ವೈಕುಂಠ ಏಕಾದಶಿ, ಮೋಕ್ಷಕ್ಕಾಗಿ ಪ್ರಾರ್ಥಿಸುವ ದಿನ: ದೇಗುಲಗಳ ವಿಶೇಷ
Recommended Video

ಬೆಂಗಳೂರು, ಡಿಸೆಂಬರ್ 18: ವೈಕುಂಠ ಏಕಾದಶಿ ಆಚರಣೆ ರಾಜ್ಯದೆಲ್ಲೆಡೆ ಆರಂಭವಾಗಿದೆ. ನಗರದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆಗಳು ನಡೆಯಲಿದ್ದು, ಭಕ್ತರಿಗೆ ವೈಕುಂಠ ದ್ವಾರ ಪ್ರವೇಶ ಮಾಡಿ ದೇವರ ದರುಶನ ಪಡೆಯುವ ಅವಕಾಶ ಲಭ್ಯವಾಗಲಿದೆ.
ವೈಕುಂಠ ಏಕಾದಶಿಯು ಪ್ರತಿ ವರ್ಷದ ಸಡಗರ, ಭಕ್ತರು ಎಲ್ಲೋ ಇರುವ ದೇವರನ್ನು ಹುಡುಕಿಕೊಂಡು ಬಂದು ನಮ್ಮೊಂದಿಗೇ ಇದ್ದಾನೆ ಎನ್ನುವ ಭಾವವನ್ನು ವ್ಯಕ್ತಪಡಿಸುತ್ತಾರೆ.ದೇಗುಲದ ವೈಕುಂಠ ದ್ವಾರದಲ್ಲಿ ನಿಂತು ಭಕ್ತರು ಮೋಕ್ಷಕ್ಕಾಗಿ ಪ್ರಾರ್ಥಿಸುವುದು. ಸ್ವಾಮಿಯ ಅಲಂಕಾರವನ್ನು ನೋಡುವುದೇ ಚಂದ.
ಇದರಲ್ಲಿ ಎರಡು ಪದಗಳು ಸೇರಿಕೊಂಡಿದೆ, ಒಂದು ವೈಕುಂಠ ಎಂದರೆ ವಿಷ್ಣುಲೋಕ. ವಿಷ್ಣುವಿಗೆ ವೈಕುಂಠ ಎಂದು ಹೆಸರು ಬರಲು ಕಾರಣ ಚಾಕ್ಷುಷ ಮನ್ವಂತರದಲ್ಲಿ ವಿಷ್ಣುವು ವಿಕುಂಠ ಎಂಬ ಸ್ತ್ರೀ ಯಲ್ಲಿ ಅವತರಿಸಿದನು.
ಇದರಿಂದ ನಾರಾಯಣನಿಗೆ ವೈಕುಂಠನೆಂಬ ಹೆಸರು ಬಂದಿದೆ ಎಂದು ಮಹಾಭಾರತದ ಶಾಂತಿಪರ್ವದಿಂದ ತಿಳಿದುಬರುತ್ತದೆ. ವಿಷ್ಣು ಸಹಸ್ರನಾಮದಲ್ಲೂ ವೈಕುಂಠ ಎಂಬ ಹೆಸರಿನ ಉಲ್ಲೇಖವಾಗಿದೆ.

ಮರಿ ತಿರುಪತಿಯಲ್ಲಿ ವೈಕುಂಠ ಏಕಾದಶಿ
ಶ್ರೀ ಶ್ರೀನಿವಾಸ ದೇವಸ್ಥಾನದ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ವೈಕುಂಠ ಏಕಾದಶಿ ಆಚರಣೆ ನಡೆಸಲಾಗುತ್ತಿದೆ. ಮರಿ ತಿರುಪತಿ ಖ್ಯಾತಿಯ ಮಹಾಲಕ್ಷ್ಮೀಪುರಂ ದೇವಾಲಯದ ಆವರಣದಲ್ಲಿ ಮುಜಾನೆಯಿಂದ ರಾತ್ರಿವರೆಗೂ ವಿಶೇಷ ಪೂಜೆ ನಡೆಯಲಿದೆ. ಭಕ್ತರಿಗೆ ವೈಕುಂಠ ದ್ವಾರ ಪ್ರವೇಶ ವ್ಯವಸ್ಥೆ ಮಾಡಲಾಗಿದೆ.

ವಸಂತನಗರದ ಶ್ರೀಲಕ್ಷ್ಮೀ ವೆಂಟರಮಣಸ್ವಾಮಿ ದೇವಸ್ಥಾನ
ವಸಂತನಗರದ ಶ್ರೀ ಲಕ್ಷ್ಮೀ ವೆಂಕಟರಮಣಸ್ಔಆಮಿ ದೇವಸ್ಥಾನದ ಅಭಿವೃದ್ಧಿ ಸಂಘವು ಧನುರ್ಮಾಸದ ಪೂಜೆ ಹಾಗೂ ಡಿ.18ರಂದು ವೈಕುಂಠ ಏಕಾದಶಿಯನ್ನು ಹಮ್ಮಿಕೊಂಡಿದೆ. ವೈಕುಂಠ ಏಕಾದಶಿ ಪ್ರಯುಕ್ತ ಸ್ವಾಮಿಗೆ ವಿಶೇಷ ಅಲಂಕಾರ, ಆರಾಧನೆ, ವೈಕುಂಠದ್ವಾರ ಪೂಜೆ, ಮಹಾ ಮಂಗಳಾರತಿ ನಡೆಯಲಿದೆ.

ಶ್ರೀ ಸ್ತಂಭದ ಲಕ್ಷ್ಮೀ ರಂಗನಾಥಸ್ವಾಮಿ, ಬೆಟ್ಟನಪಾಳ್ಯ ದೇವಾಲಯ
ಕೆಂಗೇರಿ ಹೋಬಳಿ ಬೆಟ್ಟನಪಾಳ್ಯ ಶ್ರೀ ಸ್ತಂಭದ ಲಕ್ಷ್ಮೀರಂಗನಾಥಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 2 ಗಂಟೆಗೆ ಸುಪ್ರಭಾತದೊಂದಿಗೆ ಕಾರ್ಯಕ್ರಮ ಆರಂಭವಾಗಿದೆ. ಸ್ವಾಮಿಗೆ ಪಂಚಾಮೃತಾಭಿಷೇಕ ಹಾಗೂ ವಿಶೇಷವಾಗಿ ಪುಷ್ಪಾಲಂಕಾರ ಮಾಡಲಾಗುತ್ತಿದೆ.

ವೆಂಕಟೇಶ್ವರಸ್ವಾಮಿ ದೇಗುಲ
ನಿಸರ್ಗ ಬಡಾವಣೆಯ ನಿರ್ಮಾಣ್ ದೇವಾಲಯಗಳ ವಿಶ್ವಸ್ಥ ಮಂಡಳಿಯು ಡಿ.18ರಂದು ಶ್ರೀ ಪ್ರಸನ್ನ ವರದ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಅಂಗವಾಗಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications