ಬೆಂಗಳೂರು ಪೊಲೀಸರಿಗೆ ಹದ್ದುಗಳನ್ನು ಪಳಗಿಸುವವರು ಬೇಕಂತೆ!
ಬೆಂಗಳೂರು ಫೆಬ್ರವರಿ 28: ನೀವು ಹದ್ದುಗಳನ್ನು ಪಳಗಿಸುವ ತರಬೇತುದಾರರಾಗಿದ್ದರೆ ಅಥವಾ ನಿಮಗೆ ಹದ್ದುಗಳನ್ನು ಪಳಗಿಸುವವರ ಪರಿಚಯ ಇದ್ದರೆ ಕೂಡಲೇ ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರನ್ನು ಸಂಪರ್ಕಿಸಬಹುದು.
Recommended Video
ಹೌದು, ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು, ಹದ್ದುಗಳನ್ನು ಪಳಗಿಸುವವರು ಬೇಕಾಗಿದ್ದಾರೆ ಎಂದು ಟ್ವೀಟ್ ಮಾಡಿ ಗಮನ ಸೆಳೆದಿದ್ದಾರೆ. ಭಾಸ್ಕರ್ರಾವ್ ಅವರು ''ಹದ್ದುಗಳ ತರಬೇತುದಾರರು ಬೇಕಾಗಿದ್ದಾರೆ. ಯಾರಾದರೂ ಇದ್ದಾರಾ ಅಥವಾ ಪರಿಚಯ ಇದ್ದರೆ ತಿಳಿಸಿ'' ಎಂದು ಟ್ವೀಟ್ ಮಾಡಿದ್ದಾರೆ.
ಇತ್ತೀಚಿನ ದಿನಗಳಲ್ಲಿನಗರದಲ್ಲಿ ಡ್ರೋನ್ಗಳ ಬಳಕೆ ಅತ್ಯಂತ ಸಾಮಾನ್ಯ ಎನ್ನುವಂತಾಗಿದೆ. ಕೆಲ ದೇಶಗಳಲ್ಲಿ ಅಪಾಯಕಾರಿ ಎನಿಸುವ ಡ್ರೋನ್ಗಳನ್ನು ಹೊಡೆದುರಳಿಸಲು ಹದ್ದುಗಳನ್ನು ಪಳಗಿಸಿ ತರಬೇತಿ ನೀಡಿ ಬಳಕೆ ಮಾಡುತ್ತಿದ್ದಾರೆ. ಆದರೆ, ಭಾರತದಲ್ಲಿ ಡ್ರೋನ್ಗಳು ಸಾರ್ವಜನಿಕರ ಭದ್ರತೆಗೆ ತೊಂದರೆ ಉಂಟು ಮಾಡುತ್ತವೆ. ಅದರಲ್ಲೂ ಗಣ್ಯರು, ರಾಜಕಾರಣಿಗಳು, ವಿವಿಐಪಿಗಳು ಆಗಮಿಸಿದ್ದ ಸಂದರ್ಭದಲ್ಲಿಡ್ರೋನ್ಗಳ ಬಳಕೆ ಭೀತಿ ಉಂಟು ಮಾಡುತ್ತವೆ.

ಡ್ರೋನ್ಗಳ ಮೂಲಕ ಕುಕೃತ್ಯಗಳನ್ನು ಎಸಗುವ ಸಾಧ್ಯತೆ ಇರುವ ಕಾರಣ ವಿವಿಐಪಿ ಪ್ರದೇಶದಲ್ಲಿ ಡ್ರೋನ್ ಕಾಣಿಸಿದರೆ ಹದ್ದುಗಳನ್ನು ಬಳಸಿ ಡ್ರೋನ್ಗಳನ್ನು ನೆಲಕ್ಕೆ ಕೆಡವಲು ಸಾಧ್ಯವಾಗುತ್ತದೆ ಎಂಬ ವಿಚಾರವನ್ನು ಪೊಲೀಸ್ ಆಯುಕ್ತರು ಹೊಂದಿದ್ದಾರೆ.
ಅನೇಕರು ಟ್ವೀಟ್ಗೆ ಪ್ರತಿಕ್ರಿಯಿಸಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧೆಡೆ ಮತ್ತು ದೇಶದ ಇತರ ನಗರಗಳಲ್ಲಿ ಹದ್ದು ತರಬೇತುದಾರರು, ಪಳಗಿಸುವವರಿದ್ದಾರೆಂದು ಸಾಕಷ್ಟು ಜನ ಮಾಹಿತಿ ನೀಡಿದ್ದಾರೆ. ಅಲ್ಲದೆ, ಅವರ ಸಂಪರ್ಕದ ಬಗ್ಗೆ ಮಾಹಿತಿ ಒದಗಿಸುವುದಾಗಿ ತಿಳಿಸಿದ್ದಾರೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ











Click it and Unblock the Notifications