ಬೆಂಗಳೂರಿನ ನಿಮ್ಹಾನ್ಸ್ ಹಿಸ್ಟರಿ ಮ್ಯೂಸಿಯಂ ಲೋಕಾರ್ಪಣೆಗೆ ಸಿದ್ಧ
ಬೆಂಗಳೂರು, ಜುಲೈ, 25 : ನೀವು ಕಳೆದ ಶತಮಾನದ 40ರ ದಶಕದ ಮನೋವೈಜ್ನಾನಿಕ ಉಪಕರನಗಳನ್ನು ನೋಡಬೇಕೇ? ಹಾಗಾದರೆ ಮುಂದಿನ ವಾರ ನಿಮ್ಹಾನ್ಸ್ (ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ)ಗೆ ಭೇಟಿ ನೀಡಬಹುದು.
20 ನೇ ಶತಮಾನದ 40 ರ ದಶಕದದಲ್ಲಿ ಬಳಸುತ್ತಿದ್ದ ಸುಳ್ಳು ಪತ್ತೆ ಯಂತ್ರ, ಮಾಗ್ನೆಟೋ ಎಲೆಕ್ಟ್ರಿಕಲ್ ಥೆರಪಿ ಸೇರಿದಂತೆ ಹಲವು ಅಪರೂಪದ ಉಪಕರಣಗಳನ್ನು ವೀಕ್ಷಿಸುವ ವ್ಯವಸ್ಥೆಯನ್ನು ನಿಮ್ಹಾನ್ಸ್ ಸಂಸ್ಥೆ ಮಾಡಿಕೊಟ್ಟಿದೆ. ಹಲವಾರು ಅಪೂರ್ವ ಉಪಕರಣಗಳ ಹಿಸ್ಟರಿ ಮ್ಯೂಸಿಯಂ ನ್ನು ನಿಮ್ಹಾನ್ಸ್ ಆರಂಭಿಸುತ್ತಿದ್ದು, ಮಂಗಳವಾರ ಜುಲೈ 28ರಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಉದ್ಘಾಟಿಸಲಿದ್ದಾರೆ.[ಅಪರೂಪದ ಈ ಮ್ಯೂಸಿಯಂ ಅಭಿವೃದ್ಧಿ ಮಾಡುವವರು ಯಾರು?]

ವಿಶ್ವದಲ್ಲಿ ಈ ಬಗೆಯ ಉಪಕರಣಗಳಿರುವುದು ಕೇವಲ 5 ಮಾತ್ರ. ಈ ಉಪಕರಣಗಳು ಬ್ರಿಟಿಷರ ಕಾಲದಲ್ಲಿ ನಿರ್ಮಿತವಾದಂತಹವು. ಈ ಯಂತ್ರವನ್ನು ಮಾನಸಿಕ ಆರೋಗ್ಯ ಆರೈಕೆಯಲ್ಲಿ ಭಾರತ ಸೇರದಂತೆ ಹಲವು ರಾಷ್ಟ್ರಗಳು ಬಳಸುತ್ತಿದ್ದವು. 2ನೇ ಮಹಾಯುದ್ದದ ಸಂದರ್ಭದಲ್ಲಿ ಬಳಸಲಾಗುತ್ತಿದ್ದ ಅನಸ್ತೇಶಿಯಾ ಸಾಧನಗಳು ಸೇರಿದಂತೆ ಎಲ್ಲಾ ಉಪಕರಣಗಳನ್ನು ಇದೇ ಮೊದಲ ಬಾರಿಗೆ ಸಾರ್ವಜನಿಕ ಪ್ರದರ್ಶನಕ್ಕೆ ಲಭ್ಯವಾಗಲಿದೆ ಎಂದು ನಿಮ್ಹಾನ್ಸ್ ಸಿಬ್ಬಂದಿವರ್ಗ ತಿಳಿಸಿದ್ದಾರೆ.
ಮನಸ್ಸು ಮತ್ತು ಮೆದುಳಿನ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮತ್ತು ಪ್ರೇರಣೆ ನೀಡುವ ಉದ್ದೇಶದಿಂದ ಈ ಪ್ರದರ್ಶನ ಏರ್ಪಡಿಸಲಾಗಿದೆ. ನಿಮ್ಹಾನ್ಸ್ 2012ರಲ್ಲಿ ಪಾರಂಪರಿಕ ಕಟ್ಟಡದಲ್ಲಿ ಮ್ಯೂಸಿಯಂ ಆರಂಭಿಸಿತ್ತು. ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ಸ್ ಆಂಡ್ ಕಲ್ಚರ್ ಹೆರಿಟೇಜ್ ಈ ಯೋಜನೆಯ ಸಮನ್ವಯತೆಯನ್ನು ನೋಡಿಕೊಳ್ಳುತ್ತಿದೆ ಎಂದು ಉಸ್ತುವಾರಿ ಸಮಿತಿ ಸದಸ್ಯರು ತಿಳಿಸಿದ್ದಾರೆ.
-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ನಿಮ್ಮ ಮನೆಯ ವಾಸ್ತು ಸರಿಯಿದೆಯೇ? ಶಾಂತಿ ಮತ್ತು ಪ್ರಗತಿಗಾಗಿ ಇಲ್ಲಿವೆ ಪರಿಹಾರಗಳು -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ












Click it and Unblock the Notifications