ಬೆಂಗಳೂರಿಗೆ ಲಾಕ್ ಡೌನ್ ತೀರಾ ಅಗತ್ಯವಿದೆ; ಸಂಸದರ ಟ್ವೀಟ್
ಬೆಂಗಳೂರು, ಜುಲೈ 07 : "ರಾಜ್ಯಕ್ಕೆ ಈಗ ಲಾಕ್ ಡೌನ್ ಅಗತ್ಯವಿದೆ. ವಿಶೇಷವಾಗಿ ಬೆಂಗಳೂರಿನಲ್ಲಿ ಸೋಂಕು ಹರಡುತ್ತಿರುವ ವೇಗ ನೋಡಿದರೆ ಬೆಂಗಳೂರಿಗೆ ಲಾಕ್ ಡೌನ್ ತೀರಾ ಅಗತ್ಯವಿದೆ" ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ. ಕೆ. ಸುರೇಶ್ ಟ್ವೀಟ್ ಮಾಡಿದ್ದಾರೆ.
Recommended Video
ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೋವಿಡ್ - 19 ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕ ಡಿ. ಕೆ. ಸುರೇಶ್ ಸರಣಿ ಟ್ವೀಟ್ಗಳನ್ನು ಮಾಡಿದ್ದಾರೆ. ಲಾಕ್ ಡೌನ್ ಕುರಿತು ಮಾತನಾಡಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯದ ತಂಡ ಮಂಗಳವಾರ ರಾಜ್ಯಕ್ಕೆ ಆಗಮಿಸಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಜೊತೆ ತಂಡ ಸಭೆ ನಡೆಸಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸೇರಿದಂತೆ ಹಲವು ಸಚಿವರು ಸಭೆಯಲ್ಲಿದ್ದರು.
ಸಭೆಯ ಬಳಿಕ ಮಾತನಾಡಿದ ಡಾ. ಕೆ. ಸುಧಾಕರ್, "ಕೇಂದ್ರ ತಂಡದ ಜೊತೆ ಲಾಕ್ ಡೌನ್ ಕುರಿತು ಯಾವುದೇ ಮಾತುಕತೆ ನಡೆದಿಲ್ಲ. ಸೀಲ್ ಡೌನ್ ಕ್ರಮವನ್ನು ಇನ್ನಷ್ಟು ಬಿಗಿಗೊಳಿಸಲಿದ್ದೇವೆ" ಎಂದು ಹೇಳಿದರು.
|
ಬಿಜೆಪಿ ಸರ್ಕಾರ ವಿಫಲವಾಗಿದೆ
"ರಾಜ್ಯಕ್ಕೆ ಈಗ ಲಾಕ್ ಡೌನ್ ಅನಿವಾರ್ಯವಾಗಿದೆ. ವಿಶೇಷವಾಗಿ ಬೆಂಗಳೂರಿನಲ್ಲಿ ಸೋಂಕು ಹರಡುತ್ತಿರುವ ವೇಗ ನೋಡಿದರೆ ಬೆಂಗಳೂರಿಗೆ ಲಾಕ್ ಡೌನ್ ತೀರಾ ಅಗತ್ಯವಿದೆ. ಬಿಜೆಪಿ ಸರ್ಕಾರ ಕೊರೊನಾ ಹತೋಟಿಗೆ ತರಲು ಎಲ್ಲಾ ಹಂತದಲ್ಲೂ ವಿಫಲವಾಗಿದೆ" ಎಂದು ಸಂಸದ ಡಿ. ಕೆ. ಸುರೇಶ್ ಆರೋಪಿಸಿದ್ದಾರೆ.

ನಂಬಿಕೆ ಉಳಿಸಿಕೊಂಡಿಲ್ಲ
"ಜನಸಾಮಾನ್ಯರಿಗೆ ಸರ್ಕಾರದ ಮೇಲಿದ್ದ ನಂಬಿಕೆಗಳನ್ನು ಉಳಿಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ಸೋತಿದೆ. ಇಂತಹ ಸಂದರ್ಭದಲ್ಲಿ ಜನ ಸಾಮಾನ್ಯರು ಬೆಂಗಳೂರಿನಿಂದ ತಮ್ಮ ಊರುಗಳಿಗೆ ಗುಳೆ ಹೊರಡುತ್ತಿದ್ದಾರೆ. ಸರ್ಕಾರದ ನಿಲುವುಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ" ಎಂದು ಡಿ. ಕೆ. ಸುರೇಶ್ ಹೇಳಿದ್ದಾರೆ.
|
ಪರಿಸ್ಥಿತಿ ನಿಭಾಯಿಸಬೇಕು
"ಕೇಂದ್ರ ಸರ್ಕಾರ ಈ ಕೂಡಲೇ ಇಲ್ಲಿನ ಅವ್ಯವಸ್ಥೆಗೆ ಮಧ್ಯ ಪ್ರವೇಶಿಸಿ ಇಲ್ಲಿನ ಸ್ಥಿತಿಯನ್ನು ನಿಭಾಯಿಸಬೇಕು. ಜನರ ರಕ್ಷಣೆಗೆ ನಿಲ್ಲಬೇಕು ಎಂದು" ಡಿ. ಕೆ. ಸುರೇಶ್ ಹೇಳಿದ್ದಾರೆ.

ಸೋಂಕಿತರ ಸಂಖ್ಯೆ ಹೆಚ್ಚಳ
ಬೆಂಗಳೂರು ನಗರದಲ್ಲಿ ಕಳೆದ ಒಂದು ವಾರದಿಂದ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸೋಮವಾರ ನಗರದಲ್ಲಿ 981 ಪ್ರಕರಣ ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 10,561ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಪುನಃ ಲಾಕ್ ಡೌನ್ ಜಾರಿಗೆ ಬರಲಿದೆಯೇ?.
-
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
ಮಾರ್ಚ್ 16ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು












Click it and Unblock the Notifications