ಬೆಂಗಳೂರಿಗೆ ಲಾಕ್ ಡೌನ್ ತೀರಾ ಅಗತ್ಯವಿದೆ; ಸಂಸದರ ಟ್ವೀಟ್
ಬೆಂಗಳೂರು, ಜುಲೈ 07 : "ರಾಜ್ಯಕ್ಕೆ ಈಗ ಲಾಕ್ ಡೌನ್ ಅಗತ್ಯವಿದೆ. ವಿಶೇಷವಾಗಿ ಬೆಂಗಳೂರಿನಲ್ಲಿ ಸೋಂಕು ಹರಡುತ್ತಿರುವ ವೇಗ ನೋಡಿದರೆ ಬೆಂಗಳೂರಿಗೆ ಲಾಕ್ ಡೌನ್ ತೀರಾ ಅಗತ್ಯವಿದೆ" ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ. ಕೆ. ಸುರೇಶ್ ಟ್ವೀಟ್ ಮಾಡಿದ್ದಾರೆ.
Recommended Video
ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೋವಿಡ್ - 19 ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕ ಡಿ. ಕೆ. ಸುರೇಶ್ ಸರಣಿ ಟ್ವೀಟ್ಗಳನ್ನು ಮಾಡಿದ್ದಾರೆ. ಲಾಕ್ ಡೌನ್ ಕುರಿತು ಮಾತನಾಡಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯದ ತಂಡ ಮಂಗಳವಾರ ರಾಜ್ಯಕ್ಕೆ ಆಗಮಿಸಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಜೊತೆ ತಂಡ ಸಭೆ ನಡೆಸಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸೇರಿದಂತೆ ಹಲವು ಸಚಿವರು ಸಭೆಯಲ್ಲಿದ್ದರು.
ಸಭೆಯ ಬಳಿಕ ಮಾತನಾಡಿದ ಡಾ. ಕೆ. ಸುಧಾಕರ್, "ಕೇಂದ್ರ ತಂಡದ ಜೊತೆ ಲಾಕ್ ಡೌನ್ ಕುರಿತು ಯಾವುದೇ ಮಾತುಕತೆ ನಡೆದಿಲ್ಲ. ಸೀಲ್ ಡೌನ್ ಕ್ರಮವನ್ನು ಇನ್ನಷ್ಟು ಬಿಗಿಗೊಳಿಸಲಿದ್ದೇವೆ" ಎಂದು ಹೇಳಿದರು.
|
ಬಿಜೆಪಿ ಸರ್ಕಾರ ವಿಫಲವಾಗಿದೆ
"ರಾಜ್ಯಕ್ಕೆ ಈಗ ಲಾಕ್ ಡೌನ್ ಅನಿವಾರ್ಯವಾಗಿದೆ. ವಿಶೇಷವಾಗಿ ಬೆಂಗಳೂರಿನಲ್ಲಿ ಸೋಂಕು ಹರಡುತ್ತಿರುವ ವೇಗ ನೋಡಿದರೆ ಬೆಂಗಳೂರಿಗೆ ಲಾಕ್ ಡೌನ್ ತೀರಾ ಅಗತ್ಯವಿದೆ. ಬಿಜೆಪಿ ಸರ್ಕಾರ ಕೊರೊನಾ ಹತೋಟಿಗೆ ತರಲು ಎಲ್ಲಾ ಹಂತದಲ್ಲೂ ವಿಫಲವಾಗಿದೆ" ಎಂದು ಸಂಸದ ಡಿ. ಕೆ. ಸುರೇಶ್ ಆರೋಪಿಸಿದ್ದಾರೆ.

ನಂಬಿಕೆ ಉಳಿಸಿಕೊಂಡಿಲ್ಲ
"ಜನಸಾಮಾನ್ಯರಿಗೆ ಸರ್ಕಾರದ ಮೇಲಿದ್ದ ನಂಬಿಕೆಗಳನ್ನು ಉಳಿಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ಸೋತಿದೆ. ಇಂತಹ ಸಂದರ್ಭದಲ್ಲಿ ಜನ ಸಾಮಾನ್ಯರು ಬೆಂಗಳೂರಿನಿಂದ ತಮ್ಮ ಊರುಗಳಿಗೆ ಗುಳೆ ಹೊರಡುತ್ತಿದ್ದಾರೆ. ಸರ್ಕಾರದ ನಿಲುವುಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ" ಎಂದು ಡಿ. ಕೆ. ಸುರೇಶ್ ಹೇಳಿದ್ದಾರೆ.
|
ಪರಿಸ್ಥಿತಿ ನಿಭಾಯಿಸಬೇಕು
"ಕೇಂದ್ರ ಸರ್ಕಾರ ಈ ಕೂಡಲೇ ಇಲ್ಲಿನ ಅವ್ಯವಸ್ಥೆಗೆ ಮಧ್ಯ ಪ್ರವೇಶಿಸಿ ಇಲ್ಲಿನ ಸ್ಥಿತಿಯನ್ನು ನಿಭಾಯಿಸಬೇಕು. ಜನರ ರಕ್ಷಣೆಗೆ ನಿಲ್ಲಬೇಕು ಎಂದು" ಡಿ. ಕೆ. ಸುರೇಶ್ ಹೇಳಿದ್ದಾರೆ.

ಸೋಂಕಿತರ ಸಂಖ್ಯೆ ಹೆಚ್ಚಳ
ಬೆಂಗಳೂರು ನಗರದಲ್ಲಿ ಕಳೆದ ಒಂದು ವಾರದಿಂದ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸೋಮವಾರ ನಗರದಲ್ಲಿ 981 ಪ್ರಕರಣ ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 10,561ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಪುನಃ ಲಾಕ್ ಡೌನ್ ಜಾರಿಗೆ ಬರಲಿದೆಯೇ?.
-
ಏಪ್ರಿಲ್ 7ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಧನುಷ್ ಜೊತೆ ಸ್ನೇಹ ಕಳೆದುಕೊಂಡಿದ್ದು ನನ್ನ ಜೀವನದ ದೊಡ್ಡ ನಷ್ಟ: ಪತ್ನಿ ನಯನತಾರ ಜೊತೆಗಿನ ಮನಸ್ತಾಪಕ್ಕೆ ವಿಘ್ನೇಶ್ ಶಿವನ್ ಬೇಸರ -
2026ರ PUC ಫಲಿತಾಂಶಕ್ಕೆ ಕ್ಷಣಗಣನೆ; ಈ ಬಾರಿ ಡಿಜಿಲಾಕರ್ನಲ್ಲೂ ರಿಸಲ್ಟ್ ಲಭ್ಯ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru: ನಸುಕಿನ ಜಾವ 3 ಗಂಟೆಗೆ ರಾಪಿಡೋ ರೈಡರ್ ತೋರಿದ ಮಾನವೀಯತೆಗೆ ಮಹಿಳೆ ಫಿದಾ, Video Viral -
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
ಒರಾಕಲ್ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral -
ಹುಡುಗಿಯರೇ ಎಚ್ಚರ: ಟಾಕ್ಸಿಕ್ ಗಂಡಸರ ಲಕ್ಷಣಗಳಿವು, ಮೆಚ್ಚಿ ಒಲಿದರೆ ಬಲಿಯಾಗುವಿರಿ -ಡಾ ರೂಪಾ ರಾವ್ ಬರಹ -
Jowar Price: ಕರ್ನಾಟಕದ ಮಾರುಕಟ್ಟೆಗಳಲ್ಲಿ ಜೋಳದ ದರ ಏರಿಳಿತ; ಇಲ್ಲಿದೆ ಜಿಲ್ಲಾವಾರು ಬೆಲೆ ಪಟ್ಟಿ -
Karnataka Rain: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ: ಐಎಂಡಿ ವರದಿ -
Zomato: ಬೆಂಗಳೂರು Vs ಚೆನ್ನೈ ಸಾಂಬಾರ್ ಎಂದ ಝೊಮ್ಯಾಟೊ; ನಮಗೆ ಸ್ವಿಗ್ಗಿ ಸಾಕು ಎಂದ ನೆಟ್ಟಿಗರು -
ವಾರ ಭವಿಷ್ಯ: ಈ ರಾಶಿಯ ಪ್ರೇಮಿಗಳು ಮತ್ತೆ ಒಂದಾಗುತ್ತಾರೆ! ಸೂರ್ಯನಿಗೆ ಅರ್ಘ್ಯದಿಂದ ಭಾಗ್ಯ ಬದಲಾವಣೆ -
SSLC ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡಿಂಗ್: ಸರ್ಕಾರದ ದಿಢೀರ್ ನಿರ್ಧಾರಕ್ಕೆ ಖಾಸಗಿ ಶಾಲೆಗಳ ತೀವ್ರ ವಿರೋಧ












Click it and Unblock the Notifications