ಹೊಸ ವರ್ಷಾಚರಣೆಗೆ ಪಾರ್ಟಿಗೆ ಹೋಗುವವರಿಗೆ ಕೆವೈಸಿ ಕಡ್ಡಾಯಗೊಳಿಸಿದ ಪೊಲೀಸರು
ಬೆಂಗಳೂರು, ಡಿಸೆಂಬರ್ 28: ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಅವರು ನಗರದ ಎಲ್ಲಾ ರೆಸ್ಟೋರೆಂಟ್ಗಳು, ಕ್ಲಬ್ಗಳು ಮತ್ತು ಇತರ ಪಾರ್ಟಿ ಸ್ಥಳಗಳಿಗೆ ಹೊಸ ವರ್ಷದ ಸಂಭ್ರಮಾಚರಣೆಯ ಸಮಯದಲ್ಲಿ ಎಲ್ಲಾ ಮಾಲೀಕರಿಗೆ ಗ್ರಾಹಕರನ್ನು ತಿಳಿದುಕೊಳ್ಳಿ (ಕೆವೈಸಿ) ಮಾಹಿತಿಯನ್ನು ಸಂಗ್ರಹಿಸಲು ಸೂಚಿಸಿದ್ದಾರೆ.
ಹೊಸ ವರ್ಷಾಚರಣೆಯ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಸುರಕ್ಷೆತೆಯ ದೃಷ್ಟಿಯಿಂದ ಹೊಸ ವರ್ಷದ ಸಂಭ್ರಮದಲ್ಲಿ ಭಾಗವಹಿಸಲು ಇತರ ರಾಜ್ಯಗಳಿಂದ ಗಮನಾರ್ಹ ಸಂಖ್ಯೆಯ ಜನರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಈ ಗ್ರಾಹಕರ ಹಿನ್ನೆಲೆಯನ್ನು ಕಂಡುಹಿಡಿಯುವುದು ಮುಖ್ಯವಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ಬ್ರಿಗೇಡ್ ರಸ್ತೆ, ಎಂಜಿ ರಸ್ತೆ, ಚರ್ಚ್ ಸ್ಟ್ರೀಟ್, ಕೋರಮಂಗಲ, ಇಂದಿರಾನಗರ ಮತ್ತು ಇತರ ಜನಪ್ರಿಯ ಸ್ಥಳಗಳಲ್ಲಿ ಹಲವಾರು ಹೊಸ ವರ್ಷದ ಪಾರ್ಟಿಗಳು ನಡೆಯಲಿದೆ. ಪಾರ್ಟಿಗಳ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಲ್ಲಿ ಕೆವೈಸಿ ಮಾಹಿತಿಯು ಪೊಲೀಸರು ಮತ್ತು ಸಂಸ್ಥೆಗಳಿಗೆ ಸಹಾಯಕವಾಗಿರುತ್ತದೆ. ಬೆಂಗಳೂರು ಪೊಲೀಸರ ಈ ಕ್ರಮವು ಆಚರಣೆಯ ಸಮಯದಲ್ಲಿ ಯಾವುದೇ ಅನಾಹುತವನ್ನು ತಡೆಗಟ್ಟುವ ಗುರಿಯನ್ನು ಹೊಂದಿದೆ. ಅನಾಹುತಕಾತಿ ವ್ಯಕ್ತಿಗಳು ಮದ್ಯ ಸೇವಿಸುವ ಪಾರ್ಟಿಗಳಿಗೆ ಹಾಜರಾಗುವುದನ್ನು ತಡೆಯುತ್ತದೆ.
ಬೆಂಗಳೂರಿನಲ್ಲಿ ಹೊಸ ವರ್ಷದ ಪಾರ್ಟಿ ನಿಯಮಗಳು:
ನಗರದ ಎಲ್ಲಾ ಹೋಟೆಲ್ಗಳು, ಕ್ಲಬ್ಗಳು ಮತ್ತು ಪಬ್ಗಳು ಬರುವವರ ಹೆಸರುಗಳು, ವಯಸ್ಸು ಮತ್ತು ಫೋನ್ ಸಂಖ್ಯೆಗಳು ಸೇರಿದಂತೆ ಗ್ರಾಹಕರ ವಿವರಗಳ ವಿವರವಾದ ದಾಖಲೆಯನ್ನು ಸಂಗ್ರಹಿಸಲು ತಿಳಿಸಲಾಗಿದೆ. ಗ್ರಾಹಕರ ಸುರಕ್ಷತೆಯ ದೃಷ್ಟಿಯಿಂದ ನಗರ ಪೊಲೀಸರು ಎಲ್ಲಾ ಆತಿಥ್ಯ ಸಂಸ್ಥೆಗಳಿಗೆ ಕಟ್ಟುನಿಟ್ಟಾದ ಮಾರ್ಗಸೂಚಿಗಳನ್ನು ನೀಡಿದ್ದಾರೆ. ಅಂತಹ ಸ್ಥಳಗಳು ಸಂದರ್ಶಕರ ಸಂಪರ್ಕ ಸಂಖ್ಯೆಗಳಂತಹ ವಿವರಗಳನ್ನು ಕೇಳಬೇಕು ಮತ್ತು ಮಿಸ್ಡ್ ಕಾಲ್ ಮೂಲಕ ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು. ಇದರ ಜೊತೆಗೆ ಎಲ್ಲಾ ಪ್ರಮುಖ ಸ್ಥಳಗಳಲ್ಲಿ ಉತ್ತಮ ಗುಣಮಟ್ಟದ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಮತ್ತು ಬೌನ್ಸರ್ ಅಥವಾ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ತಿಳಿಸಿದೆ.
ರಾತ್ರಿ 1 ಗಂಟೆಯವರೆಗೆ ಒಪನ್:
ಪೊಲೀಸ್ ಮಾರ್ಗಸೂಚಿಗಳ ಪ್ರಕಾರ, ಹೊಸ ವರ್ಷದ ಆಚರಣೆಗಾಗಿ ನಗರದ ಹೋಟೆಲ್ಗಳು, ಕ್ಲಬ್ಗಳು ಮತ್ತು ಪಬ್ಗಳಂತಹ ಪಾರ್ಟಿ ಸ್ಥಳಗಳು ಬೆಳಗಿನ ಜಾವ 1 ಗಂಟೆಯವರೆಗೆ ಕಾರ್ಯನಿರ್ವಹಿಸಬಹುದು. ಇದೇ ವೇಳೆ ಮದ್ಯದಂಗಡಿಗಳು ರಾತ್ರಿ 11 ಗಂಟೆಯವರೆಗೆ ತೆರೆದಿರಲು ಅನುಮತಿ ನೀಡಲಾಗಿದೆ. ಪಾರ್ಟಿ ಸ್ಥಳಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಪ್ರಮುಖ ಜನಸಂದಣಿಯನ್ನು ಗಮನದಲ್ಲಿಟ್ಟುಕೊಂಡು, ಬೆಂಗಳೂರು ಪೊಲೀಸರು ಕುಡಿದು ವಾಹನ ಚಲಾಯಿಸುವವರ ಮೇಲೆ ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ. ನಗರದ ಪ್ರಮುಖ ಪ್ರದೇಶಗಳಲ್ಲಿ ಕಟ್ಟುನಿಟ್ಟಾದ ಸಂಚಾರ ನಿರ್ಬಂಧಗಳನ್ನು ವಿಧಿಸಿದ್ದಾರೆ. ಇದಲ್ಲದೆ, 'ಡ್ರಿಂಕ್ ಅಂಡ್ ಡ್ರೈವ್' ವಿರುದ್ಧ ನಗರದಾದ್ಯಂತ ಅಭಿಯಾನವನ್ನು ಸಹ ಪ್ರಾರಂಭಿಸಲಾಗಿದೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications