ಬೆಂಗಳೂರಲ್ಲಿ 7 ಖತರ್ನಾಕ್ ಬೈಕ್ ಕಳ್ಳರು ಅಂಧರ್, ಈ ಕಾರಣಕ್ಕೆ ಬೈಕ್ ಕಳ್ಳತನ ಮಾಡ್ತಿದ್ರಂತೆ
Bike Theft In Bengaluru: ಬೆಂಗಳೂರಲ್ಲಿ ದುಬಾರಿ ಬೈಕ್ ಗಳನ್ನು ಕಳ್ಳತನ ಮಾಡುವುದಕ್ಕೆ ಕೆಲವು ತಂಡಗಳೇ ಇವೆ. ಬೈಕ್ ಕೊಳ್ಳುವುದು ಅದನ್ನು ಓಡಿಸುವುದು ಎಂದರೆ ಯುವಕರ ಕನಸು. ಆದರೆ, ಹೊಸ ಬೈಕ್ಗಳನ್ನೇ ಟಾರ್ಗೆಟ್ ಮಾಡಿ ಕಳುವು ಮಾಡುತ್ತಿದ್ದ ಬೈಕ್ ಕಳ್ಳರನ್ನು ಬೆಂಗಳೂರಿನ ಪೊಲೀಸರು ಅಂಧರ್ ಮಾಡಿದ್ದಾರೆ. ಇದರಲ್ಲಿ ಹೊಸ ಮತ್ತು ಹಳೆಯ ಬೈಕ್ಗಳನ್ನು ತಮ್ಮ ಮೋಜು - ಮಸ್ತಿಗಾಗಿ ಕಳ್ಳತನ ಮಾಡುತ್ತಿದ್ದವರು ಇದ್ದಾರೆ.
ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಕಳ್ಳತನ ಮಾಡುವುದು ಹಾಗೂ ಬೈಕ್ ಕಳ್ಳತನ ಮಾಡುವುದು ಹೆಚ್ಚಾಗುತ್ತಲ್ಲೇ ಇದೆ. ಬೆಂಗಳೂರು ಪೊಲೀಸರು ಸಹ ಮಿಂಚಿನ ಕಾರ್ಯಾಚರಣೆಯನ್ನು ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಲ್ಲೇ ಇದ್ದಾರೆ. ಆದರೂ ಸಹ ಬೈಕ್ ಕಳ್ಳರ ಹಾವಳಿ ಕಡಿಮೆಯಾಗುತ್ತಿಲ್ಲ. ಇದೀಗ ಬೆಂಗಳೂರು ಪೊಲೀಸರು ಈ ರೀತಿ ಕಂಡ ಕಂಡವರ ಬೈಕ್ ಕದ್ದು ಮಜಾ ಮಡ್ತಿದ್ದ 7 ಜನರನ್ನು ಕಂಬಿ ಹಿಂದಕ್ಕೆ ಕಳುಹಿಸಿದ್ದಾರೆ.

ಬೆಂಗಳೂರಿನಲ್ಲಿ ಬೈಕ್ ಕಳವು ಮಾಡುತ್ತಿದ್ದ ಕಳ್ಳರನ್ನು ಹೇಗೆ ಬಂಧಿಸಲಾಯಿತು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ವಿವರಿಸಿದ್ದಾರೆ. ಬೆಂಗಳೂರಲ್ಲಿ ಬೈಕ್ ಕಳ್ಳರಿಗೆ ಬಲೆ ಬೀಸುವ ನಿಟ್ಟಿನಲ್ಲಿ ನಗರದಲ್ಲಿ ಸರಣಿ ಕಾರ್ಯಾಚರಣೆ ನಡೆಸಲಾಗಿದೆ. ನಗರದ ಮೂರು ವಿವಿಧ ಪೊಲೀಸ್ ಠಾಣೆಯ ಅಧಿಕಾರಿಗಳು ನಗರದಲ್ಲಿನ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳಿಗೆ ಸಬಂಧಿಸಿದಂತೆ 7 ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಎಲ್ಲೆಲ್ಲಿ ಬೈಕ್ ಕಳ್ಳರ ಬಂಧನ
ಬೆಂಗಳೂರಿನ ಸೋಲದೇವನಹಳ್ಳಿ ಠಾಣೆಯ ಪೊಲೀಸರು ಮೂವರು ಬೈಕ್ ಖದೀಮರನ್ನು ಬಂಧಿಸಿದ್ದು, ಅವರಿಂದ 17 ಲಕ್ಷ ರೂಪಾಯಿ ಮೌಲ್ಯದ 12 ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ. ಆ ಮೂಲಕ 6 ಪ್ರಕರಣಗಳನ್ನು ಬಗೆಹರಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ಮಾಹಿತಿ ನೀಡಿದ್ದಾರೆ. ಇದೇ ಮಾದರಿಯಲ್ಲಿ ಬ್ಯಾಡರಹಳ್ಳಿ ಠಾಣೆಯ ಪೊಲೀಸರು 2 ಆರೋಪಿಗಳನ್ನು ವಶಕ್ಕೆ ಪಡೆದಿದ್ದು, 5 ಪ್ರಕರಣಗಳಿಗೆ ಸಂಬಂಧಿಸಿದ 7 ಲಕ್ಷ ರೂಪಾಯಿ ಮೌಲ್ಯದ 10 ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ. ಇನ್ನು ಕೋಣನಕುಂಟೆ ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೇ 7 ಪ್ರಕರಣಗಳಿಗೆ ಸಂಬಂಧಿಸಿದ 5 ಲಕ್ಷ ರೂಪಾಯಿ ಮೌಲ್ಯದ 9 ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ತನಿಖೆ ಮುಂದುವರಿದಿದ್ದು ವಶಪಡಿಸಿಕೊಂಡ ವಾಹನಗಳ ಮಾಲೀಕರಿಗೆ ಕರೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬೈಕ್ ಕಳ್ಳರಿಗೆ ಪೊಲೀಸರು ಬಲೆ ಬೀಸಿದ್ದು ಹೇಗೆ ?
ವಾಹನ ಸವಾರರು ರಸ್ತೆಯ ಮುಂದೆ ಹಾಗೂ ಮನೆಯ ಮುಂದೆ ನಿಲ್ಲಿಸುತ್ತಿದ್ದ ಬೈಕ್ಗಳನ್ನೇ ಈ ಕಳ್ಳರು ಟಾರ್ಗೆಟ್ ಮಾಡುತ್ತಿದ್ದರು. ಬೈಕ್ ಕಳ್ಳರು ಕಳ್ಳತನ ಮಾಡುತ್ತಿದ್ದ ಬೈಕ್ಗಳಲ್ಲೇವು ಬಹುತೇಕ ದುಬಾರಿಯಾಗಿವೆ. ಈ ರೀತಿ ಬೈಕ್ ಕಳ್ಳತನ ಮಾಡುತ್ತಿದ್ದ ಕಳ್ಳರನ್ನು ಪತ್ತೆ ಹಚ್ಚುವುದಕ್ಕೆ ಸಹಕಾರಿಯಾಗಿದ್ದು, ಸಿಸಿಟಿವಿ ಕ್ಯಾಮೆರಾ ಹಾಗೂ ಸ್ಥಳೀಯರು ನೀಡಿದ ದೂರಿನ ಆಧಾರದ ಮೇಲೆ ಈ ಕಳ್ಳರನ್ನು ಬಂಧಿಸಲು ಸಾಧ್ಯವಾಗಿದೆ. ಕಳ್ಳರು ಸಿಸಿಟಿವಿ ಕ್ಯಾಮೆರಾ ಇಲ್ಲದ ರಸ್ತೆಗಳಲ್ಲಿ ಕಳ್ಳತನ ಮಾಡಿದ್ದಾರೆ. ಆದರೆ, ಸುತ್ತಮುತ್ತಲಿನ ರಸ್ತೆಗಳಲ್ಲಿ ಕ್ಯಾಮೆರಾ ಇದ್ದು, ಅದರಲ್ಲಿ ಸಂಗ್ರಹವಾದ ದೃಶ್ಯಗಳ ಮೂಲಕ ಬೈಕ್ ಕಳ್ಳರಿಗೆ ಬಲೆ ಬೀಸಲಾಗಿದೆ. ಬಂಧಿತರು ತಾವು ಮೋಜು - ಮಸ್ತಿ ಮಾಡುವ ಉದ್ದೇಶದಿಂದ ಬೈಕ್ ಕಳುವು ಮಾಡುತ್ತಿದ್ದದಾಗಿ ಹೇಳಿದ್ದಾರೆ.
-
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ











Click it and Unblock the Notifications