ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ
Bengaluru: ಬೆಂಗಳೂರು ಉತ್ತರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ಗೆ ಸಂಬಂಧಿಸಿದಂತೆ ಮಹತ್ವದ ಚರ್ಚೆ ಮಾಡಲಾಗಿದೆ. ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ವಿಷಯ ಚರ್ಚೆ ಮಾಡಲಾಗಿದೆ.
ಬೆಂಗಳೂರು ಉತ್ತರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ಟಿ.ಡಿ.ಆರ್. (Transferable Development Rights) ಹಾಗೂ ವಿವಿಧ ಕಾಮಗಾರಿಗಳ ಪ್ರಗತಿ ಕುರಿತು ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್ 24ರ ಮಂಗಳವಾರ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಸಮಗ್ರ ಪರಿಶೀಲನಾ ಸಭೆ ನಡೆಯಿತು.

ಸಭೆಯಲ್ಲಿ 'ಸುರಕ್ಷೆ-75' ಯೋಜನೆಯಡಿ ಕೈಗೊಂಡಿರುವ 16 ವೃತ್ತಗಳ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಲಾಯಿತು. ಮೆಟ್ರೋ ಕಾಮಗಾರಿ, ಅಂಡರ್ಪಾಸ್ ಮತ್ತು ಫ್ಲೈಓವರ್ಗಳ ಕಾರಣದಿಂದ ಬಾಕಿ ಉಳಿದ ವೃತ್ತಗಳನ್ನು ಹೊರತುಪಡಿಸಿ, ಉಳಿದ 9 ವೃತ್ತಗಳ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಆಯುಕ್ತರು ಸೂಚಿಸಿದ್ದಾರೆ.
ಆಯುಕ್ತರು ನೀಡಿದ ಪ್ರಮುಖ ಸೂಚನೆಗಳು
ಮಳೆಗಾಲಕ್ಕೂ ಮೊದಲು ನೀರು ನಿಲ್ಲುವ ಸ್ಥಳಗಳನ್ನು ಗುರುತಿಸಿ ಸಮಸ್ಯೆಯನ್ನು ಸಂಪೂರ್ಣವಾಗಿ ನಿವಾರಣೆ ಮಾಡಬೇಕು
ಪ್ರಮುಖ ಜಂಕ್ಷನ್ಗಳಲ್ಲಿ ಸಂಚಾರ ಸುಗಮವಾಗುವಂತೆ ತಕ್ಷಣ ಕ್ರಮ ಕೈಗೊಳ್ಳಬೇಕು
ಆಯ್ದ ಸ್ಥಳಗಳಲ್ಲಿ ಹೊಸ ಮಾದರಿಯ ಪಾದಚಾರಿ ಮಾರ್ಗ ವಿನ್ಯಾಸಗಳನ್ನು ಪ್ರಯೋಗಾತ್ಮಕವಾಗಿ ಅಳವಡಿಸಬೇಕು
ಪ್ರಯೋಗಾತ್ಮಕ ವಿನ್ಯಾಸಗಳು ಯಶಸ್ವಿಯಾದಲ್ಲಿ ಇತರೆ ಪ್ರದೇಶಗಳಲ್ಲಿಯೂ ಜಾರಿಗೆ ತರಬೇಕು
ಮಳೆಗಾಲದಲ್ಲಿ ನೀರು ನಿಲ್ಲದಂತೆ ಹಾಗೂ ಅನಾಹುತಗಳಿಗೆ ಅವಕಾಶವಿಲ್ಲದಂತೆ ಕಾಲಮಿತಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು
ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಸಕಾಲಿಕ ಕ್ರಮಗಳನ್ನು ಕೈಗೊಳ್ಳಬೇಕು.
ರಸ್ತೆ ಅಗಲೀಕರಣ ಹಾಗೂ ಟಿಡಿಆರ್ ಕುರಿತು ಚರ್ಚೆ
ಸಭೆಯಲ್ಲಿ ರಸ್ತೆ ಅಗಲೀಕರಣ ಹಾಗೂ ಟಿ.ಡಿ.ಆರ್. ಕುರಿತು ಚರ್ಚೆ ನಡೆಯಿತು. ಈಗಾಗಲೇ ಕಾಮಗಾರಿಗಳು ಪೂರ್ಣಗೊಂಡಿದ್ದರೂ ಟಿ.ಡಿ.ಆರ್. ಪೂರೈಕೆಯಲ್ಲಿ ವಿಳಂಬವಾಗಿರುವುದನ್ನು ಗಮನಿಸಿದ ಆಯುಕ್ತರು, ತ್ವರಿತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ವೇಳೆ ಕಾನೂನಿನ ಎಲ್ಲ ತೊಡಕುಗಳನ್ನು ನಿವಾರಿಸಿಕೊಂಡು, ಟಿ.ಡಿ.ಆರ್.ಗಳನ್ನು ಶೀಘ್ರದಲ್ಲಿ ಪೂರೈಸಲು ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಸಭೆಯಲ್ಲಿ ಅಪರ ಆಯುಕ್ತರು (ಅಭಿವೃದ್ಧಿ)ಲತಾ, ಜಂಟಿ ಆಯುಕ್ತರಾದ ಮೊಹಮ್ಮದ್ ನಯೀಮ್ ಮೊಮಿನ್ ಮತ್ತು ಪಲ್ಲವಿ, ಮುಖ್ಯ ಎಂಜಿನಿಯರರಾದ ರಾಘವೇಂದ್ರ ಪ್ರಸಾದ್ ಮತ್ತು ಯಮುನಾ, ಅಧೀಕ್ಷಕ ಎಂಜಿನಿಯರರಾದ ಪ್ರಕಾಶ್ ಮತ್ತು ಕೃಷ್ಣಕುಮಾರ್, B-SMILE ಅಧಿಕಾರಿಗಳು, ಸಮಾಲೋಚಕರು, ಕಾರ್ಯಪಾಲಕ ಎಂಜಿನಿಯರರು, ಟ್ರಾಫಿಕ್ ಪೊಲೀಸ್ ಹಾಗೂ ಇತರೆ ಸಂಬಂಧಿತ ಅಧಿಕಾರಿಗಳು ಉಪಸ್ಥಿತರಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರುಗೆ ಆರ್ ಅಶೋಕ್ ತೀವ್ರ ಟೀಕೆ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ -
ಬೆಂಗಳೂರು ನಾಗರಿಕರೇ ಗಮನಿಸಿ; ಪರಿಷ್ಕೃತ ಕರಡು ಮತದಾರರ ಪಟ್ಟಿ- ಅಹವಾಲು, ಆಕ್ಷೇಪಣೆ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ










Click it and Unblock the Notifications