ನಮ್ಮ ಶಾಸಕರಿಗೆ ಕೊಚ್ಚಿ ಕಂಪನಿಯಿಂದ ನೀರಾಭಾಗ್ಯ!
ಬೆಂಗಳೂರು, ಜು. 11: ನಮ್ಮ ಶಾಸಕರು ಇನ್ನು ಮುಂದೆ ವಿಧಾನಸೌಧದಲ್ಲಿಯೇ ನೀರಾ ಕುಡಿದು ಮಜಾ ಉಡಾಯಿಸಲಿದ್ದಾರೆ. ಮಳೆಗಾಲದ ಅಧಿವೇಶನದಲ್ಲಿ ಶಾಸಕರಿಗೆ ಕೊಚ್ಚಿ ಮೂಲದ ಸಂಸ್ಥೆಯೊಂದು ನೀರಾ ಸರಬರಾಜು ಮಾಡಲಿದೆ.
ಈ ಬಗ್ಗೆ ಮಾಹಿತಿ ನೀಡಿದ ಕೊಚ್ಚಿ ಮೂಲದ ತೆಂಗು ಉತ್ಪನ್ನ ಸಂಸ್ಥೆಯ ಅಧ್ಯಕ್ಷ ಕೆ ಟಿ ಜೋಷ್ ಬೆಂಗಳೂರಿನಲ್ಲಿ ಆರಂಭವಾಗಲಿರುವ ಅಧಿವೇಶನದಲ್ಲಿ ನೀರಾ ಸರಬರಾಜು ಮಾಡಲಾಗುವುದು ಎಂದು ತಿಳಿಸಿದರು.[ಬೀರು ತರುವವರ ಮನೆಗೆ ನೀರಾ ತರುವಾ!]

ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಾತ್ರ ನೀರಾ ಇಳಿಕೆ ಮಾಡಲು ಸರ್ಕಾರ ಅವಕಾಶ ಕಲ್ಪಿಸಿದೆ. ಕರ್ನಾಟಕ ಅಬಕಾರಿ ಇಲಾಖೆ ಎಲ್ಲ ಜಿಲ್ಲೆಗಳಲ್ಲೂ ನೀರಾ ಇಳಿಕೆ ಮಾಡಲು ಅವಕಾಶ ನೀಡಬೇಕು ಎಂದು ಕೇಳಿಕೊಂಡಿದೆ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ಈ ಬಾರಿಯ ಅಧಿವೇಶನದಲ್ಲಿ ನೀರಾ ಬಳಕೆ ಸಂಬಂಧ ಸ್ಪಷ್ಟ ನಿರ್ದೇಶನ ನೀಡಲಿದ್ದಾರೆ ಎಂಬ ವಿಶ್ವಾಸವಿದೆ. ಇದು ಅಬಕಾರಿ ಇಲಾಖೆಗೆ ಆದಾಯ ತಂದುಕೊಡುವುದಲ್ಲದೇ ರೈತರಿಗೆ ನೆರವಾಗಲಿದೆ ಎಂದು ಹೇಳಿದರು.[ಪರಿಹಾರದ ಆಸೆಗಾಗಿ ಆತ್ಮಹತ್ಯೆ ಮಾಡಿಕೊಂಡ ಶಾಸಕ!]
ತೆಂಗು ಬೆಳೆಗಾರರು ಬೆಳಗಾವಿ ಅಧಿವೇಶನದಲ್ಲಿ ನೀರಾಗೆ ಸಂಬಂಧಿಸಿದ ಕಾನೂನು ತಿದ್ದುಪಡಿ ಬಗ್ಗೆ ಸರ್ಕಾರವನ್ನು ಕೇಳಿಕೊಂಡಿದ್ದರು. ಅಲ್ಲದೇ ಶಾಸಕರಿಗೆ ಪೌಷ್ಟಿಕಾಂಶಯುಕ್ತ ನೀರಾ ನೀಡುತ್ತೇವೆ ಎಂದು ಮನವಿ ಮಾಡಿಕೊಂಡಿದ್ದರು. ಸಿಎಂ ಸಿದ್ದರಾಮಯ್ಯ ಮತ್ತು ಸ್ಪೀಕರ್ ಕಾಗೋಡು ತಿಮ್ಮಪ್ಪ ಇದಕ್ಕೆ ಒಪ್ಪಿಗೆ ನೀಡಿದ್ದು ಜುಲೈ 15 ರ ನಂತರದ ಅಧಿವೇಶನದಲ್ಲಿ ಭಾಗವಹಿಸುವವರಿಗೆ ನೀರಾ ಸಿಗಲಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications