White Tapping Work: ಬೆಂಗಳೂರಿನ ಈ ರಸ್ತೆಯಲ್ಲಿ ಆಗಸ್ಟ್ 30ರವರೆಗೂ ವಾಹನ ಸಂಚಾರ ನಿರ್ಬಂಧ: ಪಾರ್ಯಯ ಮಾರ್ಗಗಳ ವಿವರ
White Tapping Work: ಸಾಮಾನ್ಯವಾಗಿ ಕಾಮಗಾರಿ ನಡೆಯುವಂತಹ ಮಾರ್ಗದ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗುತ್ತದೆ. ಹಾಗೆಯೇ ಇದೀಗ ವೈಟ್ ಟಾಪಿಂಗ್ ಕಾಮಗಾರಿ ಕೈಗೊಂಡ ಹಿನ್ನೆಲೆ ಬೆಂಗಳೂರಿನ ಈ ರಸ್ತೆಗಳಲ್ಲಿ ಆಗಸ್ಟ್ 30ರವರೆಗೂ ವಾಹನ ಸಂಚಾರವನ್ನ ನಿರ್ಬಂಧಿಸಲಾಗಿದೆ. ಹಾಗಾದ್ರೆ, ಎಲ್ಲೆಲ್ಲಿ ಹಾಗೂ ಪರ್ಯಾಯ ಮಾರ್ಗಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬೆಂಗಳೂರು ಅಂದ್ರೆ ಮೊದಲಿಗೆ ಜನರ ಬಾಯಲ್ಲಿ ಕೇಳಿಬರುವ ಶಬ್ಧವೇ ಟ್ರಾಫಿಕ್ ನಗರ ಅಂತಾ. ನಗರದಲ್ಲಿ ಪ್ರತಿನಿತ್ಯ ವಾಹನ ಸವಾರರು ಟ್ರಾಫಿಕ್ನಿಂದ ಪರದಾಡುತ್ತಲಿರುತ್ತಾರೆ. ಅದರಲ್ಲೂ ಗುಂಡಿ ಬಿದ್ದ ರಸ್ತೆಗಳ ಭಾಗಗಳಂತೂ ಟ್ರಾಫಿಕ್ ನಡುವೆಯೂ ವಾಹನ ಚಲಾಯಿಸುವುದೇ ಸವಾಲಾಗಿಬಿಟ್ಟಿದೆ. ಈ ನಡುವೆಯೇ ಕೆಲವೆಡೆ ರಸ್ತೆ ನಿರ್ಮಾಣ ಕಾಮಗಾರಿ, ವೈಟ್ ಟಾಪಿಂಗ್ ಕೆಲಸಗಳು ನಡೆಯುತ್ತಿವೆ.

ನಗರದ ಹೃದಯ ಭಾಗದಲ್ಲಿ ಇರುವ ಜೆ.ಸಿ ರಸ್ತೆಯಲ್ಲಿ ಕಳೆದ ಕೆಲ ತಿಂಗಳಿನಿಂದಲೂ ರಸ್ತೆ ಕಾಮಗಾರಿ ನಡೆಯುತ್ತಿದೆ. ಇದರಿಂದ ನಿತ್ಯ ಸಂಚರಿಸುವ ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣ ಆಗಿಬಿಟ್ಟಿಯತ್ತು. ಇದೀಗ ಈ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆ ಆಗಸ್ಟ್ 25ರಿಂದ 30ರ ವರೆಗೆ ಈ ರಸ್ತೆಯಲ್ಲಿ ಭಾರಿ ಗಾತ್ರದ ವಾಹನಗಳು ಸೇರಿದಂತೆ ಬಸ್ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಬೆಂಗಳೂರು ಪಶ್ಚಿಮ ವಲಯ ಸಂಚಾರಿ ಪೊಲೀಸರು ಈ ಬಗ್ಗೆ ಟ್ವೀಟ್ ಮಾಡಿದ್ದು, ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಜೆ.ಸಿ ರಸ್ತೆಯಲ್ಲಿ ಭಾರಿ ಗಾತ್ರದ ವಾಹನಗಳು ಸೇರಿದಂತೆ ಬಸ್ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಅಲ್ಲದೆ, ವಾಹನ ಸವಾರರಿಗೆ ಅನುಕೂಲ ಆಗುವಂತೆ ಪರ್ಯಾಯ ಮಾರ್ಗಗಳ ಬಗ್ಗೆ ಮಾಹಿತಿಯನ್ನು ಸಹ ನೀಡಿದ್ದಾರೆ.
ಯಾವ ವಾಹನಗಳಿಗೆ ನಿರ್ಬಂಧ?: ಜೆಸಿ ರಸ್ತೆ, ಮಿನರ್ವಾ ಸರ್ಕಲ್ ಕಡೆಗೆ ಭಾರಿ ಗಾತ್ರದ ವಾಹನಗಳು ಸೇರಿದಂತೆ ಬಸ್ಗಳಿಗೆ ನಿರ್ಬಂಧ ಹೇರಲಾಗಿದೆ. ಇನ್ನು ಪರ್ಯಾಯ ಮಾರ್ಗಗಳ ಬಗ್ಗೆ ನೋಡುವುದಾದ್ರೆ, ರಾಮ ಕೃಷ್ಣ ಆಶ್ರಮ, ಬುಲ್ ಟೆಂಪಲ್ ರಸ್ತೆ, ಚಾಮರಾಜ ಪೇಟೆ, ಗೂಡ್ ಶೆಡ್ ರಸ್ತೆ ಮಾರ್ಗವಾಗಿ ಮೆಜೆಸ್ಟಿಕ್ ಕಡೆಗೆ ಸಂಚರಿಸುವುದು.
ಕಲಾಸಿಪಾಳ್ಯ ಬಸ್ ನಿಲ್ದಾಣದಿಂದ ಕೆಆರ್ ರಸ್ತೆ, ಲಾಲ್ ಬಾಗ್ ವೆಸ್ಟ್ ಗೇಟ್, ಅಶೋಕ ಪಿಲ್ಲರ್ ಸಿದ್ಧಾರ ರಸ್ತೆ ಮಾರ್ಗವಾಗಿ ಹೊಸೂರು ರಸ್ತೆ ಸೇರುವುದು. ಹೊಸೂರು ರಸ್ತೆಯಿಂದ ಡಬಲ್ ರಸ್ತೆ ರಿಚ್ಮಂಡ್ ಸರ್ಕಲ್, ಹಡ್ನನ್ ಸರ್ಕಲ್, ಕೆ.ಜಿ. ರಸ್ತೆ ಮಾರ್ಗವಾಗಿ ಮೆಜೆಸ್ಟಿಕ್ ಕಡೆಗೆ ಸಚಾರ ಮಾಡಬಹುದು.
"Traffic Advisory" #ಸಂಚಾರಸಲಹೆ White tapping work is going on J C road @citymarkettrps@CPBlr@Jointcptraffic @BlrCityPolice @blrcitytraffic pic.twitter.com/l1ojNq3NiV
— DCP TRAFFIC WEST (@DCPTrWestBCP) August 24, 2025
ಪ್ರತಿನಿತ್ಯ ಜೆ.ಸಿ ರಸ್ತೆಯಲ್ಲಿ ಸಾವಿರಾರು ವಾಹನಗಳು ಸಂಚಾರ ಮಾಡುತ್ತಿದ್ದು, ಈ ಹಿನ್ನೆಲೆ ಕಾಮಗಾರಿ ವಿಳಂಬ ಆಗುತ್ತಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇದೀಗ ಇಲ್ಲಿನ ಸಂಚಾರ ದಟ್ಟಣೆಯಿಂದ ವಾಹನ ಸವಾರರು ಬೇಸತ್ತಿದ್ದಾರೆ. ಆದ್ದರಿಂದ ಕಾಮಗಾರಿಗೆ ವೇಗ ಕೊಟ್ಟು ಬೇಗ ಮುಗಿಸಿ ಎನ್ನುವುದು ವಾಹನ ಸವಾರರ ಆಗ್ರಹವಾಗಿದೆ. ಹೀಗೆ ಬೆಂಗಳೂರಿನಲ್ಲಿ ಯಾವುದಾದರೂ ಒಂದು ರಸ್ತೆಯಲ್ಲಿ ಕಾಮಗಾರಿ ಆರಂಭಿಸಿದರೆ, ವಾಹನ ಸವಾರರಿಗೆ ಪರದಾಟ ಕಟ್ಟಿಟ್ಟ ಬುತ್ತಿ ಎನ್ನುವಂತಾಗಿದೆ. ಅಷ್ಟರ ಮಟ್ಟಿಗೆ ಟ್ರಾಫಿಕ್ ಆಗಿ ವಾಹನ ಸವಾರರು ಪೇಚಾಡಿಕೊಂಡು ಮನೆಗೆ ತಲುಪುವಂತಾಗುತ್ತಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications