ಅತಿ ಹೆಚ್ಚು ಸಂಬಳ ನೀಡುವ ನಗರ ಬೆಂಗಳೂರು: ಸಮೀಕ್ಷೆ
ಬೆಂಗಳೂರು, ಏಪ್ರಿಲ್ 17: ಬೆಂಗಳೂರಿಗೆ ಯಾಕೆ ಅಷ್ಟೊಂದು ಜನರು ವಲಸೆ ಬರುತ್ತಿದ್ದಾರೆ ಎನ್ನುವ ಕುರಿತು ಸಾಕಷ್ಟು ಸಮೀಕ್ಷೆಗಳು ನಡೆಯುತ್ತಲೇ ಇದೆ. ವಿದ್ಯಾಭ್ಯಾಸ, ಕೆಲಸಕ್ಕಾಗಿ ಬರುವವರ ಸಂಖ್ಯೆ ಹೆಚ್ಚು ಆದರೆ ದೇಶದಲ್ಲೇ ಬೆಂಗಳೂರು ಅತಿ ಹೆಚ್ಚು ಸಂಬಲ ನೀಡುವ ನಗರ ಎನ್ನುವ ಮಾಹಿತಿ ಲಭ್ಯವಾಗಿದೆ.
ರಾಂಡ್ ಸ್ಟಾಡ್ ಇಂಡಿಯಾ ಎಂಬ ಸಂಶೋಧನಾ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ನೌಕರ ವರ್ಗಕ್ಕೆ ಬೆಂಗಳೂರು ನಮ್ಮ ದೇಶದಲ್ಲೇ ಅತಿ ಹೆಚ್ಚು ವೇತನ ಪಾವತಿಸುವ ನಗರ ಎಂಬ ಸಂಗತಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಕಂಪನಿಗಳು ಸರಾಸರಿ ಒಬ್ಬ ನೌಕರನಿಗೆ ವರ್ಷವೊಂದಕ್ಕೆ 10.8 ಲಕ್ಷ ರೂ. ವೇತನ ಪಾವತಿಸುತ್ತವೆ.
ಅಂದರೆ, ತಿಂಗಳಿಗೆ 90 ಸಾವಿರ ರೂ. ಸಂಬಳ ನೀಡುತ್ತವೆ. ಇದರಲ್ಲೂ ಅತಿ ಹೆಚ್ಚು ಸಂಬಳವಿರುವುದು ಫಾರ್ಮಾ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಸಂಸ್ಥೆಗಳಲ್ಲಿ ಎಂದೂ ಸಮೀಕ್ಷೆ ಹೇಳಿದೆ.

ಬೆಂಗಳೂರಿನ ನಂತರ ದೇಶದಲ್ಲಿ ಅತಿ ಹೆಚ್ಚು ಸಂಬಂ ನೀಡುವ ನಗರಗಳ ಪಟ್ಟಿಯಲ್ಲಿ ಕ್ರಮವಾಗಿ ಪುಣೆ, ದೆಹಲಿ, ಮುಂಬೈ, ಚೆನ್ನೈ, ಹೈದರಾಬಾದ್ ಹಾಗೂ ಕೊಲ್ಕತ್ತ ಇವೆ. ಇನ್ನು, ಬೆಂಗಳೂರಷ್ಟೇ ಅಲ್ಲ, ದೇಶಾದ್ಯಂತ ಫಾರ್ಮಾ ಹಾಗೂ ಹೆಲ್ತ್ ಕೇರ್ ಕಂಪನಿಗಳು ಸರಾಸರಿ ಒಬ್ಬ ನೌಕರನಿಗೆ ವರ್ಷಕ್ಕೆ 9.6ಲಕ್ಷ ರೂ. ಸಂಬಳ ನೀಡುವುದರೊಂದಿಗೆ ಅತಿ ಹೆಚ್ಚು ಸಂಬಳ ನೀಡುವ ಕಂಪನಿಗಳು ಎನ್ನಿಸಿಕೊಂಡಿವೆ.
ಪ್ರೊಫೆಷನಲ್ ಸೇವೆ ಒದಗಿಸುವ ಕಂಪನಿಗಳು ಎರಡನೇ ಅತಿ ಹೆಚ್ಚು ಸಂಬಳ ಪಾವತಿಸುತ್ತವೆ. ಅಲ್ಲಿ ವರ್ಷಕ್ಕೆ 9.4 ಲಕ್ಷ ರೂ. ಸಂಬಳವಿದೆ. ಮೂರನೇ ಸ್ಥಾನದಲ್ಲಿ ಎಫ್ ಎಂಸಿಜಿ ವರ್ಷಕ್ಕೆ 9.2 ಲಕ್ಷ ಸಂಬಳ ನೀಡುತ್ತಿದೆ. ವೈದ್ಯರು-18.4, ವಾಸ್ತುಶಿಲ್ಪ ತಜ್ಞರು 15.1, ಎಂಜಿನಿಯರ್ ಗಳು 14.8ರಂತೆ ಅತಿ ಹೆಚ್ಚು ಸಂಬಳವನ್ನು ಪಡೆಯುತ್ತಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications