Get Updates
Get notified of breaking news, exclusive insights, and must-see stories!

ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ

Bengaluru: ಬೆಂಗಳೂರು ಉತ್ತರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್‌ಗೆ ಸಂಬಂಧಿಸಿದಂತೆ ಮಹತ್ವದ ಚರ್ಚೆ ಮಾಡಲಾಗಿದೆ. ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ವಿಷಯ ಚರ್ಚೆ ಮಾಡಲಾಗಿದೆ.

ಬೆಂಗಳೂರು ಉತ್ತರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ಟಿ.ಡಿ.ಆರ್. (Transferable Development Rights) ಹಾಗೂ ವಿವಿಧ ಕಾಮಗಾರಿಗಳ ಪ್ರಗತಿ ಕುರಿತು ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್‌ 24ರ ಮಂಗಳವಾರ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಸಮಗ್ರ ಪರಿಶೀಲನಾ ಸಭೆ ನಡೆಯಿತು.

Bengaluru

ಸಭೆಯಲ್ಲಿ 'ಸುರಕ್ಷೆ-75' ಯೋಜನೆಯಡಿ ಕೈಗೊಂಡಿರುವ 16 ವೃತ್ತಗಳ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಲಾಯಿತು. ಮೆಟ್ರೋ ಕಾಮಗಾರಿ, ಅಂಡರ್‌ಪಾಸ್ ಮತ್ತು ಫ್ಲೈಓವರ್‌ಗಳ ಕಾರಣದಿಂದ ಬಾಕಿ ಉಳಿದ ವೃತ್ತಗಳನ್ನು ಹೊರತುಪಡಿಸಿ, ಉಳಿದ 9 ವೃತ್ತಗಳ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಆಯುಕ್ತರು ಸೂಚಿಸಿದ್ದಾರೆ.

ಆಯುಕ್ತರು ನೀಡಿದ ಪ್ರಮುಖ ಸೂಚನೆಗಳು

ಮಳೆಗಾಲಕ್ಕೂ ಮೊದಲು ನೀರು ನಿಲ್ಲುವ ಸ್ಥಳಗಳನ್ನು ಗುರುತಿಸಿ ಸಮಸ್ಯೆಯನ್ನು ಸಂಪೂರ್ಣವಾಗಿ ನಿವಾರಣೆ ಮಾಡಬೇಕು

ಪ್ರಮುಖ ಜಂಕ್ಷನ್‌ಗಳಲ್ಲಿ ಸಂಚಾರ ಸುಗಮವಾಗುವಂತೆ ತಕ್ಷಣ ಕ್ರಮ ಕೈಗೊಳ್ಳಬೇಕು

ಆಯ್ದ ಸ್ಥಳಗಳಲ್ಲಿ ಹೊಸ ಮಾದರಿಯ ಪಾದಚಾರಿ ಮಾರ್ಗ ವಿನ್ಯಾಸಗಳನ್ನು ಪ್ರಯೋಗಾತ್ಮಕವಾಗಿ ಅಳವಡಿಸಬೇಕು

ಪ್ರಯೋಗಾತ್ಮಕ ವಿನ್ಯಾಸಗಳು ಯಶಸ್ವಿಯಾದಲ್ಲಿ ಇತರೆ ಪ್ರದೇಶಗಳಲ್ಲಿಯೂ ಜಾರಿಗೆ ತರಬೇಕು

ಮಳೆಗಾಲದಲ್ಲಿ ನೀರು ನಿಲ್ಲದಂತೆ ಹಾಗೂ ಅನಾಹುತಗಳಿಗೆ ಅವಕಾಶವಿಲ್ಲದಂತೆ ಕಾಲಮಿತಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು

ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಸಕಾಲಿಕ ಕ್ರಮಗಳನ್ನು ಕೈಗೊಳ್ಳಬೇಕು.

ರಸ್ತೆ ಅಗಲೀಕರಣ ಹಾಗೂ ಟಿಡಿಆರ್ ಕುರಿತು ಚರ್ಚೆ

ಸಭೆಯಲ್ಲಿ ರಸ್ತೆ ಅಗಲೀಕರಣ ಹಾಗೂ ಟಿ.ಡಿ.ಆರ್. ಕುರಿತು ಚರ್ಚೆ ನಡೆಯಿತು. ಈಗಾಗಲೇ ಕಾಮಗಾರಿಗಳು ಪೂರ್ಣಗೊಂಡಿದ್ದರೂ ಟಿ.ಡಿ.ಆರ್. ಪೂರೈಕೆಯಲ್ಲಿ ವಿಳಂಬವಾಗಿರುವುದನ್ನು ಗಮನಿಸಿದ ಆಯುಕ್ತರು, ತ್ವರಿತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ವೇಳೆ ಕಾನೂನಿನ ಎಲ್ಲ ತೊಡಕುಗಳನ್ನು ನಿವಾರಿಸಿಕೊಂಡು, ಟಿ.ಡಿ.ಆರ್.ಗಳನ್ನು ಶೀಘ್ರದಲ್ಲಿ ಪೂರೈಸಲು ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಸಭೆಯಲ್ಲಿ ಅಪರ ಆಯುಕ್ತರು (ಅಭಿವೃದ್ಧಿ)ಲತಾ, ಜಂಟಿ ಆಯುಕ್ತರಾದ ಮೊಹಮ್ಮದ್ ನಯೀಮ್ ಮೊಮಿನ್ ಮತ್ತು ಪಲ್ಲವಿ, ಮುಖ್ಯ ಎಂಜಿನಿಯರರಾದ ರಾಘವೇಂದ್ರ ಪ್ರಸಾದ್ ಮತ್ತು ಯಮುನಾ, ಅಧೀಕ್ಷಕ ಎಂಜಿನಿಯರರಾದ ಪ್ರಕಾಶ್ ಮತ್ತು ಕೃಷ್ಣಕುಮಾರ್, B-SMILE ಅಧಿಕಾರಿಗಳು, ಸಮಾಲೋಚಕರು, ಕಾರ್ಯಪಾಲಕ ಎಂಜಿನಿಯರರು, ಟ್ರಾಫಿಕ್ ಪೊಲೀಸ್ ಹಾಗೂ ಇತರೆ ಸಂಬಂಧಿತ ಅಧಿಕಾರಿಗಳು ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+