ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ ವೈಎಸ್ವಿ ದತ್ತಾ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್- ಕಾರಣ ತಿಳಿಯಿರಿ
ಬೆಂಗಳೂರು, ಏಪ್ರಿಲ್ 15: ಚೆಕ್ ಬೌನ್ಸ್ ಪ್ರಕರಣದಲ್ಲಿ ಬೆಂಗಳೂರಿನ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದ ನಂತರ ಜೆಡಿಎಸ್ ನಾಯಕ ವೈಎಸ್ವಿ ದತ್ತಾ ಅವರ ಸಂಕಷ್ಟ ಮುಂದುವರೆದಿದೆ.
ಟಿವಿ9 ಪ್ರಕಾರ, ದತ್ತಾ ಶನಿವಾರ ಮೊತ್ತವನ್ನು ಪಾವತಿಸಬೇಕಿತ್ತು. ಅವರು ಹಾಜರಾಗದ ಕಾರಣ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಾರಂಟ್ ಬಿಡುಗಡೆ ಮಾಡಿದೆ. ಹಾಜರಾತಿಯಿಂದ ವಿನಾಯಿತಿ ಕೋರಿ ದತ್ತಾ ಸಲ್ಲಿಸಿದ್ದ ಮನವಿಯನ್ನೂ ನ್ಯಾಯಾಲಯ ವಜಾಗೊಳಿಸಿದೆ.

ಏಪ್ರಿಲ್ 26 ರಂದು ಹಾಜರಾಗುವಂತೆ ದತ್ತಾ ಅವರಿಗೆ ನ್ಯಾಯಾಲಯ ಸೂಚಿಸಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ಹಿಂದೆ ಸಿಎಸ್ ಸೋಮೇಗೌಡ ಎಂಬುವರು ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು. ಈ ಹಿಂದೆಯೂ ದತ್ತಾ ವಿರುದ್ಧ ಹಲವು ಬಂಧನ ವಾರಂಟ್ಗಳನ್ನು ಹೊರಡಿಸಲಾಗಿತ್ತು.
ಇತ್ತೀಚೆಗೆ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದ ಕಡೂರಿನ ಮಾಜಿ ಶಾಸಕ ವೈಎಸ್ವಿ ದತ್ತ ಗುರುವಾರ ಪಕ್ಷದ ಮುಖಂಡ ಹೆಚ್ಡಿ ರೇವಣ್ಣ, ಅವರ ಪುತ್ರ ಪ್ರಜ್ವಲ್ ರೇವಣ್ಣ ಹಾಗೂ ನೂರಾರು ಬೆಂಬಲಿಗರು ಹಾಗೂ ಪಕ್ಷದ ಕಾರ್ಯಕರ್ತರ ಸಮ್ಮುಖದಲ್ಲಿ ಜೆಡಿಎಸ್ಗೆ ಮರಳಿದರು.
ಈ ವೇಳೆ, ಮಾತನಾಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ, 'ದತ್ತಣ್ಣ ಹಾಗೂ ಅವರ ಹಿಂಬಾಲಕರಿಗೆ ಕಾಂಗ್ರೆಸ್ ದ್ರೋಹ ಬಗೆದಿದೆ. ಇತ್ತೀಚಿನ ಬೆಳವಣಿಗೆಗಳಿಂದ ಅವರಿಗೆ ನೋವಾಗಿದೆ. ಅವರು ನಮ್ಮನ್ನು ಅಗಲಿದಾಗ ನಾವು ಕೂಡ ನೋವಿನಲ್ಲಿದ್ದೆವು. ಹಿಂದಿನದನ್ನು ಸಮಾಧಿ ಮಾಡಿ ಮುಂದೆ ಸಾಗುವ ಸಮಯ. ನಾವು ಅವರನ್ನು ಪಕ್ಷಕ್ಕೆ ಮುಕ್ತ ತೋಳುಗಳೊಂದಿಗೆ ಸ್ವಾಗತಿಸುತ್ತೇವೆ' ಎಂದು ಹೇಳಿದ್ದಾರೆ.
ಪಕ್ಷದ ಮುಖಂಡ ಹಾಗೂ ಮಾಜಿ ಸಚಿವ ಎಚ್ಡಿ ರೇವಣ್ಣ ಮಾತನಾಡಿ, 'ದತ್ತ ಅವರು ಪಕ್ಷಕ್ಕೆ ನೀಡಿದ ಕೊಡುಗೆ ನಮಗೆಲ್ಲರಿಗೂ ತಿಳಿದಿದೆ. ದತ್ತ ಅವರು ಕಡೂರಿನಿಂದ ಸ್ಪರ್ಧಿಸಬೇಕೆಂದು ನಾವು ಬಯಸುತ್ತೇವೆ' ಎಂದಿದ್ದಾರೆ.
ಕಳೆದ ವಾರ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಕಡೂರಿನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ದತ್ತ ಘೋಷಿಸಿದ್ದರು. ಕೆಎಸ್ ಆನಂದ್ ಅವರಿಗೆ ಕಾಂಗ್ರೆಸ್ ಕಡೂರು ಟಿಕೆಟ್ ನೀಡಿತ್ತು.
ಜೆಡಿಎಸ್ ಟಿಕೆಟ್
ಕರ್ನಾಟಕದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ತನ್ನ 49 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ. ಕಡೂರಿನಿಂದ ವೈಎಸ್ವಿ ದತ್ತಾ ಅವರನ್ನು ಕಣಕ್ಕಿಳಿಸಲು ಜೆಡಿಎಸ್ ನಿರ್ಧರಿಸಿದೆ.
ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ಟಿಕೆಟ್ ಅನ್ನು ಸ್ವರೂಪ್ ಅವರಿಗೆ ಜೆಡಿಎಸ್ ನೀಡಿದೆ. ಅಲ್ಲಿ ಸ್ಪರ್ಧಿಸಲು ಬಯಸಿದ್ದ ಎಚ್ಡಿ ರೇವಣ್ಣ ಅವರ ಪತ್ನಿ ಭವಾನಿ ಅವರಿಗೆ ಮುಖಭಂಗವಾಗಿದೆ. ಕುಮಾರಸ್ವಾಮಿ ಅವರ ಬಯಕೆಯಂತೆ 'ಸಾಮಾನ್ಯ ಕಾರ್ಯಕರ್ತ ಸ್ವರೂಪ್' ಅವರಿಗೆ ಟಿಕೆಟ್ ಘೋಷಿಸಿದೆ.
ಭವಾನಿ ಅವರಿಗೆ ಟಿಕೆಟ್ ನೀಡಬೇಕೆಂದು ಅವರ ಪುತ್ರರಾದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಎಂಎಲ್ಸಿ ಸ್ವರೂಪ್ ಅವರು ಒತ್ತಾಯಿಸಿದ್ದರು. ಆದರೆ, ಕುಮಾರಸ್ವಾಮಿ ಅವರು ಇದಕ್ಕೆ ಮಣೆ ಹಾಕಲಿಲ್ಲ. ಈ ಹಿನ್ನೆಲೆಯಲ್ಲಿ ಸ್ವರೂಪ್ ಅವರಿಗೆ ಜೆಡಿಎಸ್ ಟಿಕೆಟ್ ಘೋಷಿಸಿದೆ.
ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಜೆಡಿಎಸ್ ಮೂರು ಪಟ್ಟಿಯನ್ನು ಪ್ರಕಟಿಸಿದೆ. ಇಂದು ಬಿಡುಗಡೆಗೊಂಡ ಪಟ್ಟಿಯಲ್ಲಿ ಐವರನ್ನು ಹೆಸರಿಸಲಾಗಿದೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications