ಬೆಂಗಳೂರು - ಮೈಸೂರಿನ ರೈಲು ಮಾರ್ಗವು ಸಾವಿರಾರು ಜನರಿಗೆ ಅನುಕೂಲವಾಗಿದೆ. ಆದರೆ ಈ ಮಾರ್ಗದಲ್ಲಿ ಸಕಾಲದಲ್ಲಿ ರೈಲು ಬರುತ್ತಿಲ್ಲ ಹಾಗೂ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದು ಅದಕ್ಕೆ ಪೂರಕವಾಗಿ ರೈಲು ಸಂಖ್ಯೆ ಹೆಚ್ಚಿಸಬೇಕು ಎನ್ನುವ ಮನವಿ ಈ ಭಾಗದ ರೈಲು ಪ್ರಯಾಣಿಕರಿಂದ ವ್ಯಕ್ತವಾಗಿದೆ.

ಬೆಂಗಳೂರಿನ ನಾಯಂಡಹಳ್ಳಿಗೆ 4 ರೈಲು
ಇನ್ನು ಬೆಂಗಳೂರು - ಮೈಸೂರು ಮಾರ್ಗವಾಗಿ ಸಂಚರಿಸುವ ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಡಲಾಗಿದೆ. ಮೈಸೂರು - ಕೆಎಸ್ಆರ್ ಸಿಟಿ ಚಾಮುಂಡಿ ಎಕ್ಸ್ಪ್ರೆಸ್ (16215/16216), ಮೈಸೂರು-ಬಾಗಲಕೋಟೆ ಬಸವ ಎಕ್ಸ್ಪ್ರೆಸ್ (17307/17308), ಟುಟಿಕೋರಿನ್-ಮೈಸೂರು ಎಕ್ಸ್ಪ್ರೆಸ್ (16235/16236) ಹಾಗೂ ಮೈಸೂರು-ಪಂಡರಾಪುರ ಗೋಲ್ ಗುಂಬಜ್ ಎಕ್ಸ್ಪ್ರೆಸ್ (16535/16536) ರೈಲುಗಳಿಗೆ ಬೆಂಗಳೂರಿನ ನಾಯಂಡಹಳ್ಳಿ ರೈಲು ನಿಲ್ದಾಣದಲ್ಲಿ ನಿಲುಗಡೆ ನೀಡಬೇಕೆಂಬ ಈ ಭಾಗದ ಪ್ರಯಾಣಿಕರ ಬಹುದಿನದ ಬೇಡಿಕೆಯನ್ನು ಈಡೇರಿಸಲಾಗಿದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅವರು ಹೇಳಿದ್ದಾರೆ.
ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ವಿ.ಸೋಮಣ್ಣ ಅವರ ಟ್ವೀಟ್ಗೆ ಹಲವು ರೈಲು ಪ್ರಯಾಣಿಕರು ಕಮೆಂಟ್ ಮಾಡಿದ್ದಾರೆ. ಮುಖ್ಯವಾಗಿ ಬೆಂಗಳೂರು - ಮೈಸೂರು ಮಾರ್ಗದಲ್ಲಿ ಇರುವ ಸಮಸ್ಯೆಗಳ ಬಗ್ಗೆ ಸಚಿವರ ಗಮನಕ್ಕೆ ತಂದಿದ್ದಾರೆ. ರವಿ ಕೀರ್ತಿಗೌಡ ಅವರು, ಜ್ಞಾನಭಾರತಿ ಮೆಟ್ರೋಗೆ ತುಂಬಾ ಹತ್ತಿರದಲ್ಲಿದ್ದರಿಂದ ಸಹಾಯವಾಗುತ್ತಿತ್ತು ಎಂದಿದ್ದಾರೆ. ರವೀಂದ್ರ ಎನ್ನುವವರೂ ಸಹ ಇದೇ ಅಭಿಪ್ರಾಯಪಟ್ಟಿದ್ದಾರೆ. ಜ್ಞಾನಭಾರತಿ ರೈಲು ನಿಲುಗಡೆಯು ಮೆಟ್ರೋ ಸಮೀಪದಲ್ಲೇ ಇದೆ. ಈ ರೈಲುಗಳ ನಿಲುಗಡೆಯನ್ನು ಈ ಭಾಗದಲ್ಲಿ ಕೊಟ್ಟರೆ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗಲಿದೆ ಎಂದಿದ್ದಾರೆ.
ಬೆಂಗಳೂರು - ಮೈಸೂರು ರೈಲು ಮಾರ್ಗದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವುದರಿಂದ ರೈಲು ಸೇವೆಗಳನ್ನು ವಿಸ್ತರಿಸಲು, ಹೆಚ್ಚುವರಿ ರೈಲುಗಳನ್ನು /ಮೆಮು ಸಂಚಾರಕ್ಕೆ ಪ್ರಯಾಣಿಕರು ಮನವಿ ಮಾಡಿದ್ದಾರೆ.
ರೈಲುಗಳ ವಿಳಂಬದಿಂದ ಸಮಸ್ಯೆ
ಇನ್ನು ರೈಲುಗಳ ಸಂಚಾರದಲ್ಲಿ ಸಮಸ್ಯೆ ಆಗುತ್ತಿದ್ದು, ಇದರಿಂದ ನಿತ್ಯವೂ ಬೆಂಗಳೂರು - ಮೈಸೂರು ಮಾರ್ಗದ ಪ್ರಯಾಣಿಕರಿಗೆ ತಡವಾಗುತ್ತಿದೆ. ಅನಧಿಕೃತವಾಗಿ ನಿಲುಗಡೆ ಅಥವಾ ಕ್ರಾಸಿಂಗ್ಗಳಲ್ಲಿ ನಿಲುಗಡೆ ಕೊಡುತ್ತಿರುವುದು ಸಮಸ್ಯೆ ಆಗುತ್ತಿದೆ. ಇದನ್ನು ತಪ್ಪಿಸಬೇಕು ಎಂದು ಹಲವು ರೈಲು ಪ್ರಯಾಣಿಕರು ವಿ. ಸೋಮಣ್ಣ ಅವರಿಗೆ ಮನವಿ ಮಾಡಿದ್ದಾರೆ.
-
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
ಒಂದೇ ವರ್ಷದಲ್ಲಿ 800 ಕೋಟಿ ರೂ ಮೌಲ್ಯದ ಕಂಪನಿ ಕಟ್ಟಿದ 23ರ ಹರೆಯದ ಅಂಜಲಿ ಸರ್ದಾನಾ -
Viral : ರ್ಯಾಪಿಡೋ ಬುಕ್ ಮಾಡಿದವನಿಗೆ ಕಾದಿತ್ತು ಬಿಗ್ ಶಾಕ್: ತನ್ನ ಶಾಲೆಯ 'ಕ್ಲಾಸ್ ಟಾಪರ್' ಈಗ ರ್ಯಾಪಿಡೋ ರೈಡರ್ -
PV Sindhu: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪತಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜು ಸಾಹಸ: ಫಿಟ್ನೆಸ್ ತಜ್ಞರು ಹೇಳಿದ್ದೇನು? -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
Sourav Ganguly: ಟಿ20 ವಿಶ್ವಕಪ್ 2026; ಸಂಜು ಆಟಕ್ಕೆ ಮನಸೋತು ಬಿಸಿಸಿಐಗೆ ಬಿಸಿ ಮುಟ್ಟಿಸಿದ 'ದಾದಾ' ಸೌರವ್ ಗಂಗೂಲಿ -
Today Horoscope Mar 3: ಹುಣ್ಣಿಮೆಯ ದಿನ ಚಂದ್ರಗ್ರಹಣ, ಈ ರಾಶಿಯವರ ಆರೋಗ್ಯದಲ್ಲಿ ಏರುಪೇರು -
ಬೆಂಗಳೂರು ಆಡಳಿತ ಬಿಬಿಎಂಪಿಯಿಂದ ಜಿಬಿಎಗೆ: 5 ಪಾಲಿಕೆಗಳ ರಚನೆ, ಹೊಸ ಪ್ರದೇಶಗಳ ಸೇರ್ಪಡೆಯಿಂದ ರಿಯಲ್ ಎಸ್ಟೇಟ್ಗೆ ಬಂಪರ್ -
Property: ಖಾತಾ ಎಂದರೇನು, ಇ, ಬಿ - ಎ ಖಾತಾಗಳ ವ್ಯತ್ಯಾಸ, ಆಸ್ತಿದಾರರಿಗೆ ಹೇಗೆ ಲಾಭ ಇಲ್ಲಿದೆ ಸಂಪೂರ್ಣ ವಿವರ












Click it and Unblock the Notifications