ಬೆಂಗಳೂರಲ್ಲಿ ಸರಗಳ್ಳತನ, ಉತ್ತರ ಭಾರತದ ಖದೀಮರ ಬಂಧನ
ಬೆಂಗಳೂರು, ನವೆಂಬರ್ 9: ಉದ್ಯೋಗ, ವ್ಯಾಪಾರ, ಉದ್ಯಮ ಹೀಗೆ ಉದ್ಯಾನ ನಗರಿಗೆ ಹಲವಾರು ಕಾರಣಗಳಿಗೆ ಉತ್ತರ ಭಾರತದ ಜನರು ವಲಸೆ ಬರುತ್ತಾರೆ. ಆದರೆ ಈ ಐವರು ಬಂದಿದ್ದು ಸರಗಳ್ಳತನಕ್ಕೆ. ಹೀಗೆ ಬೆಂಗಳೂರಿಗೆ ಬಂದ ಇವರನ್ನು ನಗರದ ಆಗ್ನೇಯ ವಿಭಾಗದ ಪೊಲೀಸರು ಈಗ ಕಂಬಿ ಹಿಂದೆ ಕಳುಹಿಸಿದ್ದಾರೆ.
ಸರಗಳ್ಳತನಕ್ಕೆ ಕುಖ್ಯಾತವಾಗಿರುವ ಭಾವರಿಯ ಗ್ಯಾಂಗ್ ನ ಐವರು ಸರಗಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂದರ್ಭ ಬಂಧಿತರು 30 ಪ್ರಕರಣಗಳಲ್ಲಿ ಪಾಲ್ಗೊಂಡಿರುವುದು ತಿಳಿದು ಬಂದಿದೆ. ಪೊಲೀಸರು ಬಂಧಿತರಿಂದ 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಭಾವರಿಯಾ ಎಂಬುದು ಒಂದು ಜಾತಿಯಾಗಿದ್ದು ಈ ಜನರು ಉತ್ತರದ ರಾಜ್ಯಗಳಲ್ಲಿ ವಾಸಿಸುತ್ತಾರೆ. ಇದೇ ಸಮುದಾಯದ ಒಂದಷ್ಟು ಕಳ್ಳರು ನಗರದ ಮಹಿಳೆಯರ ಪಾಲಿಗೆ ಸಿಂಹಸ್ವಪ್ನವಾಗಿದ್ದರು. ಹೀಗಾಗಿ ಈ ಸರಗಳ್ಳರ ಗ್ಯಾಂಗ್ ಗೆ ಭಾವರಿಯಾ ಎಂಬ ಹೆಸರು ಬಂದಿತ್ತು.
ಈ ಗ್ಯಾಂಗ್ ನ ಕಳ್ಳರು ಎಲ್ಲೆಂದರಲ್ಲಿ ನುಗ್ಗಿ ಮಹಿಳೆಯರ ಚಿನ್ನದ ಸರಗಳನ್ನು ಕಳ್ಳತನ ಮಾಡುತ್ತಿದ್ದರು. ಇದೀಗ ಈ ಗ್ಯಾಂಗ್ ಸರಗಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಇದರಿಂದ ಕೆಲವು ಪ್ರದೇಶಗಳ ಮಹಿಳೆಯರಾದರೂ ನಿರ್ಭೀತಿಯಿಂದ ಓಡಾಡುವಂತಾಗಿದೆ.
ಬಂಧಿತರಿಂದ ವಶಪಡಿಸಿಕೊಂಡ ಚಿನ್ನಾಭರಗಳನ್ನು ಪೊಲೀಸರು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಇದರಿಂದ ತಮ್ಮ ಅಮೂಲ್ಯ ದುಡಿಮೆಯ ಹಣದಲ್ಲಿ ಕೊಂಡುಕೊಂಡ ಸರಗಳನ್ನು ಕಳೆದುಕೊಂಡಿದ್ದ ಹೆಂಗಳೆಯರು ಅವುಗಳನ್ನು ಮರಳಿ ಪಡೆದಿದ್ದಾರೆ. ಮತ್ತು ಪೊಲೀಸರಿಗೆ ಧನ್ಯವಾದ ಸಮರ್ಪಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications