Bengaluru-Mysuru Expressway: ಎಕ್ಸಿಟ್ ಟೋಲ್ ನಿರ್ಮಾಣಕ್ಕೆ ಕೇಂದ್ರದಿಂದ ಅನುಮತಿ-ವೆಚ್ಚ ಎಷ್ಟು ಸಾವಿರ ಕೋಟಿ?-ಮಾಹಿತಿ
ಬೆಂಗಳೂರು, ಮಾರ್ಚ್, 13: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನ ಟೋಲ್ ವಿಚಾರದಲ್ಲಿ ಈಗಾಗಲೇ ಸಾಕಷ್ಟು ಗಲಾಟೆಗಳು ಆಗಿವೆ. ನಂತರ ಹಲವು ಬದಲಾವಣೆಗಳು ಕೂಡ ಆಗಿವೆ. ಹೀಗೆ ಒಂದಲ್ಲ ಒಂದು ವಿಚಾರಲ್ಲಿ ಈ ಹೆದ್ದಾರಿ ಸುದ್ದಿಯಾಗುತ್ತಲೇ ಇದೆ.
ಇದೀಗ ಎಕ್ಸ್ಪ್ರೆಸ್ ವೇನಲ್ಲಿ ಹೆದ್ದಾರಿ ಬಳಸಿದಷ್ಟೇ ಟೋಲ್ ಶುಲ್ಕ ನೀಡುವ ಎಕ್ಸಿಟ್ ಮತ್ತು ಎಂಟ್ರಿ ಟೋಲ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಹಾಗಾದರೆ ಇದಕ್ಕೆ ಬಿಡುಗಡೆ ಮಾಡಿದ ಹಣ ಎಷ್ಟು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಹೆದ್ದಾರಿಯಲ್ಲಿ ಎಕ್ಸಿಟ್ ಮತ್ತು ಎಂಟ್ರಿ ಟೋಲ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಅನುಮತಿ ದೊರೆತಿದೆ. ಹಾಗಾದರೆ ಈ ವ್ಯವಸ್ಥೆ ಎಲ್ಲೆಲ್ಲಿ ಜಾರಿಯಾಗಲಿದೆ ಹಾಗೂ ಇದಕ್ಕೆ ಪ್ರತಿಕ್ರಿಯೆಗಳು ಯಾವ ರೀತಿ ವ್ಯಕ್ತವಾಗುತ್ತಿವೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಇನ್ನು ಶೀಘ್ರವೇ ಪ್ರವೇಶ ಮತ್ತು ನಿರ್ಗಮನ ಟೋಲ್ ನಿರ್ಮಾಣ ಕಾಮಗಾರಿ ಆರಂಭ ಆಗಲಿದೆ. ಇದೀಗ ಎಕ್ಸ್ಪ್ರೆಸ್ವೇನಲ್ಲಿ ಓಪನ್ ಟೋಲ್ ಮಾದರಿಯಲ್ಲಿ ಹೆದ್ದಾರಿ ಶುಲ್ಕವನ್ನು ಸಂಗ್ರಹಿಸಲಾಗುತ್ತಿದೆ. ಇದರಿಂದ ಒಂದು ಕಿಲೋಮೀಟರ್ ಹೆದ್ದಾರಿ ಬಳಸಿದರೂ ಪೂರ್ಣ ಬಳಕೆಯ ಶುಲ್ಕ ಕೊಡಬೇಕಿದ್ದು, ಇದರ ವಿರುದ್ಧ ಸಾರ್ವಜನಿಕರು ಕೆಂಡಕಾರುತ್ತಿದ್ದಾರೆ.
ಎಕ್ಸ್ಪ್ರೆಸ್ವೇನ ಪ್ರಮುಖ ನಗರಗಳಿಗೆ ವ್ಯವಸ್ಥಿತವಾದ ಪ್ರವೇಶ ಹಾಗೂ ನಿರ್ಗಮನದ ವ್ಯವಸ್ಥೆಯಿಲ್ಲ. ಈ ಸಮಸ್ಯೆಯನ್ನು ನಿವಾರಣೆ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೂ 1,200 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರತ್ಯೇಕ ಯೋಜನೆ ಪ್ರಸ್ತಾವನೆ ಸಲ್ಲಿಸಿದ್ದು, ಇದೀಗ ಇದಕ್ಕೆ ಕೇಂದ್ರ ಸರ್ಕಾರದಿಂದ ಒಪ್ಪಿಗೆ ಸಿಕ್ಕಿದೆ.
ಎಕ್ಸ್ಪ್ರೆಸ್ವೇ ಹಾದು ಹೋಗಲಿರುವ ಬಿಡದಿ, ರಾಮನಗರ, ಚನ್ನಟಪಟ್ಟಣ, ಮದ್ದೂರು, ಮಂಡ್ಯ ಹಾಗೂ ಶ್ರೀರಂಗಪಟ್ಟಣ ನಗರಗಳ ಬಳಿ ಪ್ರವೇಶ ಮತ್ತು ನಿರ್ಗಮನ ದ್ವಾರದ ನಿರ್ಮಾಣಕ್ಕೆ ಯೋಜನೆಯು ಅವಕಾಶ ಕಲ್ಪಿಸಿಕೊಡಲಿದೆ.
ಕುಂಬಳಗೂಡು ಟೋಲ್ ಪ್ಲಾಜಾ, ಬಿಡದಿ, ರಾಮನಗರದ ಕೆಂಪೇಗೌಡನದೊಡ್ಡಿ, ಚನ್ನಪಟ್ಟಣದ ತಿಟ್ಟಮಾರನಹಳ್ಳಿ ಅಥವಾ ಮತ್ತೀಕೆರೆ, ಶೆಟ್ಟಿಹಳ್ಳಿ, ಮದ್ದೂರಿನ ನಿಡಘಟ್ಟ, ಮಂಡ್ಯ ಬೈಪಾಸ್ ಟೋಲ್, ಶ್ರೀರಂಗಪಟ್ಟಣ ಟೋಲ್ ಸ್ಥಳದಲ್ಲಿ ವಾಹನ ಹೆದ್ದಾರಿಗೆ ಪ್ರವೇಶ ಪಡೆಯುವ ಅವಕಾಶ ಮಾಡಿಕೊಡುವ ನಿರ್ಧಾರ ಮಾಡಿದೆ.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
NHAI FASTag: ಏಪ್ರಿಲ್ 1ರಿಂದಲೇ ಫಾಸ್ಟ್ಯಾಗ್ ವಾರ್ಷಿಕ ಪಾಸ್ ದರ ಏರಿಕೆ: ಎನ್ಎಚ್ಎಐ ಘೋಷಣೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು












Click it and Unblock the Notifications