ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಎಂಟ್ರಿ-ಎಕ್ಸಿಟ್ ಟೋಲ್ ನಿರ್ಮಾಣ ಕಾಮಗಾರಿ ಆರಂಭ ಕುರಿತು ಬಿಗ್ ಅಪ್ಡೇಟ್
Bengaluru-Mysuru Expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಉದ್ಘಾಟನೆ ಆದಗಿನಿಂದಲೂ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಲಿದೆ. ಇನ್ನು ಇದೀಗ ಈ ಹೆದ್ದಾರಿಯ ಎಂಟ್ರಿ-ಎಕ್ಸಿಟ್ ಟೋಲ್ ನಿರ್ಮಾಣ ಕಾಮಗಾರಿ ಆರಂಭದ ಕುರಿತು ಮಹತ್ವದ ಅಪ್ಡೇಟ್ವೊಂದು ಹೊರಬಿದ್ದಿದೆ. ಹಾಗಾದ್ರೆ ಯಾವಾಗ ಆರಂಭ? ಎಲ್ಲೆಲ್ಲಿ ಹಾಗೂ ಇದರಿಂದ ಏನೆಲ್ಲಾ ಪ್ರಯೋಜನೆಗಳಿವೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ನಲ್ಲಿ ಟೋಲ್ ವಿಚಾರಕ್ಕೆ ಟೋಲ್ ಸಿಬ್ಬಂದಿ ಹಾಗೂ ವಾಹನ ಸವಾರರ ನಡುವೆ ಮಾರಾಮಾರಿ ನಡೆದಿರುವ ಉದಾಹರಣೆಗಳಿವೆ. ಅಲ್ಲದೆ, ಇಲ್ಲಿ ಸುರಕ್ಷತೆಗೆ ಯಾವುದೇ ಸೌಲಭ್ಯಗಳು ಇಲ್ಲ ಎನ್ನುವ ಆರೋಪಗಳು ಕೇಳಿಬಂದಿದ್ದವು. ಈ ನಡುವೆಯೇ ಇತ್ತೀಚೆಗಷ್ಟೇ ನಿತಿನ್ ಗಡ್ಕರಿ ಅವರು ಈ ಎಕ್ಸ್ಪ್ರೆಸ್ ವೇನ ಎಂಟ್ರಿ, ಎಕ್ಸಿಟ್ ಟೋಲ್ ಕಾಮಗಾರಿಗೆ ಚಾಲನೆ ನೀಡಿದ್ದರು. ಕಾಮಗಾರಿ ಇನ್ನೂ ಆರಂಭ ಆಗಿರಲಿಲ್ಲ. ಆದರೆ, ಇದೀಗ ಕಾಮಗಾರಿ ಆರಂಭದ ದಿನಾಂಕವನ್ಮ ಫಿಕ್ಸ್ ಮಾಡಲಾಗಿದೆ.

ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಎಂಟ್ರಿ ಹಾಗೂ ಎಕ್ಸಿಟ್ ಟೋಲ್ ನಿರ್ಮಾಣ ಕಾಮಗಾರಿ ಇನ್ನು 15 ದಿನದಲ್ಲಿಆರಂಭ ಆಗಲಿದೆ ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್ ಅವರು ಮಾಹಿತಿ ನೀಡಿದ್ದಾರೆ. ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಹಾಗೂ ಲಕ್ಷ್ಮೀಸಾಗರ ಗೇಟ್ ಬಳಿ ಉಂಟಾಗುತ್ತಿರುವ ಸಮಸ್ಯೆಗಳನ್ನು ತಡೆಯುವಂತೆ ಸಾರ್ವಜನಿಕರು ಆಗ್ರಹಿಸಿದ್ದರು.
ರಾಮನಗರದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಬಗ್ಗೆ ಡಾ.ಸಿ.ಎನ್.ಮಂಜುನಾಥ್ ಅವರು ಮಾತನಾಡಿದ್ದು, ಈಗಾಗಲೇ ಎಂಟ್ರಿ, ಎಕ್ಸಿಟ್ ಟೋಲ್ ಕಾಮಗಾರಿಗೆ ಕೇಂದ್ರ ಸಚಿವರಾಗಿರುವ ನಿತಿನ್ ಗಡ್ಕರಿ ಅವರು ಚಾಲನೆ ನೀಡಿದ್ದಾರೆ. ಇನ್ನೂ 15 ದಿನಗಳ ಒಳಗೆ ಕಾಮಗಾರಿ ಆರಂಭ ಆಗಲಿದೆ ಎಂದು ಭರವಸೆ ನೀಡಿದರು ಅಂತಾ ವಿಜಯ ಕರ್ನಾಟಕ ವರದಿ ಮಾಡಿದೆ.
ಬೆಂಗಳೂರ- ಮೈಸೂರು ಎಕ್ಸ್ಪ್ರೆಸ್ವೇ ಶೇಷಗಿರಿಹಳ್ಳಿ ಹಾಗೂ ಲಕ್ಷ್ಮಿಸಾಗರ ಗೇಟ್ಗಳ ಬಳಿ ವಾಹನ ಸಂಚಾರ ಹಾಗೂ ಸ್ಥಳೀಯರ ಓಡಾಟಕ್ಕೆ ತೊಂದರೆ ಆಗುತ್ತಿರುವ ಕುರಿತು ಸ್ಥಳೀಯರು ಮನವಿ ಸಲ್ಲಿಕೆ ಮಾಡಿದ ಸ್ಕೈ ವಾಕ್ ಮಾಡಿಕೊಡಲು ಆಗ್ರಹಿಸಿದ್ದರು. ಸ್ಥಳೀಯರ ಮನವಿಯನ್ನು ತಕ್ಷಣವೇ ಪರಿಗಣಿಸಿ ಸ್ಥಳಕ್ಕೆ ತೆರಳಿ ಪರಿಶೀಲನೆ ಮಾಡಿದ್ದೇವೆ ಎಂದು ತಿಳಿಸಿದರು.
ಈ ಸಮಸ್ಯೆಗಳನ್ನಲ್ಲಾ ಗಮನಿಸಿ ಅಧಿಕಾರಿಗಳಿಗೆ ನೇರವಾಗಿ ದೂರವಾಣಿ ಮೂಲಕ ಸಂಪರ್ಕಿಸಿ ತ್ವರಿತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಪ್ರಯಾಣಿಕರಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರ ಅವಕಾಶ ಮಾಡಿಕೊಂಡುವಂತೆ ಶೀಘ್ರದಲ್ಲೇ ಪರಿಹಾರ ನೀಡುತ್ತೇವೆ ಎಂದು ಭರವಸೆ ನೀಡಿದರು. ಒಟ್ಟಿನಲ್ಲಿ ಇಲ್ಲಿ ನಡೆಯುತ್ತಿರುವ ಸಮಸ್ಯೆಗಳಿಗೆ ಮುಕ್ತಿ ಸಿಕ್ಕರೆ ಸಾಕು ಎನ್ನುತ್ತಿದ್ದಾರೆ ಇಲ್ಲಿನ ಸಾರ್ವಜನಿಕರು.
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಹೀಗೆ ಒಂದಲ್ಲ ಒಂದು ವಿಚಾರಕ್ಕೆ ಉದ್ಘಾಟನೆ ಆದ ಆರಂಭದಿಂದಲೂ ಇಲ್ಲಿಯವರೆಗೂ ಸುದ್ದಿಯಾಗುತ್ತಲೇ ಬಂದಿದೆ. ಇನ್ನೂ ಇದೀಗ ಇಲ್ಲಿ ಎಂಟ್ರಿ-ಎಕ್ಸಿಟ್ ಟೋಲ್ ನಿರ್ಮಾಣ ಆದ್ರೆ ಸಾಕು ಇಲ್ಲಿನ ಸಮಸ್ಯೆಗಳಿಗೆಲ್ಲ ಪರಿಹಾರ ಸಿಕ್ಕಂತಾಗಲಿದೆ. ಈಗಾಗಲೇ ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ಜಾಲ ವಿಸ್ತರಣೆ ಆಗುತ್ತಲಿದೆ. ಈ ನಡುವೆಯೇ ಟೋಲ್ ಶುಲ್ಕಗಳು ಸಹ ಏರಿಕೆಯಾಗಿದ್ದು, ಹೆದ್ದಾರಿ ಪ್ರಾಧಿಕಾರದ ವಿರುದ್ಧ ವಾಹನ ಸವಾರರು ಆಕ್ರೋಶ ಹೊರಹಾಕುತ್ತಿದ್ದಾರೆ.
-
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications