ಬಿಬಿಎಂಪಿ ವ್ಯಾಪ್ತಿ ಹಳ್ಳಿಗಳು: ಕಾವೇರಿ ನೀರಿಗೆ ಅರ್ಜಿ ಸಲ್ಲಿಸಿ
ಬೆಂಗಳೂರು, ಮಾರ್ಚ್ 05: ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಗೊಂಡಿರುವ 110 ಹಳ್ಳಿಗಳಿಗೆ ಕಾವೇರಿ ನೀರು ಪೂರೈಸಲು ಜಲಮಂಡಳಿ ಸಿದ್ಧತೆ ನಡೆದಿದೆ. ಈ ಹಳ್ಳಿಗಳ ನಿವಾಸಿಗಳು ಮಂಡಳಿಯ ಎಂಜಿನಿಯರ್ ಗಳ ಕಚೇರಿಯಲ್ಲಿ ಅಥವಾ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ನೀರಿನ ಸಂಪರ್ಕ ಪಡೆಯಬಹುದಾಗಿದೆ.
ಅರ್ಜಿದಾರರು ಮನೆಯ ಮಾಲೀಕತ್ವದ ದಾಖಲೆಗಾಗಿ ಆಸ್ತಿ ತೆರಿಗೆ ಪಾವತಿಸಿದ ರಸೀದಿಯನ್ನು ನೀಡಬೇಕು, ಆಸ್ತಿಗೆ ಸಂಬಂಧಿಸಿದ ಬೇರೆ ದಾಖಲೆಯನ್ನೂ ಒದಗಿಸಬಹುದು ಎಂದು ಮುಖ್ಯ ಎಂಜಿನಿಯರ್ ಮಂಜುನಾಥ್ ತಿಳಿಸಿದ್ದಾರೆ. 110 ಹಳ್ಳಿಗಳ ಅನೇಕ ನಿವಾಸಿಗಳು ಈಗಾಗಲೇ ವಂತಿಗೆ ಮೊತ್ತವನ್ನು ಪಾವತಿಸಿದ್ದಾರೆ.
ಅವರು ಅರ್ಜಿಯ ಜೊತೆಗೆ ಪಾವತಿಯ ರಸೀದಿಯನ್ನು ಸಲ್ಲಿಸಿದರೆ ಸಾಕು. ಶುಲ್ಕ ಪಾವತಿಸಿ, ಅಗತ್ಯ ದಾಖಲೆಗಳನ್ನು ಒದಗಿಸಿದ ಬಳಿಕ ನೀರಿನ ಸಂಪರ್ಕ ಕಲ್ಪಿಸಲು ಒಂದು ವಾರ ಕಾಲಾವಕಾಶ ಬೇಕಾಗುತ್ತದೆ. ಅರ್ಜಿದಾರರ ಮನೆಗೆ ಜಲಮಂಡಳಿ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಬಳಿಕ ಅವರಿಗೆ ಕಂದಾಯ ನೋಂದಣಿ (ಆರ್.ಆರ್) ಸಂಖ್ಯೆ ನೀಡಿ, ನೀರಿನ ಮಾಪಕವನ್ನು ಅಳವಡಿಸಲಾಗುತ್ತದೆ ಎಂದು ಅವರು ವಿವರಿಸಿದರು.

ಫಲಾನುಭವಿಯ ವಂತಿಗೆ ಮೊತ್ತವನ್ನು (ಬಿಸಿಸಿ) ಡಿಮಾಂಡ್ ಡ್ರಾಫ್ಟ್ (ಡಿ.ಡಿ) ಮೂಲಕವೇ ಸಲ್ಲಿಸಬೇಕು. ಕಟ್ಟಡದ ವಿಸ್ತೀರ್ಣವನ್ನು ಆಧರಿಸಿ ಈ ಮೊತ್ತವನ್ನು ನಿರ್ಧರಿಸಲಾಗುತ್ತದೆ. ಅಪಾರ್ಟ್ ಮೆಂಟ್ ಸಮುಚ್ಚಯಗಳಿಗೆ ಹಾಗೂ ವಾಣಿಜ್ಯ ಸಂಪರ್ಕಕ್ಕೆ ಪ್ರತ್ಯೇಕ ದರವನ್ನು ನಿಗದಿಪಡಿಸಲಾಗಿದೆ. 1,200 ಚದರ ಅಡಿ ವಿಸ್ತೀರ್ಣದ ನಿವೇಶನದಲ್ಲಿ ನಿರ್ಮಿಸಿರುವ ಡ್ಯೂಪ್ಲೆಕ್ಸ್ ಮನೆಗೆ ಸಂಪರ್ಕ ಪಡೆಯಲು ಮಾಲೀಕರು 11 ಸಾವಿರ ರೂ ವಂತಿಗೆ ಮೊತ್ತವಾಗಿ ಪಾವತಿಸಬೇಕಾಗುತ್ತದೆ ಎಂದರು.
ನೀರಿನ ಸಂಪರ್ಕ ಪಡೆಯುವ ಹಳ್ಳಿಗಳು: ವಲ್ಲಭನಗರ, ಸೊನ್ನೇನಹಳ್ಳಿ, ಹೊರಮಾವು, ಸಿದ್ದಾಪುರ, ದಾಸರಹಳ್ಳಿ, ಚಳ್ಳಕೆರೆ, ಕೂಡ್ಲು, ನಾಗನಾಥಪುರ, ಪರಪ್ಪನ ಅಗ್ರಹಾರ, ಗಣಕಲ್ಲು, ಉತ್ತರಹಳ್ಳಿ (ಆಯ್ದ ಪ್ರದೇಶಗಳು), ತೂಬರಹಳ್ಳಿ, ಬೇಗೂರು, ಅರಳೂರು ಪ್ರದೇಶಗಳಾಗಿವೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications