Bengaluru Police: ಬೈಕ್ ವ್ಹೀಲಿಂಗ್ ಮಾಡುವವರಿಗೆ ಪೊಲೀಸರ ಎಚ್ಚರಿಕೆ
ಬೆಂಗಳೂರಿನಲ್ಲಿ ವ್ಹೀಲಿ ಮಾಡುವ ಪುಂಡರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೆಚ್ಚಿನ ವಾಹನ ಸಂಚಾರ ಇರುವ ರಸ್ತೆಗಳಲ್ಲಿ ಕೂಡ ಗುಂಪು ಗುಂಪಾಗಿ ವ್ಹೀಲಿಂಗ್ ಮಾಡುತ್ತಾ ಬೇರೆ ವಾಹನ ಸವಾರರಿಗೆ ಆತಂಕ ಮೂಡಿಸುತ್ತಿದ್ದಾರೆ. ನಗರದ ಟ್ರಾಫಿಕ್ ಪೊಲೀಸರು ಕೂಡ ವ್ಹೀಲಿ ಮಾಡುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಾ ಕಡಿವಾಣ ಹಾಕಲು ಪ್ರಯತ್ನಿಸುತ್ತಿದ್ದಾರೆ.
ಇತ್ತಿಚೆಗೆ ಬೆಂಗಳೂರು ನಗರ ಪೊಲೀಸರು ವಿಡಿಯೋವೊಂದನ್ನು ಹಂಚಿಕೊಂಡಿದ್ದು ವ್ಹೀಲಿಂಗ್ ಮಾಡುವವರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ನಗರದ ಜನನಿಬಿಡ ರಸ್ತೆಯಲ್ಲಿ ಅಪಾಯಕಾರಿ ಬೈಕ್ ಸ್ಟಂಟ್ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಈಗ ಆ ರೀತಿ ಸ್ಟಂಟ್ ಮಾಡಿದ್ದ ಪುಂಡರ ಗುಂಪನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ನಗರ ಪೊಲೀಸರು ಎಕ್ಸ್ನಲ್ಲಿ ಹಂಚಿಕೊಂಡಿರುವ ದೃಶ್ಯಾವಳಿಗಳು, ಅನೇಕ ಪುಂಟರು ಹೆಲ್ಮೆಟ್ ಇಲ್ಲದೆ ಸವಾರಿ ಮಾಡುವ ಮೂಲಕ ಇತರ ಪ್ರಯಾಣಿಕರಲ್ಲಿ ಆತಂಕ ಮೂಡಿಸುತ್ತಿರುವುದನ್ನು ನೋಡಬಹುದು.
ನಾವು ಸಿದ್ಧವಾಗಿದ್ದೇವೆ ಎಂದ ಪೊಲೀಸರು
"ನಗರದ ರಸ್ತೆಗಳಲ್ಲಿ ವ್ಹೀಲಿಂಗ್ ಮಾಡುತ್ತೀರಾ? ನಿಮ್ಮ ಸಾಹಸವನ್ನು ನಿಲ್ಲಿಸಲು ನಮ್ಮ ಅಧಿಕಾರಿಗಳು ಯಾವಾಗಲೂ ಸಿದ್ಧರಾಗಿದ್ದಾರೆ" ಎಂದು ಬೆಂಗಳೂರು ನಗರ ಪೊಲೀಸರು ಸ್ಟಂಟ್ ಮಾಡುವ ವ್ಯಕ್ತಿಗಳ ವೀಡಿಯೊವನ್ನು ಹಂಚಿಕೊಂಡಿದ್ದು, ವ್ಹೀಲಿಂಗ್ ಮಾಡಿದ ಪುಂಡರನ್ನು ಬಂಧಿಸಿರುವ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
Wheeling on city roads? Our officers are always ready to bring your adventure to a halt.#WeServeWeProtect pic.twitter.com/q8sXqDxJVY
— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) August 17, 2024
ಹೆಲ್ಮೆಟ್ ಹಾಕದೆ ವಾಹನ ಚಾಲನೆ ಮಾಡುವುದಲ್ಲದೆ, ಅಪಾಯಕಾರಿಯಾಗಿ ವ್ಹೀಲಿಂಗ್ ಮಾಡುತ್ತಾ ಅಡ್ಡಾದಿಡ್ಡಿ ವಾಹನ ಚಾಲನೆ ಮಾಡುವುದನ್ನು ನೋಡಬಹುದು. ಇದಕ್ಕೆ ಪೊಲೀಸರು ತ್ವರಿತವಾಗಿ ಕ್ರಮ ತೆಗೆದುಕೊಂಡಿದ್ದು, ಒಟ್ಟು 44 ಮಂದಿಯನ್ನು ಬಂಧಿಸಿದ್ದು, ಎಲ್ಲಾ ಸ್ಕೂಟರ್, ಬೈಕ್ಗಳನ್ನು ಜಪ್ತಿ ಮಾಡಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಈ ರೀತಿ ವ್ಹೀಲಿಂಗ್ ಮಾಡಿದ್ದು, ಘಟನೆಗೆ ಸಂಬಂಧಿಸಿದಂತೆ 33 ಪ್ರಕರಣಗಳು ದಾಖಲಿಸಲಾಗಿದೆ.
ಪೊಲೀಸರ ಕ್ರಮಕ್ಕೆ ಶ್ಲಾಘನೆ
ಹಲವು ನೆಟ್ಟಿಗರು ಪೊಲಿಸರ ಕ್ರಮವನ್ನು ಶ್ಲಾಘಿಸಿದ್ದಾರೆ. ಘಟನೆಗೆ ಸಂಬಂಧಪಟ್ಟಂತೆ ತುರ್ತಾಗಿ ಕ್ರಮ ತೆಗೆದುಕೊಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಪೊಲೀಸರು ಇನ್ನೂ ಕಠಿಣ ಕ್ರಮ ತೆಗೆದುಕೊಳ್ಳುವ ಬಗ್ಗೆ ಯೋಚಿಸಬೇಕು ಎಂದು ಸಲಹೆ ನೀಡಿದ್ದಾರೆ. ಪೊಲೀಸರು ಈಗ ಕ್ರಮ ತೆಗೆದುಕೊಳ್ಳುತ್ತಿದ್ದರು, ಇಂತಹ ಘಟನೆಗಳಿಗೆ ಕಡಿವಾಣ ಬೀಳುತ್ತಿಲ್ಲ, ಇನ್ನು ವಿಭಿನ್ನವಾಗಿ ಏನಾದರೂ ಮಾಡಬೇಕು ಎಂದು ಹೇಳಿದ್ದಾರೆ.
ಶನಿವಾರ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯ ಅಡಕಮಾರನಹಳ್ಳಿ ಬಳಿ ವೀಲಿಂಗ್ ಮಾಡುತ್ತಿದ್ದ ಪುಂಡರು, ಅಪಘಾತ ಮಾಡಿದ್ದರು. ಬಳಿಕ ಸಿಟ್ಟಿಗೆದ್ದ ವಾಹನ ಸವಾರರು, ಎರಡು ಬೈಕ್ಗಳನ್ನು ಫ್ಲೈಓವರ್ ನಿಂದ ಕೆಳಗೆ ಬಿಸಾಕಿದ್ದರು. ಈ ವಿಡಿಯೋ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದೆ.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
CBSE 10ನೇ ತರಗತಿ ಫಲಿತಾಂಶ 2026: ದಕ್ಷಿಣ ಭಾರತದ ವಿದ್ಯಾರ್ಥಿಗಳದ್ದೇ ಮೇಲುಗೈ, ಶೇ. 98.91ರಷ್ಟು ಸಾಧನೆ ಮಾಡಿದ ಬೆಂಗಳೂರು -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್











Click it and Unblock the Notifications