Bengaluru PG: ಬೆಂಗಳೂರಿನಲ್ಲಿ 8 ಪಿಜಿಗಳಿಗೆ ಬಿತ್ತು ಬೀಗ, 574 ಪೇಯಿಂಗ್ ಗೆಸ್ಟ್ ವಸತಿ ಗೃಹಗಳಿಗೆ ತಿಳುವಳಿಕೆ ಪತ್ರ ಜಾರಿ
Bengaluru PG: ಬೆಂಗಳೂರಿನಲ್ಲಿ ನಿಗದಿತ ಮಾರ್ಗಸೂಚಿಗಳನ್ನು ಪಿಜಿ ವಸತಿ ಗೃಹಗಳು ಪಾಲಿಸುತ್ತಿವೆಯೇ ಎಂಬ ಕುರಿತು ಪರಿಶೀಲನೆ ನಡೆಸಲಾಗಿತ್ತು. ಪರಿಶೀಲನೆ ಬಳಿಕ ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿನ 8 ಪಿಜಿಗಳಿಗೆ ಬೀಗ ಬೀಗ ಹಾಕಲಾಗಿದೆ. ಮತ್ತೊಂದೆಡೆ 574 ಪೇಯಿಂಗ್ ಗೆಸ್ಟ್ ವಸತಿಗೃಹಗಳಿಗೆ ತಿಳುವಳಿಕೆ ಪತ್ರಗಳನ್ನು ಜಾರಿ ಮಾಡಿರುವುದಾಗಿ ಆಯುಕ್ತರಾದ ರಾಜೇಂದ್ರ ಚೋಳನ್ ಅವರು ತಿಳಿಸಿದರು.
ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಜನವರಿ 2026ರ ತಿಂಗಳಿನಲ್ಲಿ ಶಾಂತಿನಗರ, ಸಿ.ವಿ.ರಾಮನ್ ನಗರ, ಗಾಂಧಿನಗರ, ಶಿವಾಜಿನಗರ, ಚಾಮರಾಜಪೇಟೆ ಹಾಗೂ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಹಾಲಿ ನಡೆಯುತ್ತಿರುವ ಎಲ್ಲಾ ಪೇಯಿಂಗ್ ಗೆಸ್ಟ್ ವಸತಿಗೃಹಗಳು ಅನುಸರಿಸಬೇಕಾದ ಅಥವಾ ಪಾಲನೆ ಮಾಡಬೇಕಾದ ಮಾರ್ಗಸೂಚಿಗಳ ಬಗ್ಗೆ ತಪಾಸಣೆ ನಡೆಸಲಾಗಿದೆ. ಬಳಿಕ ಒಟ್ಟು 574 ವಸತಿ ಗೃಹಗಳಿಗೆ ತಿಳುವಳಿಕೆ ಪತ್ರಗಳನ್ನು ಜಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

3,09,000 ರೂಪಾಯಿ ದಂಡ: ಇವುಗಳಲ್ಲಿ ಅಡುಗೆ ಕೋಣೆ ಶುಚಿತ್ವವನ್ನು ಅನುಸರಿಸದ ಕಾರಣ ಒಟ್ಟು 08 ಪೇಯಿಂಗ್ ಗೆಸ್ಟ್ ವಸತಿಗೃಹಗಳಿಗೆ ಬೀಗ ಮುದ್ರೆಯನ್ನು ಹಾಕಲಾಗಿದ್ದು, ಇತರೆ ನ್ಯೂನ್ಯತೆಗಳಿಗೆ ಒಟ್ಟು 3,09,000 ರೂಪಾಯಿ ಮೊತ್ತದ ದಂಡವನ್ನು ಜನವರಿ ತಿಂಗಳಲ್ಲಿ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಯಾವೆಲ್ಲ ನಿಯಮಗಳನ್ನು ಪಾಲಿಸಬೇಕು?: ಪೇಯಿಂಗ್ ಗೆಸ್ಟ್ ವಸತಿಗೃಹಗಳಲ್ಲಿ ಪಾಲನೆ ಮಾಡಬೇಕಾದ ಮಾರ್ಗಸೂಚಿಗಳಾದ ಶುದ್ಧ ಕುಡಿಯುವ ನೀರು, ಅಡುಗೆ ಕೋಣೆ ಶುಚಿತ್ವ, ಸುರಕ್ಷತೆ, ಉತ್ತಮ ಶೌಚಾಲಯ ವ್ಯವಸ್ಥೆ, ಅಗ್ನಿಶಾಮಕ ಸಾಧನಗಳು ಹಾಗೂ ಸಿ.ಸಿ.ಟಿ.ವಿ ಕ್ಯಾಮರಾ ಅಳವಡಿಕೆ ಮತ್ತು ಎಫ್ಎಸ್ಎಸ್ಎಐನ ಆಹಾರ ಸುರಕ್ಷತಾ ಪ್ರಮಾಣ ಪತ್ರ ಇತ್ಯಾದಿ ಮೂಲಭೂತ ಸೌಕರ್ಯಗಳನ್ನು ತಪ್ಪದೇ ಪಾಲಿಸುವಂತೆ ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ವಸತಿ ಗೃಹಗಳ ಮಾಲೀಕರುಗಳಿಗೆ ಈಗಾಗಲೇ ತಿಳುವಳಿಕೆ ಪತ್ರ ನೀಡಲಾಗಿದೆ
ಇನ್ಮುಂದೆ ಕೇಂದ್ರ ನಗರ ಪಾಲಿಕೆ ವತಿಯಿಂದ ಸದರಿ ವಸತಿ ಗೃಹಗಳಲ್ಲಿ ಮಾರ್ಗಸೂಚಿಗಳನ್ನು ಪಾಲಿಸಲಾಗುತ್ತಿದೆಯೇ ಎಂಬುದರ ಬಗ್ಗೆ ನಿರಂತರವಾಗಿ ತಪಾಸಣೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications