ಬೆಂಗಳೂರಿನ ಕಚೇರಿಗಳಿಗೂ ನೀರಿನ ಬಿಕ್ಕಟ್ಟು: ವರ್ಕ್ ಫ್ರಂ ಹೋಂಗೆ ನೌಕರರ ಬೇಡಿಕೆ
ಬೆಂಗಳೂರು ಮಾರ್ಚ್ 12: ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ತೀವ್ರ ನೀರಿನ ಸಮಸ್ಯೆಗೆ ತಕ್ಷಣದ ಪರಿಹರ ಕ್ರಮವಾಗಿ ಐಟಿ ಕಂಪನಿಗಳು ಮನೆಯಿಂದ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಉದ್ಯೋಗಿಗಳು ಒತ್ತಾಯಿಸುತ್ತಿದ್ದಾರೆ. ಇದು ಐಟಿ ಸಂಸ್ಥೆಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಹೌದು... ರಿವೋಟ್ ಆಗಿ ಕೆಲಸ ಮಾಡಲು ಅವಕಾಶ ಇರುವ ಐಟಿ ಉದ್ಯೋಗಿಗಳು ಸ್ವಂತ ಊರುಗಳಲ್ಲಿ, ಮನೆಯಿಂದ ಕೆಲಸ ಮಾಡುವುದರಿಂದ ವಾಣಿಜ್ಯ ಬಳಕೆ ನೀರಿನ ಬೇಡಿಕೆ ಕಡಿಮೆಯಾಗಿ ತಕ್ಕಮಟ್ಟಿಗೆ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸಬಹುದು. ಈಗಾಗಲೇ ಕಚೇರಿ, ಅಪಾರ್ಟ್ಮೆಂಟ್, ಮೆನಗಳಲ್ಲಿನ ನೂರಾರು ಬೋರ್ವೆಲ್ಗಳು ಬತ್ತಿ ಹೋಗಿವೆ. ಹೀಗಾಗಿ, ಬೇಸಿಗೆ ಆರಂಭದಲ್ಲೇ ಕಾವೇರಿ ನೀರು ಮತ್ತು ಟ್ಯಾಂಕರ್ ನೀರಿನ ಮೇಲೆ ಅವಲಂಬನೆ ಹೆಚ್ಚಾಗಿದೆ. ಮತ್ತೊಂದೆಡೆ ಸಮರ್ಪಕವಾಗಿ ಕಾವೇರಿ ನೀರಿನ ಪೂರೈಕೆಯಾಗದೆ ನೀರಿನ ಕೊರತೆಯ ಬಿಸಿ ಎಲ್ಲ ಕಚೇರಿ, ಅಪಾರ್ಟ್ಮೆಂಟ್ಗಳನ್ನು ಬಾಧಿಸುತ್ತಿದೆ.

ಹೀಗಿರುವಾಗ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡಿದರೆ ನೀರಿನ ಸಮಸ್ಯೆ ಸುಧಾರಿಸುವವರೆಗೂ ಎಲ್ಲರಿಗೂ ಅನುಕೂಲವಾಗುವುದು ಎಂದು ಉದ್ಯೋಗಿಗಳು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುತ್ತಿದ್ದಾರೆ.
ಟ್ಯಾಂಕರ್ ನೀರಿನ ಬೆಲೆಯನ್ನು ಸರ್ಕಾರ ನಿಯಂತ್ರಿಸುತ್ತಿದ್ದರೂ, ಅತಿಯಾದ ಅವಲಂಬನೆ ಯಾವಾಗ ಕೈಕೊಡುತ್ತದೆಯೋ ಎಂಬ ಭೀತಿ ಕಾಡುತ್ತಿರುವ ಕಾರಣ ಐಟಿ ಕಂಪನಿಗಳು ಮನೆಯಿಂದ ಕೆಲಸ ಮಾಡುವ ಅವಕಾಶ ನೀಡಬೇಕು ಎಂಬ ಕೋರಿಕೆ ಐಟಿ ವಲಯದಿಂದ ಕೇಳಿ ಬಂದಿದೆ. ಹೊರ ರಾಜ್ಯಗಳ ಉದ್ಯೋಗಿಗಳಿಗೆ ಮಳೆಗಾಲ ಆರಂಭವಾಗುವವರೆಗೆ ಮನೆಯಿಂದ ಕೆಲಸ ಮಾಡುವ ಅವಕಾಶ ನೀಡಬಹುದು. ಸರ್ಕಾರವೇ ಈ ಕುರಿತು ಸೂಚನೆ ನೀಡಬಹುದು ಎಂದು ಜಾಲತಾಣದ ಎಕ್ಸ್ನಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

ನಗರದಲ್ಲಿ ನೀರಿನ ಸಮಸ್ಯೆ ತೀವ್ರವಾಗಿದ್ದು ಐಟಿ ಉದ್ಯೋಗಿಗಳಿಗೆ ನೀರಿನ ಸಮಸ್ಯೆ ನಿಯಂತ್ರಣಕ್ಕೆ ಬರುವವರೆಗೆ ಮನೆಯಿಂದ ಕೆಲಸ ಮಾಡಲು ಅವಕಾಶ ಮಾಡಿಕೊಡಬೇಕು. ಇದರಿಂದ ನಗರದ ಕಚೇರಿಗಳಲ್ಲಿನ ನೀರಿನ ಬೇಡಿಕೆ ಕಡಿಮೆಯಾಗುತ್ತದೆ' ಎಂದು ಪರಿಸರ, ನೀರಿನ ಸಂರಕ್ಷಣೆಯಲ್ಲಿ ತೊಡಗಿರುವ ಸಾಮಾಜಿಕ ಕಾರ್ಯಕರ್ತ ಸಂದೀಪ್ ಅನಿರುದ್ದನ್ ಅಭಿಪ್ರಾಯಪಟ್ಟಿದ್ದಾರೆ.
ಮನೆಯಿಂದ ಕೆಲಸ ಮಾಡಿದರೆ ಅನುಕೂಲ
ಕಚೇರಿಗಳಿಗೆ ಹೋಲಿಸಿದರೆ ಮನೆಯಲ್ಲಿನ ನೀರಿನ ಬಳಕೆ ಮಿತವಾಗಿರುತ್ತದೆ. ಆದರೆ ಮನೆಯಲ್ಲಿಯೂ ನೀರಿನ ಸಮಸ್ಯೆ ಇದ್ದರೆ ಏನು ಮಾಡುವುದು? ನಮ್ಮ ಅಪಾರ್ಟ್ಮೆಂಟ್ಗೆ ಕಳೆದ ಮೂರು ದಿನಗಳಿಂದ ಕಾವೇರಿ ನೀರು ಬಂದಿಲ್ಲ. ಇರುವ ಎರಡು ಬೋರ್ವೆಲ್ಗಳ ಪೂಕಿ ಒಂದರಲ್ಲಿ ನೀರು ಬರುತ್ತಿಲ್ಲ. ಹೀಗಾಗಿ ಮನೆಯಿಂದ ಕೆಲಸ ಮಾಡುವುದರಿಂದ ನೀರಿನ ಸಮಸ್ಯೆಗೆ ಪರಿಹಾರ ಸಿಗುತ್ತದದೆ ಎನಿಸುವುದಿಲ್ಲ. ಆದರೆ ಉದ್ಯೋಗಿಗಳು ನೀರಿನ ಸಮಸ್ಯೆ ಇಲ್ಲದ ಊರುಗಳಿಂದ ಕೆಲಸ ಮಾಡುವುದಾದರೆ ಅನುಕೂಲ ಆಗಬಹುದು' ಎಂದು ಸ್ಟಾರ್ಟ್ಅಪ್ ಕಂಪನಿ ನಡೆಸುತ್ತಿರುವ ಚಂದ್ರಕಾಂತ್ ಅಭಿಪ್ರಾಯಪಟ್ಟರು.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ವಿನೋದ್ ರಾಜ್ ಎಂಬುವವರು,' ಕಂಪನಿಗಳು ತಮ್ಮ ಉದ್ಯೋಗಿಗಳನ್ನು ವಾಪಸ್ ಕಚೇರಿಗೆ ಎಳೆದು ತರಲು ಒಂದು ವರ್ಷ ಬೇಕಾಯಿತು. ಆದರೆ ಬೆಂಗಳೂರಿನಲ್ಲಿ ನೀರಿನ ಸಮಸ್ಯೆಯಿಂದ ಮತ್ತೆ ಮನೆಯಿಂದ ಕೆಲಸಕ್ಕೆ ಅವಕಾಶ ಕಲ್ಪಿಸುವ ಪರಿಸ್ಥಿತಿ ಎದುರಾಗಿದೆ; ಎಂದು ಮಾರ್ಮಿಕವಾಗಿ ಬರೆದು ಪೋಸ್ಟ್ ಮಾಡಿದ್ದಾರೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ












Click it and Unblock the Notifications