ಸಿದ್ದರಾಮಯ್ಯ, ಗುಲಾಂ ನಬಿ ಆಜಾದ್ ಪೊಲೀಸರ ವಶಕ್ಕೆ
ಬೆಂಗಳೂರು, ಜುಲೈ 10: ಬಿಜೆಪಿ ಆಪರೇಷನ್ ಕಮಲ ವಿರುದ್ಧ ರಾಜಭವನದ ಬಳಿ ಪ್ರತಿಭಟನೆ ಮಾಡುತ್ತಿದ್ದ ಕಾಂಗ್ರೆಸ್ ಹಿರಿಯ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅತ್ತ ಮುಂಬೈನಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಇತರ ಶಾಸಕರನ್ನು ವಶಕ್ಕೆ ಪಡೆಯುತ್ತಿದ್ದಂತೆ ಇಲ್ಲಿ ಕರ್ನಾಟಕದಲ್ಲಿ ಸಿದ್ದರಾಮಯ್ಯ, ಗುಲಾಂ ನಬಿ ಆಜಾದ್, ಕೆ.ಸಿ.ವೇಣುಗೋಪಾಲ್, ದಿನೇಶ್ ಗುಂಡೂರಾವ್, ಈಶ್ವರ್ ಖಂಡ್ರೆ ಇತರೆ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಡಿಕೆ ಶಿವಕುಮಾರ್ ಮುಂಬೈ ಪೊಲೀಸರ ವಶಕ್ಕೆ Live Updates
ಪ್ರತಿಭಟನೆಯಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡ ಅವರು ಸಹ ಭಾಗವಹಿಸಿದ್ದರು, ಈ ಸಮಯ ಮಾತನಾಡಿದ ಅವರು, ಬಿಜೆಪಿಯು ಹಣದ ಬಲದಿಂದ ಸರ್ಕಾರವನ್ನು ಉರುಳಿಸುವ ಪ್ರಯತ್ನ ಮಾಡುತ್ತಿದೆ ಎಂದರು.
ಸಿದ್ದರಾಮಯ್ಯ ಅವರು ಮಾತನಾಡಿ, ಬಿಜೆಪಿಯೇ ಶಾಸಕರನ್ನು ಕರೆದುಕೊಂಡು ಹೋಗಿ ಹೊಟೆಲ್ನಲ್ಲಿ ಇರಿಸಿದೆ, ನಮ್ಮ ಶಾಸಕರನ್ನು ನಾವೇ ಸಂಪರ್ಕ ಮಾಡಲು ಬಿಡುತ್ತಿಲ್ಲ, ಆದರೂ ಬಿಜೆಪಿ ಹೇಳುತ್ತಿದೆ, ನಾವು ಆಫರೇಷನ್ ಕಮಲ ಮಾಡಿಲ್ಲವೆಂದು ಇದನ್ನು ನಾವು ನಂಬಬೇಕಾ? ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.