ಬೆಂಗಳೂರಲ್ಲಿ ಖಾಕಿ ಬಲೆಗೆ ಬಿದ್ರು ಖತರ್ನಾಕ್ ಕಳ್ಳರು, ಏನೇನು ಸಿಕ್ತು?
ಬೆಂಗಳೂರು, ಡಿಸೆಂಬರ್ 24: ಚಿರತೆ ಚರ್ಮ ಮಾರಾಟ, ದರೋಡೆ, ಸರಗಳ್ಳತನ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಈಶಾನ್ಯ ವಿಭಾಗದ ಐದು ಪ್ರಕರಣಗಳು ಮತ್ತು ಪಶ್ಚಿಮ ವಿಭಾಗದ 3 ಪ್ರಕರಣಗಳು ಒಟ್ಟು 8 ಪ್ರಕರಣಗಳು ಪತ್ತೆಯಾಗಿವೆ. ಮೋಸ ಪ್ರಕರಣದಲ್ಲಿ ಶ್ರೀನಾಥ್, ಇತರೆ ಕಳ್ಳತನ ಪ್ರಕರಣಗಳಲ್ಲಿ ಬಿಎನ್ ಕೃಷ್ಣ, ದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿ ಆತನಿಂದ 5.75 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿ
ಅನಿಲ್ ಕುಮಾರ್ ಅವರು ಕೊಟ್ಟ ದೂರಿನ ಮೇರೆಗೆ ಚಿನ್ನಾಭರಣ ದೋಚುತ್ತಿದ್ದ ಅನಿಲ್ ಹಾಗೂ ರಾಹುಲ್ ಇಬ್ಬರನ್ನು ಬಂಧಿಸಲಾಗಿದ್ದು ಅವರಿಂದ 30 ಲಕ್ಷ ಬೆಲೆ ಬಾಳುವ ಸುಂಆರು 1 ಕೆಜಿ ತೂಕದ ಒಡವೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವರ ಬಂಧನದಿಂದ ಈಶಾನ್ಯ ವಿಭಾಗದ 5 ಪ್ರಕರಣಗಳು ಪಶ್ಚಿಮ ವಿಭಾಗದ 3 ಪ್ರಕರಣಗಳು ಸೇರಿ ಒಟ್ಟು 8 ಪ್ರಕರಣಗಳು ಪತ್ತೆಯಾಗಿವೆ.

ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿ
ವಿದ್ಯಾರಣ್ಯಪುರ ವ್ಯಾಪ್ತಿಯಲ್ಲಿ ಸರಗಳ್ಳತನ ಮಾಡಿದ್ದ, ಮಂಜುನಾಥನನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ, ಇದರಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸಮೀಪಸಲ್ಲಿ ಕಳ್ಳತನ ಮಾಡಿದ್ದು ಬಹಿರಂಗವಾಗಿದೆ. ಆತನಿಂದ ಸುಮಾರು 50 ಲಕ್ಷ ಬೆಲೆ ಬಾಳುವ ಚಿನ್ನದ ಒಡವೆಗಳು ಮತ್ತು ಒಂದು ಸ್ವಿಫ್ಟ್ ಕಾರನ್ನು ವಶಪಡಿಸಿಕೊಂಡಿದ್ದಾರೆ. ಇದೇ ವ್ಯಾಪ್ತಿಯಲ್ಲಿ ಶಿವಾಜಿನಗರದ ಉಮರ್ ಅಹಮದ್, ಇರ್ಷಾದ್ ಅವರನ್ನು ಪೊಲೀಸರು ಬಂಧಿಸಿದ್ದು, 9 ಲಕ್ಷ ಬೆಲೆ ಬಾಳುವ 300 ಗ್ರಾಂ ಚಿನ್ನದೊಡವೆಗಳು, ಇರ್ಷಾದ್ ನಿಂದ 4 ಲಕ್ಷ ಬೆಲೆ ಬಾಳುವ 120 ಗ್ರಾಂ ಬೆಲೆ ಬಾಳುವ ಚಿನ್ನದೊಡವೆ ವಶಪಡಿಸಿಕೊಳ್ಳಲಾಗಿದೆ.

ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ
ಮಂಜುನಾಥ್ ಅವರು ನೀಡಿದ್ದ ದೂರಿನ ಮೇರೆಗೆ ಪೊಲೀಸರು ನಾರಾಯಣಸ್ವಾಮಿ, ಖತರ್ನಾಕ್ ಕಳ್ಳನನ್ನು ಬಂಧಿಸಿದ್ದು, 5 ಲಕ್ಷ ರೂ ಬೆಲೆ ಬಾಳುವ 230 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಚಿರತೆ ಚರ್ಮ ಮಾರಾಟಗಾರರ ಬಂಧನ
ಕೊಡಿಗೇಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಚಿರತೆ ಚರ್ಮವನ್ನು ಮಾರಾಟ ಮಾಡುತ್ತಿದ್ದ ಮೂರು ಜನರನ್ನು ಬಂಧಿಸಲಾಗಿದೆ. ಸುರೇಶ್, ಪಾಪಣ್ಣ, ಬಸವರಾಜ್ ಅವರನ್ನು ಬಂಧಿಸಲಾಗಿದೆ.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications