ಬೆಂಗಳೂರಲ್ಲಿ ಖಾಕಿ ಬಲೆಗೆ ಬಿದ್ರು ಖತರ್ನಾಕ್ ಕಳ್ಳರು, ಏನೇನು ಸಿಕ್ತು?
ಬೆಂಗಳೂರು, ಡಿಸೆಂಬರ್ 24: ಚಿರತೆ ಚರ್ಮ ಮಾರಾಟ, ದರೋಡೆ, ಸರಗಳ್ಳತನ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಈಶಾನ್ಯ ವಿಭಾಗದ ಐದು ಪ್ರಕರಣಗಳು ಮತ್ತು ಪಶ್ಚಿಮ ವಿಭಾಗದ 3 ಪ್ರಕರಣಗಳು ಒಟ್ಟು 8 ಪ್ರಕರಣಗಳು ಪತ್ತೆಯಾಗಿವೆ. ಮೋಸ ಪ್ರಕರಣದಲ್ಲಿ ಶ್ರೀನಾಥ್, ಇತರೆ ಕಳ್ಳತನ ಪ್ರಕರಣಗಳಲ್ಲಿ ಬಿಎನ್ ಕೃಷ್ಣ, ದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿ ಆತನಿಂದ 5.75 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿ
ಅನಿಲ್ ಕುಮಾರ್ ಅವರು ಕೊಟ್ಟ ದೂರಿನ ಮೇರೆಗೆ ಚಿನ್ನಾಭರಣ ದೋಚುತ್ತಿದ್ದ ಅನಿಲ್ ಹಾಗೂ ರಾಹುಲ್ ಇಬ್ಬರನ್ನು ಬಂಧಿಸಲಾಗಿದ್ದು ಅವರಿಂದ 30 ಲಕ್ಷ ಬೆಲೆ ಬಾಳುವ ಸುಂಆರು 1 ಕೆಜಿ ತೂಕದ ಒಡವೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವರ ಬಂಧನದಿಂದ ಈಶಾನ್ಯ ವಿಭಾಗದ 5 ಪ್ರಕರಣಗಳು ಪಶ್ಚಿಮ ವಿಭಾಗದ 3 ಪ್ರಕರಣಗಳು ಸೇರಿ ಒಟ್ಟು 8 ಪ್ರಕರಣಗಳು ಪತ್ತೆಯಾಗಿವೆ.

ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿ
ವಿದ್ಯಾರಣ್ಯಪುರ ವ್ಯಾಪ್ತಿಯಲ್ಲಿ ಸರಗಳ್ಳತನ ಮಾಡಿದ್ದ, ಮಂಜುನಾಥನನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ, ಇದರಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸಮೀಪಸಲ್ಲಿ ಕಳ್ಳತನ ಮಾಡಿದ್ದು ಬಹಿರಂಗವಾಗಿದೆ. ಆತನಿಂದ ಸುಮಾರು 50 ಲಕ್ಷ ಬೆಲೆ ಬಾಳುವ ಚಿನ್ನದ ಒಡವೆಗಳು ಮತ್ತು ಒಂದು ಸ್ವಿಫ್ಟ್ ಕಾರನ್ನು ವಶಪಡಿಸಿಕೊಂಡಿದ್ದಾರೆ. ಇದೇ ವ್ಯಾಪ್ತಿಯಲ್ಲಿ ಶಿವಾಜಿನಗರದ ಉಮರ್ ಅಹಮದ್, ಇರ್ಷಾದ್ ಅವರನ್ನು ಪೊಲೀಸರು ಬಂಧಿಸಿದ್ದು, 9 ಲಕ್ಷ ಬೆಲೆ ಬಾಳುವ 300 ಗ್ರಾಂ ಚಿನ್ನದೊಡವೆಗಳು, ಇರ್ಷಾದ್ ನಿಂದ 4 ಲಕ್ಷ ಬೆಲೆ ಬಾಳುವ 120 ಗ್ರಾಂ ಬೆಲೆ ಬಾಳುವ ಚಿನ್ನದೊಡವೆ ವಶಪಡಿಸಿಕೊಳ್ಳಲಾಗಿದೆ.

ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ
ಮಂಜುನಾಥ್ ಅವರು ನೀಡಿದ್ದ ದೂರಿನ ಮೇರೆಗೆ ಪೊಲೀಸರು ನಾರಾಯಣಸ್ವಾಮಿ, ಖತರ್ನಾಕ್ ಕಳ್ಳನನ್ನು ಬಂಧಿಸಿದ್ದು, 5 ಲಕ್ಷ ರೂ ಬೆಲೆ ಬಾಳುವ 230 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಚಿರತೆ ಚರ್ಮ ಮಾರಾಟಗಾರರ ಬಂಧನ
ಕೊಡಿಗೇಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಚಿರತೆ ಚರ್ಮವನ್ನು ಮಾರಾಟ ಮಾಡುತ್ತಿದ್ದ ಮೂರು ಜನರನ್ನು ಬಂಧಿಸಲಾಗಿದೆ. ಸುರೇಶ್, ಪಾಪಣ್ಣ, ಬಸವರಾಜ್ ಅವರನ್ನು ಬಂಧಿಸಲಾಗಿದೆ.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ












Click it and Unblock the Notifications