ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತರ ಫೋನ್ ಇನ್: ದೂರುಗಳ ಸುರಿಮಳೆ!
ಬೆಂಗಳೂರಿನ ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಫೋನ್ ಇನ್ ಕಾರ್ಯಕ್ರಮ ನಡೆದಿದ್ದು, ಸಾರ್ವಜನಿಕರಿಂದ ದೂರುಗಳ ಸುರಿಮಳೆ ಬಂದಿದೆ. ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರು ಶುಕ್ರವಾರ ಬೆಳಿಗ್ಗೆ 7 ಗಂಟೆಯಿಂದ ಅಮೃತಹಳ್ಳಿ ಮುಖ್ಯ ರಸ್ತೆಯ ಬ್ಯಾಟರಾಯನಪುರದಲ್ಲಿರುವ ಬೆಂಗಳೂರು ಉತ್ತರ ನಗರ ಪಾಲಿಕೆಯ ನಿಯಂತ್ರಣ ಕೊಠಡಿಯಲ್ಲಿ ಫೋನ್ ಇನ್ ಕಾರ್ಯಕ್ರಮ ನಡೆಸಿದರು.
ಆಕ್ರಮಣಕಾರಿ ಬೀದಿ ನಾಯಿಗಳ ಸೆರೆ: ಫೋನ್ ಇನ್ ಕಾರ್ಯಕ್ರಮದಲ್ಲಿ ಶ್ರೀನಿವಾಸ್ ಎಂಬುವವರು ಬೀದಿ ನಾಯಿಗಳ ಆಕ್ರಮಣಕಾರಿ ನಡವಳಿಕೆಯ ಬಗ್ಗೆ ದೂರು ನೀಡಿದ್ದು, ಆಯುಕ್ತರ ನಿರ್ದೇಶನದ ಮೇರೆಗೆ ಸುಗ್ಗಪ್ಪ ಲೇಔಟ್ ನಲ್ಲಿ ಈಗಾಗಲೇ ಎರಡು ಬೀದಿ ನಾಯಿಗಳನ್ನು ಸೆರೆ ಹಿಡಿದಿದ್ದು, ಅವುಗಳನ್ನು ನಡವಳಿಕೆಯ ವೀಕ್ಷಣೆಗೆ ಒಳಪಡಿಸಲಾಗಿದೆ.

ರಸ್ತೆ ಗುಂಡಿಗಳನ್ನು ಮುಚ್ಚಲು ಸೂಚನೆ: ಫೋನ್ ಇನ್ ಕಾರ್ಯಕ್ರಮದಲ್ಲಿ ಬಹುಪಾಲು ದೂರುಗಳು ರಸ್ತೆ ಗುಂಡಿಗಳಿಗೆ ಸಂಬಂಧಿಸಿದ್ದಾಗಿದ್ದು, ಬೆಂಗಳೂರು ಉತ್ತರ ನಗರ ಪಾಲಿಕೆಯ ವ್ಯಾಪ್ತಿಯ ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚಲು ಹಾಗೂ ರಸ್ತೆ ದುರಸ್ತಿಯ ಅಗತ್ಯವಿರುವ ಸ್ಥಳಗಳಲ್ಲಿ ದುರಸ್ತಿ ಕಾರ್ಯಗಳನ್ನು ಕೈಗೆತ್ತಿಕೊಂಡು, ನಾಗರಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಆಯುಕ್ತರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವ್ಯವಸ್ಥಿತ ತ್ಯಾಜ್ಯ ನಿರ್ವಹಣೆಗೆ ಸೂಚನೆ: ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಅಸಮರ್ಪಕ ತ್ಯಾಜ್ಯ ನಿರ್ವಹಣೆಯಾಗುತ್ತಿರುವುದರ ಕುರಿತು ಕಾರ್ಯಕ್ರಮದ ವೇಳೆ ದೂರುಗಳು ಬಂದಿದ್ದು, ಆಯುಕ್ತರು ಸಂಬಂಧಪಟ್ಟ ಅಧಿಕಾರಿಗಳಿಗೆ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸಿ, ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸಮರ್ಪಕ ತ್ಯಾಜ್ಯ ನಿರ್ವಹಣೆ ಕಾರ್ಯವನ್ನು ನಡೆಸುವಂತೆ ಸೂಚಿಸಿದರು.
ಬೀದಿ ದೀಪಗಳ ಸೂಕ್ತ ನಿರ್ವಹಣೆ: ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬೀದಿ ದೀಪಗಳ ನಿರ್ವಹಣೆಯಲ್ಲಿ ಸಮಸ್ಯೆಗಳು ಎದುರಾಗಿದ್ದು, ಸೂಕ್ತ ರೀತಿಯಲ್ಲಿ ಬೀದಿ ದೀಪಗಳನ್ನು ನಿರ್ವಹಿಸುವಂತೆ ಹಾಗೂ ದುರಸ್ತಿಯ ಅಗತ್ಯವಿದ್ದಲ್ಲಿ ಕಾರ್ಯವನ್ನು ಕೈಗೆತ್ತಿಕೊಂಡು ತ್ವರಿತವಾಗಿ ಸಮಸ್ಯೆ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಈ ದಿನದ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ 41 ಕರೆಗಳನ್ನು ಸ್ವೀಕರಿಸಿದ್ದು ಒಟ್ಟಾರೆಯಾಗಿ 64 ಅಹವಾಲುಗಳನ್ನು ಸ್ವೀಕರಿಸಲಾಗಿದೆ. ಸದರಿ ಅಹವಾಲುಗಳನ್ನು ಸಹಾಯ ಪೋರ್ಟಲ್ ನಲ್ಲಿ ದಾಖಲಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ರವಾನಿಸಿ, ಸೂಕ್ತ ಕ್ರಮ ವಹಿಸಲು ಸೂಚಿಸಲಾಗಿದೆ.
ಮುಂದುವರೆದಂತೆ, ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಲು ಸಾರ್ವಜನಿಕರಿಗೆ ಅನುವಾಗುವಂತೆ ಹಾಗೂ ನಗರ ಪಾಲಿಕೆಯ ಮಟ್ಟದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಚಟುವಟಿಕೆಗಳನ್ನು ನಿಯಮಿತವಾಗಿ ಪರಿಶೀಲನೆ ನಡೆಸುವ ಸಲುವಾಗಿ ಪ್ರತಿ ಶುಕ್ರವಾರ ಆಯುಕ್ತರು ಫೋನ್ ಇನ್ ಕಾರ್ಯಕ್ರಮ ಮುಂದುವರಿಸಲಿದ್ದು, ಸಾರ್ವಜನಿಕರ ಅಹವಾಲುಗಳ ಸಂಬಂಧ ಪರಿಶೀಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಿದ್ದಾರೆ ಎಂದು ಉತ್ತರ ನಗರ ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
-
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru Second Airport: 5 ತಿಂಗಳಲ್ಲಿ ಬೆಂಗಳೂರು 2ನೇ ವಿಮಾನ ನಿಲ್ದಾಣ ಸ್ಥಳ ಫೈನಲ್: 3 ತಾಣಗಳಿಗೆ ಕಾರ್ಯಸಾಧ್ಯತಾ ವರದಿ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD











Click it and Unblock the Notifications