ವಸತಿ ಪ್ರದೇಶ ವಾಣಿಜ್ಯೀಕರಣ, ಎಚ್ಎಎಲ್ ನಿವಾಸಿಗಳಿಂದ ಮತ್ತೆ ಪ್ರತಿಭಟನೆ
ವಾಣಿಜ್ಯೀಕರಣದಿಂದ ವಸತಿ ಪ್ರದೇಶಗಳ ಪರಿಸರ ಹಾಳಾಗುತ್ತಿರುವುದನ್ನು ವಿರೋಧಿಸಿ ಬೆಂಗಳೂರಿನ ಇಂದಿರಾನಗರದಲ್ಲಿರುವ ಎಚ್ಎಎಲ್ 2ನೇ ಹಂತದ ನಿವಾಸಿಗಳು ಮತ್ತೆ ಪ್ರತಿಭಟನೆ ನಡೆಸಲಿದ್ದಾರೆ. ಶನಿವಾರ ಬೆಳಿಗ್ಗೆ 8 ಗಂಟೆಗೆ ಪ್ರತಿಭಟನೆ ನಿಗದಿಯಾಗಿದೆ.
ಬೆಂಗಳೂರು, ಮಾರ್ಚ್ 18: ವಾಣಿಜ್ಯೀಕರಣದಿಂದ ವಸತಿ ಪ್ರದೇಶಗಳ ಪರಿಸರ ಹಾಳಾಗುತ್ತಿರುವುದನ್ನು ವಿರೋಧಿಸಿ ಬೆಂಗಳೂರಿನ ಇಂದಿರಾನಗರದಲ್ಲಿರುವ ಎಚ್ಎಎಲ್ 2ನೇ ಹಂತದ ನಿವಾಸಿಗಳು ಇದೀಗ ಮೂರನೇ ಬಾರಿಗೆ ಶನಿವಾರ ಪ್ರತಿಭಟನೆ ನಡೆಸಲಿದ್ದಾರೆ. ಶನಿವಾರ ಬೆಳಿಗ್ಗೆ 8 ಗಂಟೆಗೆ ಪ್ರತಿಭಟನೆ ನಿಗದಿಯಾಗಿದೆ.

ಒಂದು ಕಾಲದಲ್ಲಿ ವಸತಿ ಪ್ರದೇಶಗಳು ಹಸಿರು ಮತ್ತು ಪ್ರಶಾಂತವಾಗಿತ್ತು. ಆದರೆ ವಾಣಿಜ್ಯೀಕರಣ ಕಾಲಿಡುತ್ತಿದ್ದಂತೆ ಇಡೀ ಪ್ರದೇಶವೇ ಅಶಾಂತಿ ಮತ್ತು ಅಸುರಕ್ಷಿತ ವಲಯವಾಗಿ ಮಾರ್ಪಟ್ಟಿದೆ. ಪಾಲಿಕೆಯ ಅಸಮರ್ಪಕ ಕಸ ವಿಲೇವಾರಿ, ಚರಂಡಿ ವ್ಯವಸ್ಥೆಯ ಅಸಮರ್ಪಕ ನಿರ್ವಹಣೆಯೂ ಜನರ ನೆಮ್ಮದಿ ಹಾಳುಗೆಡವಿದೆ. ಹಳೇ ಕಾಲದ ಮೋರಿಗಳಿಂದ ನೀರು ರಸ್ತೆಗೆ ಹರಿಯುತ್ತಿರುತ್ತದೆ. ಶುಚಿತ್ವ ಎನ್ನುವುದೇ ಮರೆಯಾಗಿ ಹೋಗಿದೆ ಎಂದು ಹೇಳಿ ಮಾರ್ಚ್ 4ರಂದು ಮೊದಲ ಬಾರಿಗೆ ಇಲ್ಲಿನ ನಿವಾಸಿಗಳು ಪ್ರತಿಭಟನೆ ನಡೆಸಿದ್ದರು.
3rd weekend in a row, because the authorities are turning a blind eye to our woes. @citizenmatters @WeAreBangalore #FightForIndiranagar pic.twitter.com/kMUkQz9LOv
— I Change IndiraNagar (@icindngr) March 17, 2017
ಆದರೆ ಪ್ರತಿಭಟನೆ ನಡೆಸಿಯೂ ಸಮಸ್ಯೆ ಮಾತ್ರ ಬಗೆ ಹರಿದಿಲ್ಲ. ಹೀಗಾಗಿ ಕಳೆದ ಶನಿವಾರವೂ ಮತ್ತೆ ಪ್ರತಿಭಟನೆ ನಡೆಸಿದ್ದರು. ಎಷ್ಟೇ ಪ್ರತಿಭಟನೆ ನಡೆಸಿದರೂ ಬಿಬಿಎಂಪಿ ಮಾತ್ರ ತಲೆ ಕೆಡಿಸಿಕೊಳ್ಳುತ್ತಿಲ್ಲ. ಹೀಗಾಗಿ ಈ ಶನಿವಾರವೂ ಪ್ರತಿಭಟನೆ ನಡೆಸುತ್ತಿದ್ದಾರೆ.
ಇಂದಿರಾನಗರದ ಎರಡನೇ ಹಂತದ ನಾಗರೀಕರು ಮಾರ್ಚ್ 18 ರಂದು ಎಚ್ಎಎಲ್ ಎರಡನೇ ಹಂತದ 9ನೇ ಮುಖ್ಯರಸ್ತೆಯ 100 ಅಡಿ ರಸ್ತೆಯಲ್ಲಿ ಬೆಳಿಗ್ಗೆ 8 ಗಂಟೆಗೆ ಪ್ರತಿಭಟನೆ ನಡೆಸಲಿದ್ದಾರೆ. [ವಸತಿ ಪ್ರದೇಶಗಳ ವಾಣಿಜ್ಯೀಕರಣದ ವಿರುದ್ಧ ಇಂದಿರಾನಗರ ನಿವಾಸಿಗಳಿಂದ ಪ್ರತಿಭಟನೆ]
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications