Bengaluru PG: ಬೆಂಗಳೂರಿನ ಪಿ.ಜಿಗಳಿಗೆ ಬೀಗ ಹಾಕುತ್ತಿರುವ ಜಿಬಿಎ: ಕಾರಣವೇನು, ಇಲ್ಲಿದೆ ಮಾಹಿತಿ
ಬೆಂಗಳೂರು: ಬೆಂಗಳೂರಿನಲ್ಲಿ ನಿಯಮ ಉಲ್ಲಂಘನೆ ಮಾಡುತ್ತಿರುವ ಪಿ.ಜಿಗಳಿಗೆ ಬೀಗ ಹಾಕುವುದನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಮುಂದುವರಿಸಿದೆ. ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 4 ಪಿ.ಜಿ. ಗಳಿಗೆ ಬೀಗ ಹಾಕಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರ ಸೂಚನೆಯಂತೆ ನಗರ ಪಾಲಿಕೆಯ ಹಲವು ವಾರ್ಡ್ಗಳಲ್ಲಿ ಸಾರ್ವಜನಿಕ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಪಿ.ಜಿ.ಗಳನ್ನು ಪರಿಶೀಲಿಸಿ, ಮಾರ್ಗಸೂಚಿಗಳನ್ನು ಪಾಲಿಸದವುಗಳನ್ನು ಗುರುತಿಸಿ, ಬೀಗಮುದ್ರೆ ಪ್ರಕ್ರಿಯೆ ಮುಂದುವರಿಸಲಾಗಿದೆ. ಈ ಸಂಬಂಧ ವಲಯ 2ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 12, ಶೆಟ್ಟಿಹಳ್ಳಿ ವ್ಯಾಪ್ತಿಯಲ್ಲಿನ 2 ಪುರುಷರ ಪಿ.ಜಿ.ಗಳಾದ ಸನ್ರೈಸ್ ಬಾಯ್ಸ್ ಪಿಜಿ ಮತ್ತು ಬಾಲಾಜಿ ಎನ್.ಎಸ್ ಲಕ್ಸುರಿ ಪಿ.ಜಿ ಗಳ ನಿವಾಸಿಗಳನ್ನು ಮಾರ್ಗಸೂಚಿಗಳನ್ನು ಅನುಸರಿಸದೇ ಇರುವ ಕಾರಣಕ್ಕೆ ತೆರವುಗೊಳಿಸಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಬೀಗಮುದ್ರೆ ಹಾಕಲಾಗಿದೆ ಎಂದು ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪರಿಶೀಲನೆಯ ಮುಂದುವರಿದ ಭಾಗವಾಗಿ ಇದೇ ಭಾಗದ ಶಾರದಾ ಲೇಡಿಸ್ ಪಿ.ಜಿಯ ಅಡುಗೆ ಮನೆಯಲ್ಲಿ ಶುಚಿತ್ವ ಕಾಪಾಡಿಕೊಳ್ಳದೇ ಇರುವ ಕಾರಣಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಅದಕ್ಕೂ ಬೀಗ ಹಾಕಲಾಗಿದೆ. ಮುಂದುವರಿದು ವಲಯ 1ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 3, ಅಟ್ಟೂರು, ಯಲಹಂಕ 4 ನೇ ಹಂತದಲ್ಲಿರುವ ಅಂಜನಿ ಲೇಡಿಸ್ ಪಿಜಿ ಯಲ್ಲಿ ಕೂಡ ಅಡುಗೆ ಮನೆಯ ಶುಚಿತ್ವ ಕಾಪಾಡಿಕೊಳ್ಳದ ಕಾರಣಕ್ಕೆ ಅದಕ್ಕೂ ಸಹ ಬೀಗ ಹಾಕಲಾಗಿದೆ. ಒಟ್ಟಾರೆಯಾಗಿ ನಗರ ಪಾಲಿಕೆಯ ವಲಯ 2 ವ್ಯಾಪ್ತಿಯಲ್ಲಿ 3 ಪಿ.ಜಿ. ಗಳಿಗೆ ಹಾಗೂ ವಲಯ 1ರ ವ್ಯಾಪ್ತಿಯಲ್ಲಿ 1 ಪಿಜಿಗೆ ಸೇರಿದಂತೆ ಒಟ್ಟಾರೆಯಾಗಿ 4 ಪಿ.ಜಿ. ಗಳಿಗೆ ಬೀಗಮುದ್ರೆ ಹಾಕಲಾಗಿದೆ. ಇನ್ಮುಂದೆ ಮಾರ್ಗಸೂಚನೆಗಳನ್ನು ಅನುಸರಿಸದೇ ಇರುವ ಹಾಗೂ ಅನಧಿಕೃತವಾಗಿ ನಡೆಸುತ್ತಿರುವ ಪಿ.ಜಿ.ಗಳ ಮೇಲೆ ಇನ್ನಷ್ಟು ತೀವ್ರ ಕ್ರಮವಹಿಸಲಾಗುವುದು ಎಂದು ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.
ಒಣಗಿರುವ ಮರಗಳು, ರೆಂಬೆ ಕೊಂಬೆಗಳ ಮಾಹಿತಿ
ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿಯನ್ನು ನೀಡುವ ಬಗ್ಗೆ ಪಾಲಿಕೆಯ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ರಸ್ತೆಬದಿ, ಸರ್ಕಾರಿ ಜಾಗಗಳಲ್ಲಿ ಒಣಗಿರುವ, ಆಪಾಯ ಸ್ಥಿತಿಯಲ್ಲಿರುವ ಮರಗಳು ಹಾಗೂ ರೆಂಬೆ ಕೊಂಬೆಗಳನ್ನು ಅರಣ್ಯ ವಿಭಾಗದ ವತಿಯಿಂದ ಈಗಾಗಲೇ ತೆರವುಗೊಳಿಸಲಾಗುತ್ತಿದೆ. ಸಾರ್ವಜನಿಕರು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಒಣಗಿರುವ /ಆಪಾಯ ಸ್ಥಿತಿಯಲ್ಲಿರುವ ಮರಗಳು ಹಾಗೂ ರೆಂಬೆಗಳು ಕಂಡುಬಂದಲ್ಲಿ 1533 ಅಥವಾ 7760933913 /9164597895 ಸಹಾಯವಾಣಿಗೆ ಅಥವಾ ಈ ಅಧಿಕಾರಿಗಳಿಗೆ ದೂರವಾಣಿ ಮೂಲಕ (ವಾಟ್ಸ್ಆ್ಯಪ್ ಮುಖಾಂತರ ಜಿಪಿಎಸ್ ಫೋಟೋ ಲಗತ್ತಿಸಿ ಕಳುಹಿಸಬಹುದು) ವಿಳಾಸದೊಂದಿಗೆ ಮಾಹಿತಿ ನೀಡಬಹುದು ಎಂದು ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿಧಾನಸಭಾ ಕ್ಷೇತ್ರವಾರು ಮಾಹಿತಿ
ವಲಯ - 1
ಶಾಂತಿನಗರ / ಸಿ.ವಿ ರಾಮನ್ ನಗರ
ವಿನಯ್
ಉಪ ವಲಯ ಅರಣ್ಯಾಧಿಕಾರಿ
7760933913
ವಲಯ - 2
ಶಿವಾಜಿನಗರ / ಚಾಮರಾಜಪೇಟೆ / ಚಿಕ್ಕಪೇಟೆ
ಶಿವಣ್ಣ ಉಪ ವಲಯ ಅರಣ್ಯಾಧಿಕಾರಿ 9164597895
ವಲಯ - 2
ಗಾಂಧಿನಗರ
ನರೇಂದ್ರ ಬಾಬು
ವಲಯ ಅರಣ್ಯಾಧಿಕಾರಿ
9480685399
-
ಬೆಂಗಳೂರಿನ ರಸ್ತೆಗಳಿಗೆ ಹೊಸ ಮಾದರಿಯ ಡಾಂಬರೀಕರಣ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಪ್ಡೇಟ್ಸ್ -
Bengaluru: ಬೆಂಗಳೂರು ಸ್ವಚ್ಛ ಸರ್ವೇಕ್ಷಣಾ ಅಭಿಯಾನ: ನಟ ಅನಿರುದ್ಧ್ ಜಟ್ಕರ್ ಸೇರಿ 6 ರಾಯಭಾರಿಗಳ ಆಯ್ಕೆ -
ಜಿಬಿಎ ಚುನಾವಣೆ: ಕರಡು ಮತದಾರರ ಪಟ್ಟಿ ಬಗ್ಗೆರಾಜಕೀಯ ಪ್ರತಿನಿಧಿಗಳ ಆಕ್ಷೇಪಣೆ, ಆಯುಕ್ತರಿಗೆ ಮಹತ್ವದ ಸಲಹೆ -
Summer Health Tips: ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಬೇಕಾದ ಸಲಹೆಗಳು ಇಲ್ಲಿವೆ, ಪಾಲಿಸಿ -
ಬೇಸಿಗೆಯ ಸಂಜೀವಿನಿ ಈ ನಿಂಬೆ ಹಣ್ಣು: ಆರೋಗ್ಯದ ದೃಷ್ಟಿಯಿಂದ ಪ್ರಯೋಜನಗಳು ಅಪಾರ -
ಸರ್ಕಾರಿ ಆಸ್ಪತ್ರೆಗಳಲ್ಲಿ ನಾಳೆ OPD ಸೇವೆ ಬಂದ್? ವೈದ್ಯರ ರಾಜ್ಯವ್ಯಾಪಿ ಪ್ರತಿಭಟನೆ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications